crime

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 08. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಮೇಗಿನಪೇಟೆ ನಿವಾಸಿ ಗುರುವಪ್ಪರವರ ಪುತ್ರ, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.ಪ್ರಶಾಂತ್‌ ರವರು ಶುಕ್ರವಾರದಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯರು ಬಂದು ನೋಡಿದಾಗ ಮನೆಯೊಳಗಡೆ ಪ್ರಶಾಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ […]

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 05. ಹುಡುಗಿಯ ಹೆಸರಿನಲ್ಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ಹಣ ಪಡೆದು ಬಳಿಕ ವಂಚಿಸಿರುವ ಕುರಿತು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್‌ ಸ್ಟಾಗ್ರಾಂ ಖಾತೆಯ ಮೂಲಕ ಪರಿಚಯ ಮಾಡಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತನ್ನ ಹೆಸರು ನಿಹಾರಿಕಾ (nihari-kaaa) ಎಂದು ಪರಿಚಯಿಸಿಕೊಂಡಿದ್ದು, ಬೇಕರಿಯಲ್ಲಿ ತಾಯಿಯ ಬ್ಯಾಂಕ್ ಖಾತೆಯಿಂದ ಹಣ ಪಾವತಿಸಲು ಅಸಾಧ್ಯವಾಗಿರುವುರಿಂದ 3800 ರೂ. ವರ್ಗಾಯಿಸುವಂತೆ ಕ್ಯೂಆರ್‌ ಕೋಡ್ ಕಳುಹಿಸಿದ್ದ. ಅದನ್ನು ನಂಬಿದ ಫಿರ್ಯಾದಿದಾರರು ಹಣ ಪಾವತಿಸಿದ್ದರು. ಬಳಿಕ ತಾನು

ಮಂಗಳೂರು: ಹುಡುಗಿ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜು. 05. ಮನೆ ಸಂಪರ್ಕದ ಮೋರಿ ದಾಟುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಇವರು, ಮಂಗಳವಾರದಂದು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮನೆ ಸಂಪರ್ಕದ ಮೋರಿ ದಾಟುತ್ತಿದ್ದಾಗ

ಉಳ್ಳಾಲ: ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು.04. ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಸಕ್ರೆಬೈಲು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ತನ್ನ ಸಂಬಂಧಿಗಳ ಜೊತೆಗೆ ಶಿವಮೊಗ್ಗಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಜು. 04. ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರದಂದು ಸಂಜೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿ, ಆತ ಓಡಲು ಪ್ರಾರಂಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ಘಟನೆಯಿಂದ ಕೃಷ್ಣನ ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ವ್ಯಕ್ತಿಯೋರ್ವನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ಕಿಲ್ಲೆ ಮೈದಾನದ ಪುರಭವನದ ಬಳಿ ಸಂಭವಿಸಿದೆ. ಬಂಧಿತನನ್ನು ಕೆಯ್ಯೂರು ಕಟ್ಟತ್ತಾರು ನಿವಾಸಿ ಮಹಮ್ಮದ್ ಅಶ್ರಫ್(31) ಎಂದು ಗುರುತಿಸಲಾಗಿದೆ. ಈತ ಕಿಲ್ಲೆ ಮೈದಾನದ ಪುರಭವನದ ಬಳಿ ಮಾದಕ ವಸ್ತು ಸೇವಿಸಿ ನಶೆಯಲ್ಲಿರುವ ಕುರಿತು ಬಂದ ಮಾಹಿತಿಯಂತೆ ಪುತ್ತೂರು ನಗರ ಠಾಣಾ ಎಸ್.ಐ ಶ್ರೀಕಾಂತ್ ರಾಥೋಡ್ ಅವರು ಆರೋಪಿಯನ್ನು ವಿಚಾರಿಸಿ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ

ಪುತ್ತೂರು: ಮಾದಕ ವಸ್ತು ಸೇವಿಸಿ ಅಮಲಿನಲ್ಲಿದ್ದ ವ್ಯಕ್ತಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ಗೆಲ್ಲನ್ನು ತೆರವು ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್‌ ಉಂಟಾಗಿ ವ್ಯಕ್ತಿಯೋರ್ವರು ಗಾಯಗೊಂಡಿರುವ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ಮೂಲದ ರವೀಂದ್ರ(30) ಎಂದು ಗುತುತಿಸಲಾಗಿದೆ. ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಮರದ ಗೆಲ್ಲೊಂದು ಬಿದ್ದ ಪರಿಣಾಮ ಟ್ರಿಪ್ ಆಗಿದ್ದರಿಂದ ಸ್ಥಳಕ್ಕೆ ತೆರಳಿದ್ದ ರವೀಂದ್ರ ಅವರು ಕೊಕ್ಕೆಯ ಸಹಾಯದಿಂದ ವಿದ್ಯುತ್ ತಂತಿ ಮೇಲಿದ್ದ ಗೆಲ್ಲು ತೆರವುಗೊಳಿಸುತ್ತಿದ್ದ ವೇಳೆ

ಕೊಯಿಲ: ಮರದ ಕೊಂಬೆ ತೆರವು ವೇಳೆ ವಿದ್ಯುತ್ ಶಾಕ್- ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಕಾಲೇಜು ವಿದ್ಯಾರ್ಥಿಯೋರ್ವನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಸವೇಶ್ವರನಗರದ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಕೊಲೆಯಾದ ವಿದ್ಯಾರ್ಥಿಯನ್ನು ಸುಹೇಲ್ (17) ಎಂದು ಗುರುತಿಸಲಾಗಿದೆ. ಡ್ಯಾನ್ಸ್‌ ಮಾಡುವ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ನಡುವೆ ಜಗಳ ಉಂಟಾಗಿ ಈ ಕೊಲೆ ನಡೆದಿದೆ ಎಂದೆನ್ನಲಾಗಿದೆ. ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಸುಹೇಲ್‌ನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಯಿತಾದರೂ, ಆತ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಚೂರಿಯಿಂದ ಇರಿದು ವಿದ್ಯಾರ್ಥಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top