crime

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 03. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಯುವಕ ತಂದೆ, ತಾಯಿ ಹಾಗೂ 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ. ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ […]

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 03. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಸಾವಿರಾರು ರೂ. ನಗದು ಕದ್ದೊಯ್ದ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿಂದ ವರದಿಯಾಗಿದೆ. ಅಡ್ಕಾರು ನಿವಾಸಿ ಮುಹಮ್ಮದ್ ನಜೀಬ್ ಅವರು ಜು. 01ರಂದು ಸಂಜೆ ತಮ್ಮ ಹೆಂಡತಿಯ ತವರು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರೆನ್ನಲಾಗಿದೆ. ಮರುದಿನ ಜು. 02ರಂದು ಬೆಳಿಗ್ಗೆ ಪುತ್ತೂರಿನಿಂದ ಮರಳಿ ಮನೆಗೆ ಬಂದಾಗ ಮನೆಯ ಬಾಗಿಲಿನ ಲಾಕ್ ಮುರಿದಿದ್ದು,

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ

➤ ಚಾಲಕ ಪವಾಡಸದೃಶ ಪಾರು (ನ್ಯೂಸ್ ಕಡಬ) newskadaba.com ವಿಟ್ಲ, ಜು. 03. ವಿದ್ಯುತ್ ಕಂಬವೊಂದಕ್ಕೆ ಕಾರು ಢಿಕ್ಕಿ ಹೊಡೆದು, ಚಾಲಕ ಪವಾಡಸದೃಶ ಪಾರಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ ರಭಸಕ್ಕೆ ಹೊಂಡದಲ್ಲಿದ್ದ ವಿದ್ಯುತ್ ಕಂಬ ಮೇಲಕ್ಕೆದ್ದು, ಕಾರಿನ ಮೇಲೆಯೇ ಮುರಿದು ಬಿದ್ದಿದೆ. ಚಾಲಕ ಯಾವುದೇ ಅಪಾಯವಿಲ್ಲದೇ ಪವಾಡ ಸದೃಶ ಪಾರಾಗಿದ್ದಾರೆ ಎನ್ನಲಾಗಿದೆ.

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ

➤ ಉಪನ್ಯಾಸಕಿಯ ವಿರುದ್ದ ಪ್ರತಿಭಟನೆ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 03. ಶಿಕ್ಷಕಿಯೋರ್ವರು ವಿದ್ಯಾರ್ಥಿಯೋರ್ವನ ಮೇಲೆ ಸುಳ್ಳು ಆರೋಪ ಹೊರಿಸಿ ಪೋಲೀಸರಿಗೆ ದೂರು ನೀಡಿದ್ದಾರೆಂದು ಪೆರುವಾಜೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಉಪನ್ಯಾಸಕಿಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ದೀಕ್ಷಿತ್ ಎಂಬ ವಿದ್ಯಾರ್ಥಿ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ನಾಯಕ್ ಅವರು ದೂರು ನೀಡಿದ್ದು, ಇದು ಸುಳ್ಳು ಎಂದು ಖಂಡಿಸಿರುವ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ Read More »

ಕರಾವಳಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು

➤ ಫೈಲಟ್ ಗಳಿಬ್ಬರ ದುರ್ಮರಣ (ನ್ಯೂಸ್ ಕಡಬ) newskadaba.com ಬೊಗೋಟಾ, ಜೂ. 03. ಕೊಲಂಬಿಯ ವಾಯುಪಡೆಯ 2 ಯುದ್ಧ ವಿಮಾನಗಳು ಹಾರಾಟದ ಸಂದರ್ಭದಲ್ಲಿ ಆಕಾಶದಲ್ಲೇ ಒಂದಕ್ಕೊಂದು ಡಿಕ್ಕಿ ಹೊಡೆದು ಹೊತ್ತಿ ಉರಿದು ಪತನಗೊಂಡಿದ್ದು, ಪರಿಣಾಮ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಿಯಾಯ್‌ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಈ ಯುದ್ಧ ವಿಮಾನಗಳು ಭಾಗವಹಿಸಿದ್ದು, ವೃತ್ತಾಕಾರದಲ್ಲಿ ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿ, ಬಳಿಕ ಕೆಲವೇ ಸೆಕೆಂಡ್ ಗಳಲ್ಲೇ ಆಕಾಶದಲ್ಲಿ

ಆಕಾಶದಲ್ಲೇ ಢಿಕ್ಕಿ ಹೊಡೆದು ಹೊತ್ತಿ ಉರಿದ ಯುದ್ದ ವಿಮಾನಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ವಿಟ್ಲ: ಆಟೋರಿಕ್ಷಾ ಪಲ್ಟಿ

➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ

ವಿಟ್ಲ: ಆಟೋರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಸುರತ್ಕಲ್ ಪೊಲೀಸರು  ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸುರತ್ಕಲ್ ಕೃಷ್ಣಾಪುರದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಉಳ್ಳಾಲದ ಕೋಡಿಯ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 12,48,550 ರೂ.ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂ.ಮೌಲ್ಯದ ದ್ವಿಚಕ್ರ ವಾಹನಗಳನ್ನು

ದ.ಕ/ಉಡುಪಿ: ಉಭಯ ಜಿಲ್ಲೆಗಳ ವಿವಿಧೆಡೆ ಕಳ್ಳತನದ ಮಾಡುತ್ತಿದ್ದ ಕುಖ್ಯಾತ ಆರೋಪಿಗಳ ಸೆರೆ ➤ 13.82 ಲಕ್ಷ ರೂ.ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಬಿದ್ದ ಮದುವೆ ಮನೆಯ ಪೆಂಡಲ್ ➤ 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜೂ. 26. ಭಾರೀ ಮಳೆ ಮತ್ತು ಬಿರುಸಿನ ಗಾಳಿಯಿಂದಾಗಿ ಪೆಂಡಾಲ್ ಕುಸಿದು ಬಿದ್ದು ಮದುವೆಯಲ್ಲಿ ಭಾಗವಹಿಸಿದ್ದ ಎಂಟು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಾಮೋಹ್‌ ನಲ್ಲಿ ನಡೆದಿದೆ. ಅಧಿಕಾರಿಗಳ ಪ್ರಕಾರ, ಭಾನುವಾರದಂದು ರಾತ್ರಿ ಭಾರೀ ಮಳೆ, ಗಾಳಿಯಿಂದಾಗಿ ದಾಮೋಹ್‌ ನಲ್ಲಿ ಪೆಂಡಾಲ್ ಕುಸಿದು  ಬಿದ್ದು ಸುಮಾರು 8 ಜನರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಗಂಭೀರ ಸ್ಥಿತಿಯಲ್ಲಿದ್ದು, ಅವರನ್ನು ಜಬಲ್‌ ಪುರಕ್ಕೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ಭಾರೀ ಮಳೆಗೆ ಬಿದ್ದ ಮದುವೆ ಮನೆಯ ಪೆಂಡಲ್ ➤ 8 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಹೃದಯಾಘಾತ- ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 26. ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ ಭಾಸ್ಕರ ಗೌಡ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಾತ್ರಿ10 ಗಂಟೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಹೃದಯಾಘಾತ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ವಿದ್ಯುತ್‌ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಇವರು ಭೋಪಾಲ್‌ಗೆ ಹೋಗಲೆಂದು ತನ್ನ ಸಹೋದರಿ ಮತ್ತು ಮೂವರು ಮಕ್ಕಳೊಂದಿಗೆ ನವದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದು, ಈ ವೇಳೆ ಮಳೆ ಬರುತ್ತಿದ್ದರಿಂದ ಆಧಾರವಾಗಿ ವಿದ್ಯುತ್‌ ಕಂಬವನ್ನು ಹಿಡಿದಿದ್ದರು. ಈ ವೇಳೆ ಕಂಬದಿಂದ ಸಾಕ್ಷಿ ಅವರಿಗೆ ವಿದ್ಯುತ್‌ ಪ್ರವಹಿಸಿದೆ. ತಕ್ಷಣವೇ ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಸಾಕ್ಷಿ ಮೃತಪಟ್ಟಿದ್ದರು

ವಿದ್ಯುತ್ ಶಾಕ್- ಮಹಿಳೆ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top