crime

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್ (40) ಎಂದು ಗುರುತಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿಬಂದ ಖಚಿತ […]

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 12. ಮಾವಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಕೊಳಂಗಾಯ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕೇಶವ ಕೆ.ಕೆ. ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದಲ್ಲಿರುವ ಮಾವಿನ ಮರದಿಂದ ಮಾವಿನಕಾಯಿ ಕೊಯ್ಯುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಜೂ. 10. ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟಿದ್ದ ಹಣ್ಣೊಂದು ಆಕಸ್ಮಿಕವಾಗಿ ತಿಂದು ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಯುವತಿಯನ್ನು ಎಚ್.ಐಶ್ವರ್ಯಾ (21) ಎಂದು ಗುರುತಿಸಲಾಗಿದೆ. ಐಶ್ವರ್ಯಾಳ ಮನೆಯಲ್ಲಿ ಇಲಿಗಳ ಕಾಟ ವಿಪರೀತವಾಗಿದ್ದರಿಂದ ಅವುಗಳನ್ನು ಸಾಯಿಸುವ ಉದ್ದೇಶದಿಂದ ಮನೆಯವರು ಹಣ್ಣೊಂದಕ್ಕೆ ಇಲಿ ಪಾಷಾಣ ಸವರಿ ಇಟ್ಟಿದ್ದು, ಇದನ್ನು ತಿಳಿಯದ ಐಶ್ವರ್ಯಾ ಅದನ್ನು ತಿಂದಿದ್ದಾರೆ ಎನ್ನಲಾಗಿದೆ. ಹಣ್ಣು ತಿಂದ ಕೂಡಲೇ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಐಶ್ವರ್ಯಾರನ್ನು

ಇಲಿ ಪಾಷಾಣ ಸವರಿಟ್ಟಿದ್ದ ಹಣ್ಣು ತಿಂದು ಯುವತಿ ಮೃತ್ಯು..! Read More »

ಕರಾವಳಿ

ಉಳ್ಳಾಲ: ಯುವತಿಯ ಮಾನಭಂಗಕ್ಕೆ ಯತ್ನ ➤ ಉ.ಪ್ರದೇಶದ ಕಾರ್ಮಿಕನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 10. ಕೆಲಸದಿಂದ ಹಿಂತಿರುಗುತ್ತಿದ್ದ ಯುವತಿ ಮೇಲೆ ಹೊರರಾಜ್ಯದ ಕಾರ್ಮಿಕನೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ತಲಪಾಡಿಯಲ್ಲಿ ಸಂಭವಿಸಿದೆ. ಆರೋಪಿಯನ್ನು ಉತ್ತರಪ್ರದೇಶ ಮೂಲದ ರಾಮು ಕೆ. ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಮಂಗಳೂರಿಗೆ ಕೆಲಸಕ್ಕೆ ತೆರಳಿ ಮನೆಗೆ ವಾಪಸ್ಸಾಗುತ್ತಿದ್ದ ಸಂದರ್ಭ ದಾರಿಮಧ್ಯೆ ಆರೋಪಿಯು ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಘಟನೆಯಿಂದ ಹೆದರಿದ ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಓಡಿಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ

ಉಳ್ಳಾಲ: ಯುವತಿಯ ಮಾನಭಂಗಕ್ಕೆ ಯತ್ನ ➤ ಉ.ಪ್ರದೇಶದ ಕಾರ್ಮಿಕನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜೂ. 09. ಫೋನ್ ಸಂಭಾಷಣೆ ಮೂಲಕ ಬಾಂಬ್ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿಯ ಇಂದಿರಾಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಆರೋಪಿ ಉತ್ತರ ಪ್ರದೇಶದ ಪಿಲಿಭಿತ್ ನಿವಾಸಿ ಅಝೀಂ ಖಾನ್ ಎಂಬಾತ ವಿಸ್ತಾರಾ ವಿಮಾನ ಸಂಖ್ಯೆ ಯುಕೆ-941 ರಲ್ಲಿ ದುಬೈಗೆ ಪ್ರಯಾಣಿಸುತ್ತಿದ್ದು, ಫೋನಿನ ಮೂಲಕ ಬಾಂಬ್ ಕುರಿತು ಮಾತನಾಡುತ್ತಿದ್ದನು. ಇದನ್ನು ಕೇಳಿಸಿಕೊಂಡ ಮಹಿಳೆಯೊಬ್ಬರು ತಕ್ಷಣ ವಿಮಾನದಲ್ಲಿದ್ದ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ

ವಿಮಾನದಲ್ಲಿ ಕುಳಿತು ಫೋನ್ ಸಂಭಾಷಣೆಯಲ್ಲಿ ‘ಬಾಂಬ್’ ಬಗ್ಗೆ ಚರ್ಚೆ ➤ ವ್ಯಕ್ತಿ ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜೂ. 09. ಬೈಕ್ ಹಾಗೂ ಬಸ್ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ.   ಮೃತ ವ್ಯಕ್ತಿಯನ್ನು ಜಾರ್ಕಳ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೈಲೂರಿನಿಂದ ಜಾರ್ಕಳದ ಕಡೆಗೆ ಹೋಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿಯಾಗಿ ಸ್ಥಳದಲ್ಲಿ ಮೃತಪಟ್ಟರೆ, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬೈಕ್ ಹಾಗೂ ಬಸ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್‌ ಸಿದ್ದೀಖ್‌ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್‌ ರವರು ಅಜ್ಜಿನಡ್ಕ

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top