crime

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.31. KSRTC ಬಸ್‌ ಡ್ರೈವಿಂಗ್ ಮಾಡುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದು, ನಿಯಂತ್ರಣ ತಪ್ಪಿದ ಸಾರಿಗೆ ಬಸ್‌ ರಸ್ತೆ ಪಕ್ಕದಲ್ಲಿಯೇ ಇದ್ದ ಪೆಟ್ರೋಲ್‌ ಬಂಕ್‌ಗೆ ನುಗ್ಗಿದ ಘಟನೆ ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ ನಡೆದಿದೆ. ಬಸ್ ಓಡಿಸುವಾಗಲೇ ಡ್ರೈವರ್‌ ಮುರಿಗೆಪ್ಪ ಎಂಬವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದರಿಂದ ಬಸ್‌ ಚಾಲಕನಿಲ್ಲದೇ ನಿಯಂತ್ರಣ ತಪ್ಪಿದ ಬಸ್‌ ಪೆಟ್ರೋಲ್‌ ಬಂಕ್‌ಗೆ ನುಗ್ಗಿದೆ. ಈ ವೇಳೆ ಬಸ್‌ ಕಂಡೆಕ್ಟರ್ ಸಮಯಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದೆ ಎನ್ನಲಾಗಿದೆ.  

KSRTC ಬಸ್ ಡ್ರೈವಿಂಗ್ ಮಾಡುತ್ತಿದ್ದಾಗಲೇ ಡ್ರೈವರ್ ಗೆ ಹೃದಯಾಘಾತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಳಕೆ‌ಮಜಲು ನಿವಾಸಿ ಯುವಕ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಧೀರಜ್ ಬಿಸಿ ರೋಡ್ ಬಳಿ ಹೋಂಡಾ ಶೋರೂಂ ನಲ್ಲಿ ಕೆಲಸ‌ ಮಾಡುತ್ತಿದ್ದರು ಎನ್ನಲಾಗಿದೆ. ಧೀರಜ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.  

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.30. ಮಂಗಳೂರು ಮತ್ತು ಕೇರಳಕ್ಕೆ ಆಂಧ್ರ ಪ್ರದೇಶದಿಂದ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 23 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ ಮೊಯಿದ್ದೀನ್ ಶಬೀರ್ (35) ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಶಬೀರ್ ವಿಶಾಖಪಟ್ಟಣದಿಂದ ಕಾರಿನ ಮೂಲಕ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದಾಗ ಉಳ್ಳಾಲ ಮುಡಿಪು ಕಾಯಿರಗೋಳಿ ಎಂಬಲ್ಲಿ ಸಿಸಿಬಿ ಪೊಲೀಸರ ತಂಡ ಸೆರೆ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.  

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.30. ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಹತ್ತಿರದ ಮದಗಗಕ್ಕೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾಗಿದ್ದಾರೆ ಎಂದು ವರದಿ ತಿಳಿಸಿದೆ. ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ (15) ನೀರಲ್ಲಿ ಮುಳುಗಿ ಮೃತರಾಗಿದ್ದಾರೆ ಎನ್ನಲಾಗಿದೆ.

ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮೇ.30. ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದೆ ಎಂದು ವರದಿ ತಿಳಿಸಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.

ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ ➤ ತಪ್ಪಿದ ಭಾರಿ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.29 ,ದೆಹಲಿಯ ರೋಹಿಣಿಯಲ್ಲಿ ಜನ ಸಂದಣಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಇಬ್ಬರ ನಡುವೆ ನಡೆದ ಜಗಳದ ನಂತರ ಯುವಕ, ಯುವತಿಗೆ ಹಲವು ಬಾರಿ ಇರಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.  

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ ನಲ್ಲಿ ಅವಹೇಳನಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.29. ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ. ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.  

ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ ನಲ್ಲಿ ಅವಹೇಳನಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ Read More »

ಕರ್ನಾಟಕ
Scroll to Top