crime

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.27. ನವ ವಿವಾಹಿತೆಯೋರ್ವರು ಎರಡು ತಿಂಗಳ ಹಿಂದೆಯಷ್ಟೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಈಕೆ ತವರು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಪೂಜಾರಿಯವರ ಪುತ್ರಿ ಹರ್ಷಿತಾ(28ವ.) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆಯಾದ ಬಳಿಕ ಗಂಡನ ಮನೆಯಲ್ಲಿ ವಾಸ್ತವ್ಯವಿದ್ದ ಹರ್ಷಿತಾರವರು ತನ್ನ ತಾಯಿ ಮನೆಯ ನೆರೆಮನೆಯಲ್ಲಿ ನಡೆದ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೋಗಲೆಂದು ಪತಿ ಮನೆಯಿಂದ ತಾಯಿ ಮನೆಗೆ ಹೋಗಿದ್ದರು.

ಕೀಟ ನಾಶಕ ಸೇವಿಸಿದ ನವ ವಿವಾಹಿತೆ ➤ ಚಿಕಿತ್ಸೆ ಫಲಿಸದೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.25. ಫೇಸ್ ಬುಕ್ ನಲ್ಲಿ ಪರಿಚಯವಾದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪುತ್ತೂರು‌ ಮಹಿಳಾ ಠಾಣೆಯಲ್ಲಿ‌ ಕೇಸ್ ದಾಖಲಾಗಿದೆ. ಕೆಯ್ಯೂರು ಮಾಡಾವು ನಿವಾಸಿ ನವೀನ್ ಎಂಬಾತನ ಮೇಲೆ ಕೇಸ್ ದಾಖಲಾಗಿದೆ. ನವೀನ್ ಕಾಸರಗೋಡು ಮೂಲದ ಅಪ್ರಾಪ್ತ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿದ್ದು ಪುತ್ತೂರು ಜಾತ್ರೆಯ ವೇಳೆ ಆಕೆಗೆ ಪುಸಲಾಯಿಸಿ ಮಾಡಾವು ಅಂಗನವಾಡಿ ಕೇಂದ್ರದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.  

ಪುತ್ತೂರು: ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಬಾಲಕಿ ಮೇಲೆ ಅತ್ಯಾಚಾರ    ➤ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ

ಪ್ರೀತಿಸಿದ ಹುಡುಗಿಯ ಮೇಲೆ ಕುದಿಯುವ ಎಣ್ಣೆ ಸುರಿದ ಯುವಕ..! 

(ನ್ಯೂಸ್ ಕಡಬ)Newskadaba.com ಆಂಧ್ರಪ್ರದೇಶ,ಏ.25 ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಪ್ರೀತಿಸಿದ ಯುವಕ ಕುದಿಯುವ ಎಣ್ಣೆ ಸುರಿದ ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಜವಾಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ (ಜೆಎನ್‌ಟಿಯು) ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುವಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದ.ಸಂತ್ರಸ್ತೆ ಮುಂಜಾನೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ಬಳಿಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆಕೆಯನ್ನು ಏಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಪ್ರೀತಿಸಿದ ಹುಡುಗಿಯ ಮೇಲೆ ಕುದಿಯುವ ಎಣ್ಣೆ ಸುರಿದ ಯುವಕ..!  Read More »

ರಾಷ್ಟ್ರೀಯ ನ್ಯೂಸ್

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25, ಕೊಲೆಗಾರ ವಿಕ್ರಮ್ ಮತ್ತು ಮಗುವಿನ ತಾಯಿ ಕಿರಣಾ ನಡುವೆ ಅಕ್ರಮ ಸಂಬಂಧವಿತ್ತು. ಕಿರಣಾಳನ್ನು ಮದುವೆಯಾಗಲು ವಿಕ್ರಮ್ ಬಯಸಿದ್ದು, ತನ್ನನ್ನು ಮದುವೆಯಾಗುವಂತೆ ಕಿರಣಾ ಬಳಿ ಕೇಳಿದ್ದಾನೆ. ಕಿರಣಾ ಮದುವೆಯಾಗಲು ನಿರಾಕರಿಸಿದಳು ಎಂಬ ಕಾರಣಕ್ಕೆ ಅವಳ ಒಂದೂವರೆ ವರ್ಷದ ಮಗುವನ್ನು ಬಿಸಿ ನೀರಿನ ಬಕೆಟ್‌ನಲ್ಲಿ ಮುಳುಗಿಸಿ ಕೊಂದ ಘಟನೆ ಮಹಾರಾಷ್ಟ್ರದ ಪುಣೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದಿದೆ. ಕೊಲೆಗಾರ ವಿಕ್ರಮ್ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಲು ಕಿರಣಾ ನಿರಾಕರಿಸಿದ್ದು, ಇದೇ ಕೋಪಕ್ಕೆ ಮಗುವನ್ನು ಕೊಂದಿದ್ದಾನೆ’ ಎಂದು ಹಿರಿಯ ಇನ್ಸ್‌ಪೆಕ್ಟರ್

ಮಗುವನ್ನು ಬಿಸಿ ನೀರಿನಲ್ಲಿ ಮುಳುಗಿಸಿ ಕೊಲೆಗೈದ ಪಾಪಿ!   ➤ಆರೋಪಿಯನ್ನು ಬಂಧಿಸಿದ ಪೋಲೀಸರು..!   Read More »

ಕರ್ನಾಟಕ

15 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರವೆಸಿಗಿದ ಪಾಪಿ.!

(ನ್ಯೂಸ್ ಕಡಬ)Newskadaba.com ಉತ್ತರಪ್ರದೇಶದ,ಏ.24 ಉತ್ತರಪ್ರದೇಶದಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ ಆರು ತಿಂಗಳ ಕಾಲ ಅತ್ಯಾಚಾರ ಎಸಗಿದ ಘೋರ ಘಟನೆ ನಡೆದಿದೆ. ಬಾಲಕಿಯನ್ನು ರಕ್ಷಿಸಿದ್ದು, ಆರೋಪಿ ಆಶಿಶ್ ಕುಮಾರ್‌ನನ್ನು (24) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಾಲಕಿ ಕಾಣೆಯಾಗಿದ್ದಾಳೆ ಎಂಬ ದೂರನ್ನು ಬಾಲಕಿ ಪೋಷಕರು ನೀಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು, ಎಂದು ತಖಾ ಪೊಲೀಸ್ ಹೊರಠಾಣೆ ಪ್ರಭಾರಿ ಫೂಲ್‌ಚಂದ್ರ ಯಾದವ್ ಹೇಳಿದ್ದಾರೆ.    

15 ವರ್ಷದ ಬಾಲಕಿಯನ್ನು ಅಪಹರಿಸಿ,ಅತ್ಯಾಚಾರವೆಸಿಗಿದ ಪಾಪಿ.! Read More »

ರಾಷ್ಟ್ರೀಯ ನ್ಯೂಸ್

ಸಮಸ್ಯೆ ಹೇಳಿಕೊಂಡಿದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ನಾಯಕ.!   ➤ಎಂ.ಬಿ.ಪಾಟೀಲ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.24 ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಅವರು ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ಬಿಜೆಪಿ ಶೇರ್ ಮಾಡಿದೆ. ಕಾಂಗ್ರೆಸ್ ಗೂಂಡಾಗಿರಿಯನ್ನು ಟೀಕಿಸಿರುವ ಬಿಜೆಪಿ, ತನ್ನ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದೆ. ಗೂಂಡಾಗಿರಿ ಕಾಂಗ್ರೆಸ್ನ ಡಿಎನ್‌ಎಯಲ್ಲಿದೆ. ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ತಮ್ಮ ಕುಂದುಕೊರತೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಯುವಕನ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ.    

ಸಮಸ್ಯೆ ಹೇಳಿಕೊಂಡಿದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ನಾಯಕ.!   ➤ಎಂ.ಬಿ.ಪಾಟೀಲ್..! Read More »

ಕರ್ನಾಟಕ

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಪುತ್ರೂರು, ಏ.23. ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ. ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದರು.ಅರುಣ್ ಪುತ್ತಿಲ ಕೂಡ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದರು ಎನ್ನಲಾಗಿದೆ.  

ಪುತ್ತೂರು: ಅಕ್ರಮವಾಗಿ ಗೋಮಾಂಸ ಸಾಗಾಟ ➤ ಗೋಮಾಂಸ ಪೊಲೀಸ್ ವಶಕ್ಕೆ Read More »

ಕರಾವಳಿ

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.23. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತು ವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.  

ಕಾಸರಗೋಡು: ಲಕ್ಷಾಂತರ ಮೌಲ್ಯದ ಮಾದಕ ವಸ್ತು ಸಾಗಾಟ    ➤ ಆರೋಪಿಗಳು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ದೊಡ್ಡಬಳ್ಳಾಪುರ, ಏ.21. ಮನೆಯಲ್ಲಿ ಮಲಗಿದ್ದ ವೇಳೆ ನಾಗರಹಾವು ಕಚ್ಚಿದ ಪರಿಣಾಮ, 7 ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಬೈರಾಪುರ ತಾಂಡದಲ್ಲಿ ಸಂಭವಿಸಿದೆ. ಬೈರಾಪುರ ತಾಂಡದ ಮಂಜುನಾಥ್‌ ನಾಯಕ್‌, ಸುಮಿತ್ರಾ ದಂಪತಿಯ ಎರಡನೇ ಪುತ್ರ ಮೌನಿಕ್‌ ಎಂ.ನಾಯಕ್‌ ಮೃತ ಬಾಲಕ ಎಂದು ವರದಿ ತಿಳಿಸಿದೆ.

ಮಲಗಿದ್ದ ವೇಳೆ ಹಾವು ಕಚ್ಚಿ 7 ವರ್ಷದ ಬಾಲಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top