crime

ಮಂಗಳೂರು: ಇನ್‌ಸ್ಟಾಗ್ರಾಂ ಖಾತೆ ಮೂಲಕ 90 ಸಾವಿರ ರೂ.ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.21. ಇನ್‌ಸ್ಟಾಗ್ರಾಂ ಖಾತೆಯ ಮೂಲಕ 90 ಸಾವಿರ ರೂ. ವಂಚನೆ ಮಾಡಿರುವ ಕುರಿತಂತೆ ನಗರದ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್‌ಸ್ಟಾ ಗ್ರಾಂ ಖಾತೆಯನ್ನು ವೀಕ್ಷಿಸುತ್ತಿರುವಾಗ ಸಮಯ ಅವರ ಗೆಳೆಯನ ಖಾತೆಯಿಂದ “ರಿಸಿವ್ಡ್ ರುಪೀಸ್‌ 4,16,000 ಇನ್‌ ಯುವರ್‌ ಇನ್‌ಸ್ಟಾಗ್ರಾಂ ವಾಲೆಟ್‌’ ಎಂಬ ಪೋಸ್ಟ್‌ ಬಂದಿದೆ. ತತ್‌ಕ್ಷಣ ಅವರಿಗೆ “ಲಿಝಿ ಹೋಪರ್‌’ ಎನ್ನುವ ಖಾತೆಯಿಂದ ಸಂದೇಶಗಳು ಬರಲು ಆರಂಭಿಸಿದ್ದು, ಅದು ಗೆಳೆಯನ ಇನ್‌ಸ್ಟಾಗ್ರಾಂ ಖಾತೆ ಎಂದು ನಂಬಿ ಎ. 12ರಂದು 40,000 […]

ಮಂಗಳೂರು: ಇನ್‌ಸ್ಟಾಗ್ರಾಂ ಖಾತೆ ಮೂಲಕ 90 ಸಾವಿರ ರೂ.ವಂಚನೆ Read More »

ಕರಾವಳಿ

ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.`19. ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ ಎನ್ನಲಾಗಿದೆ.  ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ರಾಬರಿ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  

ಮಂಗಳೂರಿನಲ್ಲಿ ಬಂಟ್ವಾಳ ಮೂಲದ ವ್ಯಕ್ತಿಯ ಹತ್ಯೆ    ➤ ಆರೋಪಿಯ ಬಂಧನ Read More »

ಕರಾವಳಿ

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ..!   ➤ ದೂರು ದಾಖಲು!

(ನ್ಯೂಸ್ ಕಡಬ)com ಪಾಟ್ನಾ,ಏ.18 ಪಾಟ್ನಾದ ಮನೇರ್ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆಯನ್ನು ಪರಿಶೀಲಿಸಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಮನೇರ್‌ನಲ್ಲಿರುವ ಕೊಯಿಲ್‌ವಾರ್ ಸೇತುವೆಯ ಬಳಿ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಲು ಅಧಿಕಾರಿಗಳ ತಂಡ ತೆರಳಿದೆ. ಈ ವೇಳೆ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು ಮೂವರು ಅಧಿಕಾರಿಗಳಿಗೆ ಅಲ್ಲಿದ್ದ ಜನರು ಬೆದರಿಕೆಯನ್ನು ಹಾಕಿದ್ದಾರೆ. ಇದಾದ ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ..!   ➤ ದೂರು ದಾಖಲು! Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಸುಳ್ಯ, ಏ. 18. ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಎಡಮಂಗಲ ಗ್ರಾಮದ ಕೊಳಂಬೆ ಶಿವರಾಮ ವಿರುದ್ಧ ಕೇಸ್ ದಾಖಲಾಗಿದೆ. ಶಿವರಾಮ್ ಎಂಬಾತ ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಂದರ್ಭ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿವರಾಮ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳ್ಯ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..! ➤ ಆರೋಪಿ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ. 18. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ಬೆಳ್ತಂಗಡಿ ಸಂತೆಕಟ್ಟೆ ಬಳಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು. ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು. ಈ ವೇಳೆ ಜೈ ಬಿಜೆಪಿ, ಜೈ ಕಾಂಗ್ರೆಸ್ ಘೋಷಣೆ ಮೊಳಗಿದ್ದು ಪರಸ್ಪರ ಮಾತಿನ

ಬೆಳ್ತಂಗಡಿ: ನಾಮಪತ್ರ ಸಲ್ಲಿಕೆ ವೇಳೆ ಘರ್ಷಣೆ..!       ➤ ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ Read More »

ಕರಾವಳಿ
Death, deadbody, Waterfall

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.18. ಅಪಾರ್ಟ್‌ಮೆಂಟ್‌ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್‌ ಕೊಂಚಾಡಿಯಲ್ಲಿ ಸಂಭವಿಸಿದೆ. ಮೃತರನ್ನು ಜಿತೇಂದ್ರ (44) ಎಂದು ಗುರುತಿಸಲಾಗಿದೆ. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್‌ ಅಮೀನ್‌ ಅವರೊಂದಿಗೆ ಹಳೆಯ ಫೈಬರ್‌ಶೀಟ್‌ ಬದಲಿ ಮಾಡುವ, ಕಬ್ಬಿಣದ ಶೀಟ್‌ಗಳಿಗೆ ಸ್ಕ್ರೂ ಅಳವಡಿಸುವ ಕೆಲಸ ಮಾಡುತ್ತಿದ್ದರು.

ಮಂಗಳೂರು: ಫೈಬರ್‌ ಶೀಟ್‌ ಬದಲಿಸುವ ವೇಳೆ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಏ.15. ಗಾಂಜಾ ಮಾರಾಟ ಆರೋಪದಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಹಿತ ಮೂರು ಮಂದಿಯನ್ನು ಮಂಗಳೂರು ದಕ್ಷಿಣ ಠಾಣೆ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ. ವೆಲೆನ್ಸಿಯಾ, ಗೋರಿಗುಡ್ಡೆಯ ಪ್ರಜ್ವಲ್ ಫಿನ್ಹಾನ್ (26), ಸಕಲೇಶಪುರದ ಧ್ರುವ ಶೆಟ್ಟಿ(19) ಮತ್ತು ಕುಳಾಯಿಯ ಶಿವಾನಿ (22) ಬಂಧಿತ ಆರೋಪಿಗಳು. ಬಂಧಿತರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಬಂಧಿತರಿಂದ ಸುಮಾರು 1,40,000 ರೂ. ಮೌಲ್ಯದ

ಮಂಗಳೂರು: ಅಕ್ರಮ ಗಾಂಜಾ ಮಾರಾಟ ➤ ಮೆಡಿಕಲ್ ವಿದ್ಯಾರ್ಥಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.14. ವೇಣೂರು ಜುಗುಲ್‌ ಬಾರ್‌ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್‌ ಅಲಿಯಾಸ್‌ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಆರೋಪಿಗಳು ಕುಡಿದ ಮತ್ತಿನಲ್ಲಿ ಮೂಡುಕೋಡಿ ನಿವಾಸಿ ನಾರ್ಣಪ್ಪ ಪೂಜಾರಿ (70) ಎಂಬವರಿಗೆ ಹಲ್ಲೆ ನಡೆಸಿದ್ದು, ತಲೆಯ ಬಾಗಕ್ಕೆ ಗಾಯಗೊಂಡಿದ್ದ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೆಳ್ತಂಗಡಿ: ಬಾರ್ ಎದುರು ಕುಡಿದ ಮತ್ತಿನಲ್ಲಿ ಗಲಾಟೆ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಏ.14. ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ ಲೀನಾ ಲೋಬೋ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಜಿತೇಶ ಕ್ಲಿಶನ್ ಡಿ ಸೋಜಾ, ರಿಕ್ಸನ್ ಸಂತಾನಿಸ್, ಎಡ್ಲಿನ್ ಕ್ಲಿಂಟನ್ ಡಿ ಸೋಜಾ, ಗ್ಲಾನ್ಸಿಲ ಫೆರ್ನಾಂಡೀಸ್, ಜೋಸೆಫ್ ಡಿ ಸೋಜಾ, ಗ್ಲಾನೆಟ್ ಫೆರ್ನಾಂಡೀಸ್, ಸಚಿನ್ ಪಸನ್ನ, ವಿನಯ್ ಜೋಯ್ ಅಲ್ವಾರಿಸ್, ಜೀವನ್ ಕ್ಲಿಫರ್ಡ್ ಡಿ ಸೋಜಾ,

ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಮಹಿಳೆಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿಲಾತಬೆಟ್ಟು ಗ್ರಾಮದ ನಯನಾಡು ನಿವಾಸಿ ಹರಿಪ್ರಸಾದ್ ಅವರ ಪತ್ನಿ ಜಯಲಕ್ಮೀ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಮನೆಯೊಳಗೆ ನೇಣು ಬಿಗಿದು ಅವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅವರ ಪತಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಬಂಟ್ವಾಳ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ..! ➤ ಶಂಕೆ ಹಿನ್ನೆಲೆ ಪತಿಯಿಂದ ಠಾಣೆಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top