crime

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.13. ದೂರು ನೀಡಲು ಠಾಣೆಗೆ ಬಂದ ಮಹಿಳೆಯ ಸೊಂಟ ಹಿಡಿದು ಕಿರುಕುಳ ನೀಡಿ ಅನುಚಿತ ವರ್ತನೆ ಆರೋಪ ಪ್ರಕರಣ ಸಂಬಂಧಿಸಿದಂತೆ ಸುದ್ದಗುಂಟೆಪಾಳ್ಯ ಠಾಣೆಯ ಪಿಎಸ್‌ಐ ಮಂಜುನಾಥ್‌ ವಿರುದ್ಧ ಕೇಸ್ ದಾಖಲಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅನುಚಿತ ವರ್ತನೆ ಮಾಡಿದ್ದಾರೆಂದು ಮಹಿಳೆಯು ಟ್ವೀಟ್‌ ಮಾಡಿದ್ದರು. ಬಳಿಕ ಪಿಎಸ್‌ಐ ಮಂಜುನಾಥ್‌ ವಿರುದ್ಧ ದೂರು ಸಹ ನೀಡಿದ್ದರು. ಈ ಕುರಿತಾಗಿ ಮಾತನಾಡಿದ ಡಿಸಿಪಿ ಸಿ.ಕೆ.ಬಾಬಾ, ನಮ್ಮ […]

ಮಹಿಳೆಗೆ ಲೈಂಗಿಕ ಕಿರುಕುಳ ➤ PSI ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು

(ನ್ಯೂಸ್ ಕಡಬ)newskadaba.com ಅಂಕೋಲಾ, ಏ.13. ಆಟೊ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಂಕೋಲಾದ ಶೋಭಾ ಗೋಪಾಲ(28) ಮೃತಪಟ್ಟವರಾಗಿದ್ದಾರೆ. ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ತನ್ನ ಪತಿ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಅತಿವೇಗ ಮತ್ತು ಅಜಾಗರೂಕತೆಯಿಂದ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.  

ಆಟೋ ರಿಕ್ಷಾ ಢಿಕ್ಕಿ ಹೊಡೆದು ಗರ್ಭಿಣಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು(54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆ ಯಲ್ಲಿ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಲುಪಿ ಮುಂದಿನ ಕ್ರಮ ತೆಗೆದು ಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.  

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.13. KSRTC ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿ.ಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.12. ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ. ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಪುಣ್ಯಶ್ರೀ(32)ಮೃತ ಯುವತಿ. ಪುಣ್ಯಶ್ರೀಯನ್ನು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಶೋತ್ತಮ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪುಣ್ಯಶ್ರೀ ಕಳೆದ ಕೆಲ ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತನ್ನ ತವರು ಮನೆಯಾದ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ. ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಲ್ಲದೆ

ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.12. ಅತ್ತೆ – ಮಾವ ಎಂದರೆ ಸೊಸೆಗೆ ಎರಡನೇ ತಾಯಿ ಹಾಗೂ ತಂದೆ, ಆದರೆ ಆಸ್ತಿಯಾಸೆಗಾಗಿ ಸ್ವಂತ ಅತ್ತೆ – ಮಾವನನ್ನೇ ಸೊಸೆ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗಿದೆ. ಇಬ್ಬರು ಸಹಚರರ ನೆರವಿನೊಂದಿಗೆ ವೃದ್ಧ ದಂಪತಿಯನ್ನು ಅವರ ಸೊಸೆ ಮೋನಿಕಾ ದೆಹಲಿಯಲ್ಲಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 70 ರ ಹರೆಯದ ಇಬ್ಬರು ಹಿರಿಯ ನಾಗರಿಕರು ದೆಹಲಿಯ ಗೋಕುಲಪುರಿ ಪ್ರದೇಶದಲ್ಲಿ ತಮ್ಮ ಮಗ, ಸೊಸೆ ಮತ್ತು

ಆಸ್ತಿಗಾಗಿ ಅತ್ತೆ ಮಾವನನ್ನೇ ಹತ್ಯೆ ಮಾಡಿದ ಪಾಪಿ ಸೊಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com. ಸೌದಿ ಅರೇಬಿಯಾ, ಏ.12. ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ ನಾಸರ್ ಮತ್ತು ಖದೀಜಾ ದಂಪತಿಯ ಪುತ್ರ ಅಬ್ದುಲ್ ರಹಮಾನ್ (9) ಮೃತರು.  ಅಬ್ದುಲ್ರಹ್ಮಾನ್ ತನ್ನ ತಾಯಿ, ಸಹೋದರ ಮತ್ತು ಸಹೋದರಿಯೊಂದಿಗೆ ಉಮ್ರಾ ಮಾಡಲು ತೆರಳಿದ್ದರು. ಬಾಲಕನ ತಂದೆ ಮಕ್ಕಾದಲ್ಲಿದ್ದರು. ಉಮ್ರಾ ಮುಗಿಸಿ ತನ್ನ ಕೊಠಡಿಯಲ್ಲಿ

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ..!   ➤ಚಾಲಕನ ಜೊತೆ ಅನುಚಿತ ವರ್ತನೆ ಮಾಡಿದ  ‘ಟ್ರಾಫಿಕ್ ಪೊಲೀಸ್’.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.11 ಚಾಲಕನೋರ್ವ ಕನ್ನಡದಲ್ಲಿ ಮಾತನಾಡದಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರು ಚಾಲಕನ ಜೊತೆ ಅನುಚಿತವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಕಾರು ಚಾಲಕ ವಿಕ್ರಮ್ ಅನ್ಸಾರಿ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.    

ಕಾರು ಪಾರ್ಕಿಂಗ್ ವಿಚಾರಕ್ಕೆ ಚಾಲಕ ಹಾಗೂ ಟ್ರಾಫಿಕ್ ನಡುವೆ ವಾಗ್ವಾದ..!   ➤ಚಾಲಕನ ಜೊತೆ ಅನುಚಿತ ವರ್ತನೆ ಮಾಡಿದ  ‘ಟ್ರಾಫಿಕ್ ಪೊಲೀಸ್’.! Read More »

ಕರ್ನಾಟಕ

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಏ.11. ಕಾರ್‌ ಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ಮಧ್ಯಪ್ರದೇಶದ ಇಂದೋರ್‌ನ ಶೆರಾಟನ್ ಗ್ಯಾಂಡ್ ಹೋಟೆಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ಕಾರೊಳಗಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ಯಾರೇಜ್ ನಡೆಸುತ್ತಿರುವ ಇರ್ಷಾದ್ ಖಾನ್ ಮತ್ತು ಅವರ ಸಹೋದ್ಯೋಗಿ ಹಲೀಂ ಖಾನ್ ಅವರು ಮಹೀಂದ್ರ ಸ್ಕಾರ್ಪಿಯೊವನ್ನು ಟೆಸ್ಟ್ ಡ್ರೈವ್ ಮಾಡಲು ಹೊರಟಿದ್ದು, ಡ್ಯಾಶ್‌ ಬೋರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ, ಟೆಸ್ಟ್ ಡ್ರೈವ್‌ನಲ್ಲಿ ಕಾರಿನಿಂದ ಹೊಗೆ ಬರಲಾರಂಭಿಸಿತು. ಸ್ವಲ್ಪ ಹೊತ್ತಿನಲ್ಲೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.  

ಟೆಸ್ಟ್‌ ಡ್ರೈವ್ ವೇಳೆ ಹೊತ್ತಿ ಉರಿದ ಕಾರು ➤ ಇಬ್ಬರು ಪ್ರಾಣಾಪಾಯದಿಂದ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೋಷಕರು ಮೊಬೈಲ್ ಕಸಿದು ಕೊಂಡರೆಂಬ ಕ್ಷುಲಕ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಹೆಚ್ಚು ಮೊಬೈಲ್‌ ಬಳಸುತ್ತಿದ್ದು, ಇದರಿಂದ ಬಾಲಕಿಗೆ ಪೋಷಕರು ಬುದ್ದಿ ಮಾತನ್ನು ಹೇಳಿದ್ದರು. ಆದರೂ, ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್‌ ಕಸಿದುಕೊಂಡಿದ್ದಾರೆ. ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top