crime

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು

(ನ್ಯೂಸ್ ಕಡಬ)Newskadaba.com ಪಂಜಾಬ್‌,ಏ.05  ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಅಮೃತಸರ ಮೂಲದ ಎಎಸ್‌ಐ ಭೂಪಿಂದರ್ ಸಿಂಗ್ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ ಬಲ್ಜೀತ್ ಕೌರ್ (40) ಮತ್ತು ಮಗ ಲವ್‌ಪ್ರೀತ್ ಸಿಂಗ್ (19) ಅವರನ್ನು ಕೊಲೆ ಮಾಡಿದ್ದಾರೆ.ಅಷ್ಟೇ ಅಲ್ಲದೆ ತನ್ನ ಮುದ್ದಿನ ನಾಯಿಗೂ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.        

ಸರ್ವಿಸ್ ರಿವಾಲ್ವರ್‌ನಿಂದ ಪತ್ನಿ, ಮಗ, ಸಾಕು ನಾಯಿಯನ್ನು ಹತ್ಯೆಗೈದ ಪೊಲೀಸ್‌ ಅಧಿಕಾರಿ.!!   ➤ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ

 (ನ್ಯೂಸ್ ಕಡಬ)newskadaba.com ಕೇರಳ, ಏ.05. 5 ವರ್ಷಗಳ ಹಿಂದೆ ಕೇರಳದಲ್ಲಿ ನಡೆದಿದ್ದ ಬುಡಕಟ್ಟು ಯುವಕನೊಬ್ಬನ ಕೊಲೆಗೆ ಸಂಬಂಧಿಸಿದಂತೆ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ ಕೇರಳದ ಪಾಲಕ್ಕಾಡ್‌ನ ಮನ್ನಾರ್‌ಕಾಡ್‌ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಮಧು ಎಂಬ ಬುಡಕಟ್ಟು ಯುವಕನನ್ನು ಫೆ. 22, 2018 ರಂದು ಕೊಲೆಗೈದ ಕಾರಣಕ್ಕೆ ಒಟ್ಟು 16 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯ 14 ಮಂದಿಯನ್ನು ದೋಷಿಗಳೆಂದು ಹೇಳಿದೆ.

5 ವರ್ಷದ ಹಿಂದೆ ನಡೆದಿದ್ದ ಬುಡಕಟ್ಟು ಯುವಕನ ಕೊಲೆ ಪ್ರಕರಣ ➤ 14 ಮಂದಿ ದೋಷಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ

(ನ್ಯೂಸ್ ಕಡಬ)newskadaba.com  ಛತ್ತೀಸ್ ಗಢ, ಏ.05. ಮದುವೆಗೆ ನಾನಾ ರೀತಿಯ ಉಡುಗೊರೆಗಳು ಬರೋದು ಸಾಮಾನ್ಯವಾಗಿದ್ದು, ಸಂತಸದ ಸಮಾರಂಭದಲ್ಲಿ ಸೂತಕದ ವಾತಾವರಣ ಏರ್ಪಟ್ಟಿದೆ. ಛತ್ತೀಸ್‌ಗಢದಲ್ಲಿ ದುರಂತ ಘಟನೆ ನಡೆದಿದೆ. ಮದುವೆ ಉಡುಗೊರೆಯಾಗಿ ಪಡೆದ ಹೋಮ್ ಥಿಯೇಟರ್ ಮ್ಯೂಸಿಕ್ ಸಿಸ್ಟಮ್ ಮನೆಯಲ್ಲೇ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮತ್ತು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆ ಉಡುಗೊರೆಯಾಗಿ ನೀಡಿದ್ದ ಮ್ಯೂಸಿಕ್‌ ಸಿಸ್ಟಮ್‌ನಲ್ಲಿ ಬಾಂಬ್‌..! ➤ ನವ ವಿವಾಹಿತ ಸೇರಿ ಇಬ್ಬರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.05. ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ 65 ವರ್ಷದ ವೃದ್ಧನ ವಿರುದ್ಧ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 65 ವರ್ಷ ಪ್ರಾಯದ ರಾಜ್‌ ಭಟ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಆತನು ಮಂಗಳೂರು ಹೊರವಲಯದ ಸುರತ್ಕಲ್ ಪ್ರದೇಶದ ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ ➤ 65 ವರ್ಷದ ವೃದ್ದನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು

 (ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪರಿಚಯಸ್ಥ ಸಹಪ್ರಯಾಣಿಕ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಸ್ ತಡೆದು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ನಾಲ್ವರ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ನಿತೇಶ್, ಸಚಿನ್, ಅವಿನಾಸ್ ಮತ್ತು ದಿನೇಶ್ ಮೇಲೆ ಕೇಸ್ ದಾಖಲಿಸಲಾಗಿದೆ.  

ಉಜಿರೆ: ಯುವಕನ ಮೇಲೆ ಹಲ್ಲೆ ಪ್ರಕರಣ ➤ ನಾಲ್ವರ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ)newskadaba.com ದಾವಣಗೆರೆ, ಏ.05. ಈಜಲು ತೆರಳಿದ ಇಬ್ಬರು ಯುವಕರು‌ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಸಂಭವಿಸಿದೆ. ರಾಜು ಮತ್ತು ವಿಜಯ್ ಎಂಬ ಸ್ನೇಹಿತರು ಮೃತರು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯಲು ಹೋಗಿದ್ದ ಇವರು, ಬಿಸಿಲಿನ ತಾಪಕ್ಕೆ ಗೊಲ್ಲರಹಟ್ಟಿ ಕೆರೆಯಲ್ಲಿ ಈಜಲು ಹೋಗಿದ್ದರು. ಈಜುವ ವೇಳೆ ಆಳವಾದ ಗುಂಡಿಯಲ್ಲಿ ಮುಳುಗುತ್ತಿದ್ದ ರಾಜುವನ್ನು ರಕ್ಷಿಸಲು ವಿಜಯ್ ಕೂಡ ಧುಮುಕಿದ್ದ. ಆದರೆ ಕೊನೆಗೆ ಇಬ್ಬರೂ ಮುಳುಗಲಾರಂಭಿಸಿದ್ದಾರೆ. ಮತ್ತೋರ್ವ ಯುವಕ ಇವರಿಬ್ಬರನ್ನು ರಕ್ಷಿಸಲು ಪ್ರಯತ್ನಿಸಿದ್ದ ಅದರೆ

ಈಜಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ

(ನ್ಯೂಸ್ ಕಡಬ)newskadaba.com ಸುಳ್ಯ, ಏ.05. ಕೋಳಿ ಪದಾರ್ಥಕ್ಕೆ ನಡೆದ ಜಗಳ‌ಕೊಲೆಯಲ್ಲಿ ಅಂತ್ಯವಾದ ಶಾಕಿಂಗ್ ಘಟನೆ ಕರಾವಳಿಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಶಿವರಾಮ(32) ಮೃತರು ಎಂದು ಗುರುತಿಸಲಾಗಿದೆ. ಮೊಗ್ರ ಏರಣಗುಡ್ಡೆಯ ಮಾತೃಮಜಲು ನಿವಾಸಿ ಶೀನ ಅವರ ಮನೆಯಲ್ಲಿ ಕೋಳಿ ಪದಾರ್ಥ ಮಾಡಲಾಗಿತ್ತು. ‌ಮಗ ಶಿವರಾಮ ರಾತ್ರಿ ತಡವಾಗಿ ಬಂದಾಗ ಪದಾರ್ಥ ಖಾಲಿಯಾಗಿತ್ತು.‌ ಈ ಹಿನ್ನೆಲೆ‌ ಶಿವರಾಮ ಮನೆಯಲ್ಲಿ ಗಲಾಟೆ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಶೀನ ಮಗನಿಗೆ ದೊಣ್ಣೆಯಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಶಿವರಾಮ ಅವತ ತಲೆಗೆ

ಸುಳ್ಯ: ಕೋಳಿ ಪದಾರ್ಥಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ➤ ಮಗನನ್ನು ಹೊಡೆದು ಕೊಂದ ಪಾಪಿ ತಂದೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಏ.05. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲ ಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ. ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ

ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ Read More »

ಕರಾವಳಿ

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.05. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಪರಿಚಯಸ್ಥ ಸಹ ಪ್ರಯಾಣಿಕೆಯೊಂದಿಗೆ ಮಾತನಾಡಿದ್ದನ್ನೇ ನೆಪವಾಗಿರಿಸಿ ಯುವಕರ ಗುಂಪೊಂದು ಯುವತಿಗೆ ಹಲ್ಲೆ ನಡೆಸಿದ ಘಟನೆ ತಾಲೂಕಿನ ಉಜಿರೆಯಲ್ಲಿ ವರದಿಯಾಗಿದೆ. ಕಕ್ಕಿಂಜೆ ನಿವಾಸಿ ಶಾಹಿಲ್ (22) ಹಲ್ಲೆಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದು, ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಯುವತಿ ಬೆಳ್ತಂಗಡಿಯಲ್ಲಿ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು ಗಮನಿಸಿ ಯಾರೋ ಯುವಕರಿಗೆ ಮಾಹಿತಿ ನೀಡಿದ್ದು, ಈತನನ್ನು ಉಜಿರೆಯಲ್ಲಿ

ಬೆಳ್ತಂಗಡಿ: ಯುವತಿಯ ಜೊತೆ ಮಾತನಾಡಿದ್ದಕ್ಕೆ ತಂಡದಿಂದ ಯುವಕನೋರ್ವನಿಗೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ

(ನ್ಯೂಸ್ ಕಡಬ)newskadaba.com  ಹಾಸನ, ಏ.04. ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆ, ರೇಗಿಸಿದ ಯುವಕನಿಗೆ ಧರ್ಮದೇಟು ನೀಡಿ ಯುವತಿಯೊಬ್ಬಳು ತಕ್ಕಶಾಸ್ತಿ ಮಾಡಿದ್ದಾಳೆ. ಹಾಸನ ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗ ಈ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯ ಮುಂಭಾಗ ಯುವಕ ಚುಡಾಯಿಸಿದ್ದಾನೆ. ಇದರಿಂದ ಸಿಟ್ಟಾದ ಯುವತಿ, ಚಪ್ಪಲಿಯಿಂದ ಹೊಡೆದಿದ್ದಾಳೆ. ಯುವಕ ರೇಗಿಸಿದ್ದಲ್ಲದೆ, ಯುವತಿಯ ಮೇಲೆ ಕೈ ಮಾಡಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರು ಯುವಕನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ

ರೇಗಿಸಿದ ಯುವಕನಿಗೆ ಚಪ್ಪಲಿಯೇಟು ನೀಡಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top