crime

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.27. ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರನ್ನು ಬಂಧಿಸಿದ್ದು, ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ […]

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ ➤ 6 ತಿಂಗಳು ಜೈಲು ಶಿಕ್ಷೆ Read More »

ಕರಾವಳಿ

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮಾ.27. ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿಯ ಭಾವಚಿತ್ರವುಳ್ಳ ಕ್ಯಾಲೆಂಡರ್, ತಲವಾರು ಮತ್ತು ಮದ್ಯದ ಪ್ಯಾಕೇಟ್ ಗಳು ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್‌ನಲ್ಲಿ ನಡೆದಿದೆ. ಕಾರುವೊಂದರ ಬ್ರೇಕ್ ಡೌನ್‌ ಆಗಿದೆ. ಈ ವೇಳೆ ಕಾರನ್ನು ತಳ್ಳಲು ಮುಂದಾದಾಗ ಚಾಲಕ ಹಾಗೂ ಅಲ್ಲಿದ್ದವರ ನಡುವೆ ಮಾತಿನ ಚಕಮಕಿ ನಡೆದಿದೆ.ಆ ಸಂದರ್ಭ ಕಾರಿನ ಒಳಗೆ ನೋಡಿದಾಗ ಅದರಲ್ಲಿ ಮದ್ಯದ ಪ್ಯಾಕೇಟ್ ಗಳು, ಮಾರಕಾಸ್ತ್ರ ಮತ್ತು ಸಿ.ಟಿ.ರವಿಯ ಫೋಟೋ ಇರುವ ಕ್ಯಾಲೆಂಡರ್ ಪತ್ತೆಯಾಗಿವೆ ಎಂದು

ಅಪಘಾತವಾದ ಕಾರಿನಲ್ಲಿ ಸಿಟಿ ರವಿ ಫೋಟೋ ಇರುವ ಕ್ಯಾಲೆಂಡರ್, ಮದ್ಯ, ಮಾರಕಾಸ್ತ್ರ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ)newskadaba.com  ಮೈಸೂರು, ಮಾ.27. ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಸೋನಹಳ್ಳಿ ಗ್ರಾಮದಲ್ಲಿ ಗಂಡು ಮಗು ಆಗಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮ್ಮ ಮೇಲೆ ಪತಿ ಚಂದ್ರು ಹಲ್ಲೆ ನಡೆಸಿದ್ದಾನೆ. ಹಲ್ಲೆಗೆ ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ ಸಹಕಾರ ನೀಡಿರುವ ಆರೋಪ ಕೇಳಿ ಬಂದಿದೆ. ಕಿರುಕುಳ ತಾಳಲಾರದೆ ಕಳೆದ ವರ್ಷ ಎಚ್.ಡಿ.ಕೋಟೆ ಪೊಲೀಸರಿಗೆ ಶಿವಮ್ಮ ದೂರು (Complaint) ನೀಡಿದ್ದರು. ಸದ್ಯ ಪತಿ ಚಂದ್ರು ಬಂಧನವಾಗಿದ್ದು

ಪತ್ನಿಗೆ ಗಂಡು ಮಗು ಆಗಿಲ್ಲವೆಂದು ಪತಿಯಿಂದ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಮಾ.27. ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ 2 ಲೋಡ್ ಸೀರೆಗಳನ್ನು GST ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ಚಿಂತಾಮಣಿಗೆ ಟೆಂಪೋದಲ್ಲಿ ಸಾಗಿಸುತ್ತಿದ್ದಾಗ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ಕ್ರಾಸ್ ಬಳಿ ದಾಳಿ ಮಾಡಿ ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ವಸ್ತುಗಳು ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಸೀಕಲ್ ರಾಮಚಂದ್ರಗೌಡ ಎಂಬುವರಿಗೆ ಸೇರಿದ್ದು ಎನ್ನಲಾಗುತ್ತಿದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 22 ಲಕ್ಷ ಮೌಲ್ಯದ ಸೀರೆಗಳನ್ನು ಜಪ್ತಿ ಮಾಡಿದ GST ಅಧಿಕಾರಿಗಳು Read More »

ಕರ್ನಾಟಕ

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.27. ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಪುತ್ತೂರು ಕೋರ್ಟ್ ರೋಡ್ ನಲ್ಲಿ ಜಿನಸಿ ಅಂಗಡಿಯನ್ನು ಕಳೆದ ಹಲವು‌ ವರ್ಷಗಳಿಂದ ನಡೆಸುತ್ತಿದ್ದರು ಎನ್ನಲಾಗಿದೆ. ವಿಘ್ನೇಶ್ ಈ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ನೇತ್ರಾವತಿ ನದಿ ಬಳಿ ಸಂಶಯಾಸ್ಪದ ನೆಲೆಯಲ್ಲಿ ವಾಹನ‌ ಕಂಡ ಹಿನ್ನೆಲೆ ಸ್ಥಳೀಯರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಪುತ್ತೂರಿನ ಯುವಕ ಬಂಟ್ವಾಳದಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.27. ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಕಡೆಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ

ಕಾರು, ಬೈಕ್ ಮತ್ತು ಬಸ್ ನಡುವೆ ಸರಣಿ ಅಪಘಾತ ➤ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!          

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.25. ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ ಕಾರ್ಮಿಕ ಎಂದು ಗುರುತಿಸಲಾಗಿದೆ. ಸೋಮಶೇಖರ್ ಮತ್ತು ಶಾಂತಾ ಗದಗ ಮೂಲದ ಮುಂಡರಗಿ ತಾಲೂಕಿನವರು ಎಂದು ತಿಳಿದು ಬಂದಿದೆ. ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ

ಮನೆ ಕಾಮಗಾರಿ ವೇಳೆ ತಡೆಗೋಡೆ ಕುಸಿತ    ➤  ಮೂವರು ಕಾರ್ಮಿಕರ ಮೃತ್ಯು…!           Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..!

(ನ್ಯೂಸ್ ಕಡಬ)newskadaba.com ರಾಮನಗರ, ಮಾ.25. ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ನೊಂದ ಪ್ರೇಮಿಗಳು ರಾಮದೇವರ ಬೆಟ್ಟದಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿರುವುದು ನಡೆದಿದೆ. ಬೆಂಗಳೂರಿನ ನಾಗರಬಾವಿ ನಿವಾಸಿ ಚೇತನ್ (19) ಮತ್ತು ಕತ್ರಿಗುಪ್ಪೆಯ ಯುವತಿ (19) ಆತ್ಮಹತ್ಯೆಗೆ ಯತ್ನಿಸಿದವರು. ಬೆಂಗಳೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಚೇತನ್ ಬಿಇ ವ್ಯಾಸಂಗ ಮಾಡುತ್ತಿದ್ದರೆ, ಯುವತಿಯೂ ಬಿಕಾಂ ಓದುತ್ತಿದ್ದಾಳೆ. ಇಬ್ಬರೂ 5 ವರ್ಷಗಳಿಂದ ಪ್ರೀತಿಸುತ್ತಿದ್ದು, ಈ ವಿಚಾರ ಮನೆಯವರಿಗೂ ತಿಳಿದಿದೆ.  

ಮನೆಯವರಿಂದ ಪ್ರೀತಿ ನಿರಾಕರಣೆ ➤ 100 ಅಡಿ ಕಂದಕಕ್ಕೆ ಜಿಗಿದೂ ಬದುಕುಳಿದ ಪ್ರೇಮಿಗಳು..! Read More »

ಕರ್ನಾಟಕ

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕಾರವಾರ, ಮಾ.25. 545 ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣಕ್ಕೆಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಣಪತಿ ಭಟ್ ಕಳೆದ ಜುಲೈ 13 ರಂದು ಸಿಐಡಿ ವಿಚಾರಣೆ ಎದುರಿಸಿದ್ದರು. ತಟ್ಟೀಕೈ ಎಂ.ಆರ್‌.ಭಟ್ಟ ಅವರ ತೋಟದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

`PSI’ ನೇಮಕಾತಿ ಪ್ರಕರಣ   ➤  ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.25. ಮೊಬೈಲ್ ಶೋರೂಂ ವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಅವರು ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ

ಉಳ್ಳಾಲ: ಮನೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top