crime

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ

(ನ್ಯೂಸ್ ಕಡಬ)newskadaba.com  ಕೋಲಾರ, ಮಾ.22. ಯುವತಿಗೆ ಹೋಳಿ ಹಾಕಿದ್ದಕ್ಕೆ ಕಾನೂನು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಹಲ್ಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಧು ಬಿ.ಸಿ ಹಲ್ಲೆಗೊಳ್ಳಗಾದ ಕಾನೂನು ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮಧು ಡಿ.ಎನ್.ಡಿ ಮತ್ತು ಆತನ ಸ್ನೇಹಿತರಾದ ಶಿವರಾಜ್, ಅಭಿಲಾಷ್, ರಾಹುಲ್ ಹಾಗೂ ಪ್ರಮೋದ್ ವಿರುದ್ಧ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.    

ಯುವತಿಗೆ ಹೋಳಿ ಹಾಕಿದ್ದಕ್ಕೆ ವಿದ್ಯಾರ್ಥಿಯನ್ನು ಅಪಹರಿಸಿ, ಬೆತ್ತಲೆಗೊಳಿಸಿ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ

(ನ್ಯೂಸ್ ಕಡಬ)newskadaba.com ಗದಗ, ಮಾ.22. ತಾಯಿಯ ಅನೈತಿಕ ಸಂಬಂಧಕ್ಕೆ ಮಗಳು ಕೊಲೆಯಾಗಿರುವ ಆರೋಪ ಗದಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಮುಂಡರಗಿ ಪಟ್ಟಣದಲ್ಲಿ ಪರೀಕ್ಷೆ ಬರೆದು ಬಂದ ಅಪ್ರಾಪ್ತ ಬಾಲಕಿಯನ್ನು ಮೆಹಬೂಬ್ ಸಾಬ್ ಬಾಣದ ಎನ್ನುವಾತ ಕೊಲೆ ಮಾಡಿದ್ದಾನೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದಳು ಅದ್ಕೆ ಕೋಪಗೊಂಡ ಮೆಹಬೂಬ್ ಸಾಬ್‌ ಅವಳ ಕತ್ತು ಹಿಸುಕಿ, ಉಸಿರು ಗಟ್ಟಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸ್ತಿದ್ದಾರೆ.

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ

(ನ್ಯೂಸ್ ಕಡಬ)newskadaba.com  ಬೆಳಗಾವಿ, ಮಾ.22. ಸೂಕ್ತ ದಾಖಲಾತಿಗಳಿಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಈ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.  

ಸೂಕ್ತ ದಾಖಲೆಗಳಿಲ್ಲದೆ 9 ಲಕ್ಷ ರೂ. ನಗದು ಕಾರಿನಲ್ಲಿ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಮಾ.22. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 5,00,790 ರೂ. ಮೌಲ್ಯದ 220 ಚೀಲ ಪಡಿತರ ಅಕ್ಕಿಯನ್ನು ಬ್ರಹ್ಮಾವರ ತಾಲೂಕು ಆಹಾರ ನಿರೀಕ್ಷಕರು ಪೊಲೀಸರ ಸಹಕಾರದೊಂದಿಗೆ ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಸಾಗಾಟಕ್ಕೆ ಬಳಸಿದ ಕಂಟೈನರ್ ವಾಹನವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬ್ರಹ್ಮಾವರ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಬ್ರಹ್ಮಾವರ-ಹೆಬ್ರಿ ರಸ್ತೆಯಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬ್ರಹ್ಮಾವರ ಠಾಣಾ ಪಿಎಸ್‌ಐ ಹಾಗೂ ಸಿಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದ ತಾಲೂಕು ಆಹಾರ ನಿರೀಕ್ಷಕರು

ಬ್ರಹ್ಮಾವರ: ಅಕ್ರಮ ಅಕ್ಕಿ ಸಾಗಾಟ ➤ 5.7 ಲಕ್ಷ ರೂ. ಮೌಲ್ಯದ 220  ಚೀಲ ಪಡಿತರ ಅಕ್ಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ. ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದುಬಂದಿದೆ.  

ಆಟೋ ಮತ್ತು ಕಾರಿನ ನಡುವೆ ಸರಣಿ ಅಪಘಾತ..! ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು,

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..!

(ನ್ಯೂಸ್ ಕಡಬ) newskadaba.com ರಾಣೆಬೆನ್ನೂರು, ಮಾ. 21. ಲಂಚ ಪಡೆಯುವಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ. ಫಿರೋಜ್ ಎಂಬವರಿಗೆ ಬಾಡಿಗೆ ವಸೂಲಿ ಮಾಡಿಕೊಡಲು 40,000 ರೂಪಾಯಿ ಲಂಚ ಪಡೆಯುವಾಗ ರಾಣೆಬೆನ್ನೂರು ನಗರ ಪೊಲೀಸ್‌ ಠಾಣೆ ಸಬ್ ಇನ್ಸ್ಪೆಕ್ಟರ್ ಸುನಿಲ್ ತೇಲಿ ಅವರನ್ನು ದಾವಣಗೆರೆ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ಸುನಿಲ್ ತೇಲಿಯವರ ವಾಹನ ಚಾಲಕ ಸಚಿನ್ ಅವರನ್ನೂ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.  

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪಿಎಸ್‌ಐ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಕೆನಡಾ, ಮಾ. 21. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈತನ ಪೇಟವನ್ನು ಕಿತ್ತು  ಕೂದಲು ಹಿಡಿದು ಕಾಲುದಾರಿಯ ಉದ್ದಕ್ಕೂ ದುಷ್ಕರ್ಮಿಗಳ ಗುಂಪು ಎಳೆದಾಡಿ, ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ 

(ನ್ಯೂಸ್ ಕಡಬ) newskadaba.com ಬಾಂಗ್ಲದೇಶ, ಮಾ. 21. ಬಸ್ ಕಂದಕಕ್ಕೆ ಬಿದ್ದ ಪರಿಣಾಮ 17 ಜನರು ಮೃತಪಟ್ಟು, 30 ಜನರು ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಮದರಿಪುರದಲ್ಲಿ ನಡೆದಿದೆ. ಢಾಕಾಗೆ ತೆರಳುತ್ತಿದ್ದ ಬಸ್ ಮದರಿಪುರದ ಎಕ್ಸ್ ಪ್ರೆಸ್ ವೇನಲ್ಲಿ ಕಮರಿಗೆ ಬಿದ್ದಿದ್ದು, ಪರಿಣಾಮ 17 ಜನರು ಮೃತಪಟ್ಟಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಮದರಿಪುರ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಮಸೂದ್ ಆಲಂ ತಿಳಿಸಿದ್ದಾರೆ.

ಕಂದಕಕ್ಕೆ ಉರುಳಿ ಬಿದ್ದ ಬಸ್ ➤ 17 ಜನರು ಮೃತ್ಯು, ಹಲವರಿಗೆ ಗಾಯ  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top