crime

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ20.  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ರವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್‌ ನಿಂದ ಚಿನ್ನಾಭರಣ ಕಳುವುವಾದ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹೋದರಿಯ ಮದುವೆಗೆ ಚಿನ್ನಾಭರಣವನ್ನು ಧರಿಸಿದ ಬಳಿಕ ಅದನ್ನು ಬೇರೆ ಬೇರೆ ನಿವಾಸದಲ್ಲಿ ಐಶ್ವರ್ಯಾ ಅವರು ಲಾಕರ್‌ ನಲ್ಲಿ ಇಟ್ಟಿದ್ದಾರೆ. ಆಗಸ್ಟ್ 21, 2021 ರಲ್ಲಿ ಮಾಜಿ ಪತಿ ಧನುಷ್‌ ಅವರ ನಿವಾಸದಲ್ಲಿ ಲಾಕರ್‌ ಇಟ್ಟಿದ್ದರು. ಸೆಪ್ಟೆಂಬರ್ 2021 ರಲ್ಲಿ ಅದನ್ನು ಚೆನ್ನೈನ ಸೇಂಟ್ ಮೇರಿಸ್ […]

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಮಡಿಕೇರಿ, ಮಾ20.  ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್  ನಿಂದ ಬೇಸತ್ತ  7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು  ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ  7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್  ಮಾಡಲಾಗಿತ್ತು, ಇದರಿಂದ  ಖಿನ್ನತೆಗೊಳಗಾಗಿದ್ದ ಆಕೆ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಾಲೆಯಲ್ಲಿ ರ‍್ಯಾಗಿಂಗ್ ➤ ಬೇಸತ್ತು ಬಾಲಕಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.  ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ  ರೆಸ್ಟೋರೆಂಟ್  ಮಾಲೀಕ ಮತ್ತು ಅವರ ಪತ್ನಿಗೆ ರೂ.  3.7 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ.  ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ತಮ್ಮ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ. ವಂಚಕರು ಫೆಬ್ರವರಿ 28 ರಂದು ಬೆಸ್ಕಾಂ ಬಿಲ್ ಪಾವತಿ ಅಪ್ ಡೇಟ್ ಆಗಿಲ್ಲ 

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಮಾ.18. ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 36 ವರ್ಷದ ಮಹಿಳೆ ವ್ಯಕ್ತಿಯೊಬ್ಬ ಅತ್ಯಾಚಾರ ವೆಸಗಿದ ಘಟನೆ  ನಡೆದಿದೆ. ನಗರದ ಇಸ್ಲಾಬಾಬಾದ್ ಕಾಲೋನಿಯ ಮಹೆಬೂಬ್ ಪಾಶಾ ತಂದೆ ಮದರಸಾಬ್ (40) ಎಂಬಾತನೆ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದ್ದು, ಆತನನ್ನು ಬ್ರಹ್ಮಪುರ ಪೊಲೀಸ್ ಬಂಧಿಸಿದ್ದಾರೆ.

ಆಸ್ಪತ್ರೆಯಲ್ಲಿಯೇ ಮಹಿಳೆಯೋರ್ವರ ಮೇಲೆ ಅತ್ಯಾಚಾರವೆಸಗಿದ ಪಾಪಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಮಾ. 18. ಯುವಕನೋರ್ವನ ಮೃತದೇಹವು ಕೊಳೆತು ಹುಳುಗಳಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ ಹಕ್ಲಾಡಿ ಎಂಬಲ್ಲಿ ನಡೆದಿದೆ. ಸ್ಥಳೀಯರು ಓಡಾಡುತ್ತಿದ್ದ ಸಂದರ್ಭ ವಿಪರೀತ ವಾಸನೆ ಬರುತ್ತಿದ್ದು, ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಗಂಗೊಳ್ಳಿ ಪೊಲೀಸರಿಗೆ ಸುದ್ಧಿ ಮುಟ್ಟಿಸಿದ್ದು, ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಯಿತು. ಶವದ ಗುರುತು ಪತ್ತೆಯಾಗಿಲ್ಲ. ಅಲ್ಲದೇ ಯುವಕನನ್ನು ಯಾರಾದರೂ ಕೊಂದು ಹಾಕಿದ್ದಾರೆಯೇ

ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಕೈದಿಯನ್ನು ಶಾಪಿಂಗ್‌ ಮಾಲ್‌ ಗೆ ಕರೆದೊಯ್ದ 4 ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಲಕ್ನೋ, ಮಾ. 18. ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿಯನ್ನು ಶಾಪಿಂಗ್ ಮಾಲ್‌ ಗೆ ಕರೆದೊಯ್ದ ಆರೋಪದ ಮೇಲೆ ನಾಲ್ಕು ಜನ ಪೊಲೀಸರನ್ನು ಅಮಾನತುಗೊಳಿಸಿದ ಘಟನೆ  ಉತ್ತರಪ್ರದೇಶದಲ್ಲಿ ನಡೆದಿದೆ. ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಎಸ್‌ಐ ರಾಮ್‌ ಸೇವಕ್ ಮತ್ತು ಕಾನ್‌ಸ್ಟೆಬಲ್‌ ಗಳಾದ ಅನುಜ್ ಧಾಮ, ನಿತಿನ್ ರಾಣಾ ಮತ್ತು ರಾಮಚಂದ್ರ ಪ್ರಜಾಪತಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಲಕ್ನೋ ಪೊಲೀಸ್ ಕಮಿಷನರೇಟ್ ತಿಳಿಸಿದೆ.

ಕೈದಿಯನ್ನು ಶಾಪಿಂಗ್‌ ಮಾಲ್‌ ಗೆ ಕರೆದೊಯ್ದ 4 ಪೊಲೀಸರ ಅಮಾನತು Read More »

ರಾಷ್ಟ್ರೀಯ ನ್ಯೂಸ್

ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮಾ. 18. ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.  

ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು Read More »

ಕರ್ನಾಟಕ

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಮಾ. 17. 60 ವರ್ಷದ ವೃದ್ದನೋರ್ವ ತನ್ನ ಮೊಮ್ಮಗಳ ಮೇಲೆ ಅತ್ಯಾಚಾರ ನಡೆಸಿ ಬಳಿಕ ವಿಚಾರವನ್ನು ಯಾರೊಂದಿಗೂ ಹೇಳದಂತೆ ಬಾಯಿ ಮುಚ್ಚಿಸಲು 10 ರೂ ನೋಟನ್ನು ನೀಡಿದ ವಿಚಿತ್ರ ಘಟನೆ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ 60 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಗೋರಖ್‌ಪುರ ಪೊಲೀಸರು ಬಂಧಿಸಿದ್ದಾರೆ.   ಸೊಸೆ ಮತ್ತು ಮೊಮ್ಮಗಳು ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಅಜ್ಜ, ಸೊಸೆಯನ್ನು ಮನೆಗೆ ಹೋಗುವಂತೆ ಹೇಳಿ, ಮೊಮ್ಮಗಳನ್ನು ಕೊಡಲಿ ತರಲು

ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿ 10 ರೂ. ನೀಡಿದ ಅಜ್ಜ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ತಂದೆಯೇ ಕೊಂದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಆಶಾ(32) ಎಂದು ಗುರುತಿಸಲಾಗಿದೆ. ತಂದೆ- ತಾಯಿ ಜೊತೆ ವಾಸವಿದ್ದ ಆಶಾ, ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ತಂದೆ-ತಾಯಿಗೆ ನಿತ್ಯವೂ ಕಿರುಕುಳ ನಿಡುತ್ತಿದ್ದಳು ಎನ್ನಲಾಗಿದೆ. ಮಗಳ ಈ ವರ್ತನೆಯಿಂದ ಬೇಸತ್ತ ತಂದೆ ರಾತ್ರಿ ಮಲಗಿದ್ದ ಮಗಳ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top