crime

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವರನ್ನು ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೊಸಕೋಟೆಯಲ್ಲಿರುವ ಸ್ನೇಹಿತನ‌ ಮನೆಗೆ ಕಾರ್ಯಕ್ರಮಕ್ಕೆಂದು ವೆಂಕಟೇಶ್ ಹೋಗಿದ್ದ ವೇಳೆ ಗೋಪಾಲಸ್ವಾಮಿ ಎಂಬಾತ ರ‍್ಯಾಶ್‌ ಡ್ರೈವಿಂಗ್‌ ಮಾಡಿಕೊಂಡು ಬಂದಿದ್ದು, ಈ ವೇಳೆ ಇದನ್ನ ಪ್ರಶ್ನಿಸಿದಕ್ಕೆ ಕೊಡಿಗೇಹಳ್ಳಿಗೆ ಬಾ ನಿನ್ನನ್ನ ನೋಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದನು.

ರ‍್ಯಾಶ್‌ ಡ್ರೈವಿಂಗ್‌ ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಮಾ. 14. ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಈತ ಜಮೀನೊಂದರಲ್ಲಿ ತೆರೆದಿಟ್ಟ ಕೊಳವೆ ಬಾವಿಗೆ ಬಿದ್ದಿದ್ದು, ಈ ವಿಚಾರ ಅಧಿಕಾರಿಗಳಿಗೆ ತಿಳಿಯುತ್ತಿದ್ದಂತೆಯೇ ಎನ್‌ ಡಿಆರ್‌ ಎಫ್‌ ರಕ್ಷಣಾ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ. ಆ್ಯಂಬುಲೆನ್ಸ್, ಆಕ್ಸಿಜನ್‌, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್‌ ನೆರವನ್ನು ನೀಡಿದ್ದಾರೆ. ಆದರೂ ದುರದೃಷ್ಟವಶಾತ್ ಬಾಲಕ

ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 14. ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಗಾಂಜಾ ಸಹಿತ ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35) ಹಾಗೂ ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿರುವ ಕುರಿತು ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ

ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ➤ ಆರೋಪಿಗಳು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.14. ಕೊಚ್ಚಿ,ಕೂಟನ್ನಾಡ್- ಮಂಗಳೂರು, ಬೆಂಗಳೂರು ಅಂತರಾಜ್ಯ ಗ್ಯಾಸ್‌ ಪೈಪ್‌ ಲೈನ್‌ ಕಾಮಗಾರಿಯ ರೂ.30 ಲಕ್ಷ ಬೆಲೆಯ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಹರೇಕಳ ಗ್ರಾಮದ ಇನೋಳಿ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಐಎಲ್‌ ಆಂಡ್‌ ಎಫ್‌ ಎಸ್‌ ಕಂಪೆನಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಂಪೆನಿಯ ಎಡ್ಮಿನ್‌ ಆಫೀಸರ್‌ ಸತೀಶ್‌ ಪಾಲ್‌ ಎಂಬವರು ನೀಡಿರುವ ದೂರಿನಂತೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ಅಂತರಾಜ್ಯ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ    ➤ 30 ಲಕ್ಷ ರೂ. ಮೌಲ್ಯದ ಸೊತ್ತು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ     

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮಾ.10. ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು

(ನ್ಯೂಸ್ ಕಡಬ)newskadaba.com ಬಿಹಾರ, ಮಾ.10. ಗೋಮಾಂಸ ಸಾಗಾಟದ ಶಂಕೆಯಲ್ಲಿ ಗುಂಪು ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಘಟನೆ ಬಿಹಾರದ ಸರಣ್ ಜಿಲ್ಲೆಯಲ್ಲಿ ಸಂಭವಿಸಿದೆ. ಸಿವಾನ್ ಜಿಲ್ಲೆಯ ಹಸನ್ಪುರ ಪೊಲೀಸ್ ಠಾಣೆಯ ನಿವಾಸಿ ನಶೀಮ್ ಖುರೇಶಿ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಖುರೇಶಿ ಹಾಗೂ ಅವರ ಸೋದರಳಿಯ ರಸೂಲ್ಪುರದ ಮೂಲಕ ಜೋಗಿಯಾ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಬ್ಯಾಗ್ನಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಗ್ರಾಮಸ್ಥರ ಗುಂಪೊಂದು ಅವರನ್ನು ತಡೆದು ನಿಲ್ಲಿಸಿದೆ.ಗೋಮಾಂಸವನ್ನು ತೋರಿಸುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.  

ಗೋಮಾಂಸ ಸಾಗಾಟದ ಶಂಕೆ ➤ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು Read More »

ಕ್ರೈಮ್ ನ್ಯೂಸ್
Death, deadbody, Waterfall

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.10. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ಅನಾಹುತ ನಡೆದು ಬಸ್ ನಲ್ಲಿ ನಿದ್ರಿಸುತ್ತಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45).ಬೆಳಗಿನ ಜಾವ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.ಬಸ್ನಲ್ಲೇ ನಿದ್ರೆಗೆ ಜಾರಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಶೌಚಕ್ಕೆ ಹೋಗಿದ್ದ ಬಸ್ ಚಾಲಕ ಪ್ರಕಾಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

BMTC ಬಸ್ ನಲ್ಲಿ ದಿಡೀರ್ ಕಾಣಿಸಿಕೊಂಡ ಬೆಂಕಿ ! ➤ ನಿದ್ರೆಯಲ್ಲಿದ್ದ ಕಂಡೆಕ್ಟರ್ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​     

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.10. ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ ಸೇವನೆ ಪ್ರಕರಣದಲ್ಲಿ ಮಂಗಳೂರು ಪೊಲೀಸರಿಗೆ ಬೇಕಾಗಿದ್ದ ಎನ್ನಲಾಗಿದೆ. ಈತನನ್ನು ಕೇರಳದಲ್ಲಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆಯೂ ಆತ ಗಾಂಜಾ ನಶೆಯಲ್ಲಿರುವುದು ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ

ಎರಡು ಪ್ರತ್ಯೇಕ ಪ್ರಕರಣ !     ➤ ಗಾಂಜಾ ನಶೆಯಲ್ಲಿದ್ದ ಇಬ್ಬರು ಆರೋಪಿಗಳು ಅರೆಸ್ಟ್​      Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು !

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಮಾ.10. ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ. ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಧಿಸಿದ ಬಂಟ್ವಾಳ ಪೊಲೀಸರು ! Read More »

ಕರಾವಳಿ
Scroll to Top