crime

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.08. ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ಆರೋಪದ ಮೇರೆಗೆ ಸುಮಾರು 24 ವರ್ಷದ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಪೊಲೀಸರು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.  

ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ 24 ವರ್ಷದ ಮಹಿಳೆ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ. ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.  

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ !

(ನ್ಯೂಸ್ ಕಡಬ)newskadaba.com ತುಮಕೂರು, ಮಾ.07. ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು.

ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.07. ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(55) ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.  

ಬೆಳ್ತಂಗಡಿ: ಬೈಕ್ – ಸ್ಕಾರ್ಪಿಯೋ ಅಪಘಾತ…!     ➤  ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. 32 ವರ್ಷದ ಫಿಸಿಯೋಥೆರಪಿಸ್ಟ್ ನನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣ ಸಂಬಂಧ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೇಸ್ತ್ರಿ ವೀರ ಆಂಜನೇಯುಲು ಅಲಿಯಾಸ್ ಪುಲಿ (38), ಅನಂತಪುರದ ಗೋವರ್ಧನ್ ಅಲಿಯಾಸ್ ಡಿಜೆ (23) ಮತ್ತು ಬುಡ್ಡಪ್ಪ ಅಲಿಯಾಸ್ ಭಾಸ್ಕರ್ (46) ಆರೋಪಿಗಳು. ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಪೆನುಕೊಂಡದ ಶ್ರೀಧರ್ ಎಂಬಾತನನ್ನು ಕೊಲೆ ಮಾಡಿದ ಆರೋಪ ಇವರ ಮೇಲಿದೆ.  

ಫಿಸಿಯೋಥೆರಪಿಸ್ಟ್ ಹತ್ಯೆ ಪ್ರಕರಣ  ➤  ಮೂವರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ಹೊರ ರಾಜ್ಯದ ಪ್ರಯಾಣಿಕರನ್ನು ಮಾರ್ಗ ಮಧ್ಯೆ ಆಟೋದಿಂದ ಕೆಳಗೆ ಇಳಿಸಿ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಆಟೋ ಚಾಲಕರನ್ನು ಬೈಯಪ್ಪನಹಳ್ಳಿ ರೈಲ್ವೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಾಣಸವಾಡಿ ನಿವಾಸಿ ಆರ್‌.ರೋಬಿನ್‌ (48) ಮತ್ತು ಸೇವಾನಗರದ ಯುವರಾಜ್‌ (39) ಬಂಧಿತ ಆಟೋ ಚಾಲಕರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಟೋ, ಮೊಬೈಲ್‌, .1 ಸಾವಿರ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಆಟೋ ಹತ್ತಿದ್ದ ಅಸ್ಸಾಂ ಯುವಕರ ಬೆದರಿಸಿ ಹಣ ಸುಲಿಗೆ       ➤  ಆರೋಪಿಗಳು ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.07. ಡೆತ್ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ದಲಿತ ಹೋರಾಟಗಾರ ಕೆ.ಎಂ.ಸಂದೇಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂದೇಶ್ರನ್ನು ಗೆಳೆಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲವು ದಿನಗಳ ಹಿಂದೆ ದಲಿತ ಯುವತಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಕೊಡಿಸಲು ಮುಂದಾಗಿದ್ದ ಕೆ.ಎಂ.ಸಂದೇಶ್ರ ಮೇಲೆ ಪ್ರಕರಣವನ್ನು ದಾಖಲಿಸಿ ಜೈಲಿಗೆ ಕಳುಹಿಸಲಾಗಿತ್ತು ಎನ್ನಲಾಗಿದೆ. ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದ ಮೇಲೆ ತಾನು ಮಾಡದ ತಪ್ಪಿಗೆ ಆಗಿರುವ ಶಿಕ್ಷೆಯಿಂದ ಅಪಮಾನ

ಮಾಡದ ತಪ್ಪಿಗೆ ದಲಿತ ಯುವ ಹೋರಾಟಗಾರನಿಗೆ ಶಿಕ್ಷೆ ➤ ಮನನೊಂದು ಆತ್ಮಹತ್ಯೆ ಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

(ನ್ಯೂಸ್ ಕಡಬ)newskadaba.com  ಗುವಾಹಟಿ, ಮಾ.06. ಸ್ವತ: ತಂದೆಯೇ ತನ್ನ ಐದು ತಿಂಗಳ ಮಗನ ಕೈಕಾಲುಗಳನ್ನು ಮುರಿದು ಗಾಯಗೊಳಿಸಿರುವ ಅಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆ ಗುವಾಹಟಿ ಸಿಟಿಯ ಕಾಹಿಲಿಪರ್​ನ ಪತ್ರಕರ್ತರ ವಸಾಹತು ಕಾಲೊನಿಯಲ್ಲಿ ನಡೆದಿದೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಪ್ರಸ್ತುತ ಗುವಾಹಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಯಾಕೆ ಚಿತ್ರಹಿಂಸೆ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕ್ರೌರ್ಯ ಮೆರೆದ ಆರೋಪಿ ತಂದೆಯನ್ನು ಅಲ್ಕೇಶ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಗದತ್ತಾಪುರ ಠಾಣೆಯ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಆರೋಪಿ

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಬೆಂಗಳೂರು  ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ಲೈವ್ ವಿಡಿಯೋ ಮಾಡಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ದೇವನಹಳ್ಳಿ ಹೊರವಲಯದ ಒಜೋನ್ ಅರ್ಬನಾ ಅಪಾರ್ಟ್ಮೆಂಟ್ ಬಳಿ ನಡೆದಿದೆ. ತುಮಕೂರು ಮೂಲದ ಮಹಿಳೆ ಸುಮಯಾ ಬಾನು ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ‌ ಎರಡು ವರ್ಷಗಳ ಹಿಂದೆ ಪತಿ ಜೊತೆ ಈ ಮಹಿಳೆ ಡೈವರ್ಸ್ ಪಡೆದುಕೊಂಡಿದ್ದಳು. ಈ ವೇಳೆ ಮಗುವನ್ನ ತಾಯಿಯ ಸುಪರ್ದಿಗೆ ನೀಡಿಬೇಕು ಎಂದು ಕೋರ್ಟ್‌ ಆದೇಶವಿದ್ದು,

➤ ಮಗುವನ್ನು ನೋಡಲು ಮೊದಲ ಗಂಡ ಬಿಡುತ್ತಿಲ್ಲ ಎಂದು ತಾಯಿ ಆತ್ಮಹತ್ಯೆಗೆ ಯತ್ನ! Read More »

ಕರ್ನಾಟಕ
Scroll to Top