crime

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಫೆ.15.  ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಬೃಹತ್ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಶಂಕಿತ ಬೆಂಬಲಿಗರಿಗೆ ಸಂಬಂಧಿಸಿದಂತೆ ಈ ಪತ್ತೆ ಕಾರ್ಯಾಚರಣೆ ನಡೆದಿದೆ. ಕರ್ನಾಟಕದ ಅನೇಕ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಕೇರಳದ 60ಕ್ಕೂ ಅಧಿಕ ಪ್ರದೇಶಗಳಲ್ಲಿ ಕೂಡ ಭಯೋತ್ಪಾದನಾ ನಿಗ್ರಹ ತಂಡ ದಾಳಿ ಮಾಡಿದೆ. ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ […]

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ Read More »

ರಾಷ್ಟ್ರೀಯ ನ್ಯೂಸ್

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.13.  ಚೆಕ್ ಬೌನ್ಸ್ ಪ್ರಕರಣ ಕುರಿತು ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಡಿಸಿದೆ. ಮೂಡುಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ  8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ವಿಧಿಸಲಾಗಿದೆ. ಈ ಕುರಿತು ನ್ಯಾ.ಜೆ.ಪ್ರೀತ್ ಆದೇಶಿಸಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ 1,38,65,000 ಬಾಕಿ ಚೆಕ್ ಅಮೌಂಟ್ ಬಾಕಿ ಉಳಿಸಿಕೊಂಡಿದ್ದು,  ಹೂವಪ್ಪಗೌಡ ಅವರಿಂದ ಸಾಲ ಪಡೆದುಕೊಂಡಿದ್ದರು. ಸಾಲ‌ ಮರುಪಾವತಿ ಮಾಡದಿದ್ದಲ್ಲಿ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ

ಚೆಕ್ ಬೌನ್ಸ್ ಪ್ರಕರಣ; ಶಾಸಕ ಕುಮಾರಸ್ವಾಮಿಗೆ 6 ತಿಂಗಳ ಜೈಲು ಶಿಕ್ಷೆ…! Read More »

ಕರ್ನಾಟಕ

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಫೆ.13. ಎರಡು ತಿಂಗಳ ಹೆಣ್ಣು ಮಗುವಿನ ಕೆಮ್ಮು ವಾಸಿ ಮಾಡುತ್ತೇನೆಂದು ನಕಲಿ ವೈದ್ಯ ಬಿಸಿ ಕಬ್ಬಿಣದ ರಾಡ್‌ನಿಂದ ಕಾಯಿಸಿಟ್ಟ ಘಟನೆ ಗುಜರಾತ್ ನ‌ಲ್ಲಿ ಸಂಭವಿಸಿದೆ. ಘಟನೆಗೆ ಕುರಿತು ಮಗುವಿನ ತಾಯಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಸುರ್ಜೀತ್ ಮಹೇದು ತಿಳಿಸಿದ್ದಾರೆ.ಪೋರಬಂದರ್‌ನ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮಗುವಿಗೆ ಕಬ್ಬಿಣದ ರಾಡ್ ಕಾಯಿಸಿಟ್ಟ ನಕಲಿ ವೈದ್ಯ ➤ಮಗುವಿನ ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ

(ನ್ಯೂಸ್ ಕಡಬ) newskadaba.com ಬಿಜ್ನೋರ್, ಫೆ.13. ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದ ಕಾರಣಕ್ಕೆ ಆತನ ಶಾಲೆಯ ಪ್ರಾಂಶುಪಾಲರು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಲಿತ ವಿದ್ಯಾರ್ಥಿ ನೀಡಿದ ದೂರಿನ ಪ್ರಕಾರ, ನಡೆದ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರ್ಜ್ ತಿಳಿಸಿದ್ದಾರೆ. ವಿದ್ಯಾರ್ಥಿಯು ಮೇಜಿನ ಮೇಲೆ ಇಟ್ಟಿದ್ದ ಬಾಟಲಿಯಿಂದ ನೀರು ಕುಡಿದನು. ನಂತರ ಪ್ರಾಂಶುಪಾಲ ಯೋಗೇಂದ್ರ ಕುಮಾರ್

 ಬಾಟಲಿಯಲ್ಲಿ ನೀರು ಕುಡಿದಿದ್ದಕ್ಕೆ ಶಾಲೆಯ ಪ್ರಾಂಶುಪಾಲರಿಂದ ದಲಿತ ವಿದ್ಯಾರ್ಥಿಗೆ ಥಳಿತ Read More »

ರಾಷ್ಟ್ರೀಯ ನ್ಯೂಸ್

ಸಾಲದ ವಿಷಯಕ್ಕೆ ಉದ್ಯಮಿಯ ಕೊಲೆ ➤ವೈದ್ಯ ಅರೆಸ್ಟ್

(ನ್ಯೂಸ್ ಕಡಬ) newskadaba.com. ಬೆಳಗಾವಿ. ಫೆ.13.  ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ. ಉದ್ಯಮಿ ಗೋಕಾಕ್‌ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ  ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು. ಹಾಗೇ ಪೊಲೀಸರು ಉದ್ಯಮಿ ರಾಜು ಝಂವರ್‌ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ

ಸಾಲದ ವಿಷಯಕ್ಕೆ ಉದ್ಯಮಿಯ ಕೊಲೆ ➤ವೈದ್ಯ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿ ಅಪಹರಿಸಿ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಹಾಸನ. ಫೆ.12. ಹಾಸನದ ಉದ್ಯಮಿಯೋರ್ವನನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೀನ್ ಮತ್ತು ಸಾಗರ್ ಬಂಧಿತ ಆರೋಪಿಗಳು ಎಂದು ಎಸ್ಪಿ ಹರಿರಾಮ್ ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಹಾಸನದ ಗವೇನಹಳ್ಳಿ ಬೈಪಾಸ್ ಸಮೀಪ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದ ಲಿಖಿತ್‌ ಗೌಡ (26) ಹತ್ಯೆಗೀಡಾದ ಯುವಕನಾಗಿದ್ದು, ಈತನ ಮೃತದೇಹ ಇತ್ತೀಚೆಗೆ ಹಾಸನ ತಾಲೂಕಿನ ಯೋಗೀಹಳ್ಳಿ ಅರಣ್ಯದಲ್ಲಿ ಪತ್ತೆಯಾಗಿತ್ತು ಎನ್ನಲಾಗಿದೆ.  

ಉದ್ಯಮಿ ಅಪಹರಿಸಿ ಹತ್ಯೆ ಪ್ರಕರಣ ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳನ್ನು ಕತ್ತು ಹಿಸುಕಿ ಕೊಂದ  ಪಾಪಿ ತಂದೆ

(ನ್ಯೂಸ್ ಕಡಬ) newskadaba.com ರಾಯಚೂರು, ಫೆ.12. ಜಿಲ್ಲೆಯ ದೇವದುರ್ಗ ತಾಲೂಕಿನ ಜಕ್ಕಲದೊಡ್ಡಿ ಗ್ರಾಮದಲ್ಲಿ ಪತ್ನಿಯ ಶೀಲಶಂಕಿಸಿ ಮಕ್ಕಳಾದ ಶಿವರಾಜ್(5) ಹಾಗೂ ರಾಜು(3)ನನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ನಡೆದಿದೆ. ಹೆಂಡತಿ ಪ್ರಭಾವತಿ ಮೇಲೆ ಅನುಮಾನ ಪಡುತ್ತಿದ್ದ ಪತಿ ನಿಂಗಪ್ಪ, ಅಜ್ಜ-ಅಜ್ಜಿಯನ್ನು ಭೇಟಿ ಮಾಡಿಸೋದಾಗಿ  ಮಕ್ಕಳನ್ನು ಕರೆದೊಯ್ದು ಕತ್ತು ಹಿಸುಕಿ ಇಬ್ಬರು ಮಕ್ಕಳನ್ನು ಕೊಂದಿದ್ದಾನೆ. ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂಧನ ಮುಗಿಲು ಮುಟ್ಟಿದೆ. ಈ ಸಂಭಂದವಾಗಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಂದೆ ನಿಂಗಪ್ಪನನ್ನ ಬಂಧಿಸಲಾಗಿದೆ.

ಮಕ್ಕಳನ್ನು ಕತ್ತು ಹಿಸುಕಿ ಕೊಂದ  ಪಾಪಿ ತಂದೆ Read More »

ಕರ್ನಾಟಕ

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.11. ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್  Read More »

ರಾಷ್ಟ್ರೀಯ ನ್ಯೂಸ್

ಚಾಕು ಇರಿದು ಸ್ನೇಹಿತನ ಕೊಲೆ!

(ನ್ಯೂಸ್ ಕಡಬ)newskadaba.com.ಬೆಂಗಳೂರು. ಫೆ.11. ಹಳೆಯ ದ್ವೇಷಕ್ಕೆ ಚಾಕು ಇರಿದು ಗೆಳೆಯನ ಕೊಲೆಯಾಗಿದ್ದು, ಈ ಘಟನೆ ಬೆಂಗಳೂರಿನ ಕೋಣನಕುಂಟೆ ಯಲ್ಲಿ ನಡೆದಿದೆ. ಶರತ್ ಕುಮಾರ್ (25) ಕೊಲೆಯಾದ ಯುವಕನಾಗಿದ್ದಾನೆ. ಲೋಕೇಶ್ ಎಂಬಾತನಿಂದ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಶರತ್ ಕುಮಾರ್, ಮತ್ತು ಲೋಕೇಶ್ ಸ್ನೇಹಿತಾಗಿದ್ದರು.  ಹಣಕಾಸಿನ ವಿಚಾರಕ್ಕೆ ಗಲಾಟೆ ಮಾಡ್ಕೊಂಡು ಬೇರೆಯಾಗಿದ್ರು. ಇದೇ ವಿಚಾರ ಸಂಬಂಧ ಇಬ್ಬರ ನಡುವೆ ಗಲಾಟೆ ನಡೆದಿದೆ. ಶರತ್ ಕುಮಾರ್ ಮೊದಲು ಲೋಕೇಶ್ ಗೆ ಚಾಕು ಇರಿಯಲು ಮುಂದಾಗಿದ್ದನು, ಈ ವೇಳೆ ಲೋಕೇಶ್ 

ಚಾಕು ಇರಿದು ಸ್ನೇಹಿತನ ಕೊಲೆ! Read More »

ಕರ್ನಾಟಕ

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ದಂಪತಿ

(ನ್ಯೂಸ್ ಕಡಬ) newskadaba.com  ಗುರುಗ್ರಾಮ್,  ಫೆ.10.  ಮನೆ ಕೆಲಸದಾಕೆಗೆ ಹೊಡೆದು ಬಡಿದು ಚಿಮ್ಮಟಿಯಲ್ಲಿ ದೇಹದ ವಿವಿಧ ಭಾಗಗಳಿಗೆ ಸುಟ್ಟು ತೊಂದರೆ ನೀಡಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದು,  ಈ ದಂಪತಿ ಕೆಲಸ ಮಾಡುತ್ತಿದ್ದ ಸಂಸ್ಥೆಯೂ ಕೂಡ ಇವರನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ. 17 ವರ್ಷದ ಮನೆ ಕೆಲಸದಾಕೆಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಂಪತಿಯ ಬಂಧನವಾಗಿದೆ. ಅಲ್ಲದೇ ಅಪ್ರಾಪ್ತ ಬಾಲಕಿಯನ್ನು ಕೆಲಸಕ್ಕೆ ನಿಯೋಜಿಸಿದ ಪ್ಲೇಸ್‌ಮೆಂಟ್ ಸಂಸ್ಥೆಗಾಗಿಯೂ ಪೊಲೀಸರು ಹುಡುಕಾಟ ನಡೆಸಿದ್ದಾರೆ.  

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ದಂಪತಿ Read More »

ರಾಷ್ಟ್ರೀಯ ನ್ಯೂಸ್
Scroll to Top