crime

 ಮನೆ ಬಾಗಿಲಿಗೇ ಡ್ರಗ್ಸ್ ಡೆಲಿವರಿ ➤‌ 3 ಝೋಮ್ಯಾಟೋ ಬಾಯ್ಸ್ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10. ಮನೆ ಬಾಗಿಲಿಗೆ ಡ್ರಗ್ಸ್ ಪೂರೈಸುತ್ತಿದ್ದ ಮೂವರು ‘ಝೋಮ್ಯಾಟೋ’ ಫುಡ್‌ ಡೆಲಿವರಿ ಬಾಯ್ಸ್ ಹಾಗೂ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 11 ಮಂದಿ ಪ್ರತ್ಯೇಕವಾಗಿ ಸಿಸಿಬಿಗೆ ಸಿಕ್ಕಿ ಬಿದ್ದಿದ್ದಾರೆ. ತಾಂಜೇನಿಯಾದ ಟಿಬೇರಿಯಸ್‌ ನ್ಯಾಕುಂಡಿ, ಕೀನ್ಯಾದ ಕೆರ್ರಿ ಸಾರಾ, ಮೊಹಮ್ಮದ್‌ ರಿಜ್ವಾನ್‌, ಕೇರಳದ ರಾಗೇಶ್‌, ಸಚಿನ್‌, ಶಾಹುಲ್‌, ಹಲಸೂರಿನ ಪ್ರಶಾಂತ್‌ ಹಾಗೂ ಪಶ್ಚಿಮ ಬಂಗಾಳದ ಸಿದ್ಧಾಂತ್‌ ಸೇರಿದಂತೆ 11 ಮಂದಿ ಆರೋಪಿಗಳು ಬಂಧಿತರಾಗಿದ್ದಾರೆ  ಎಂದು ವರದಿಯಾಗಿದೆ. ಆರೋಪಿಗಳಿಂದ 926.45 ಗ್ರಾಂ ಎಡಿಎಂಎ ಕ್ರಿಸ್ಟೆಲ್‌, […]

 ಮನೆ ಬಾಗಿಲಿಗೇ ಡ್ರಗ್ಸ್ ಡೆಲಿವರಿ ➤‌ 3 ಝೋಮ್ಯಾಟೋ ಬಾಯ್ಸ್ ಬಂಧನ Read More »

ಕರ್ನಾಟಕ

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು!

(ನ್ಯೂಸ್ ಕಡಬ)newskadaba.com ಕುಪ್ವಾರ, ಫೆ.09. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್​ಪೋರಾದಲ್ಲಿ ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಮೂಲತಃ ಉತ್ತರಪ್ರದೇಶದವರಾಗಿದ್ದಾರೆ, ರಾತ್ರಿ ತಮ್ಮ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ, ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿ ಮಜಿದ್ ಅನ್ಸಾರಿ ಎಂಬಾತ ತನ್ನ ಕುಟುಂಬದೊಂದಿಗೆ ಕ್ರಾಲ್ಪೋರಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಐವರು ಕುಟುಂಬ ಸದಸ್ಯರು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕ್ಕಪಕ್ಕದ ಜನರು ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಉಸಿರುಗಟ್ಟುವಿಕೆ

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.08. ಖಾಸಗಿ ವಸತಿಗೃಹವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.  

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

  ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಮೃತ  ಪ್ರಕರಣ ➤ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.08. ಮೆಟ್ರೋ ಪಿಲ್ಲರ್ ಕುಸಿದು ತಾಯಿ‌ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದು ಒಂದು ತಿಂಗಳಾಗುತ್ತಾ ಬಂದರೂ ಇನ್ನು ಕಂಟ್ರಾಕ್ಟರ್ ಮೇಲೇ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನೊಂದು ಕಡೆ ಸಿಎಂ ಕಡೆಯಿಂದ ಘೋಷಣೆಯಾದ 10 ಲಕ್ಷ ಪರಿಹಾರ ಕೂಡ ಕುಟುಂಬಸ್ಥರಿಗೆ ದಕ್ಕಿಲ್ಲ. ಇನ್ನು ಬಿಎಂಆರ್​ಸಿಎಲ್ 20 ಲಕ್ಷ ಪರಿಹಾರವನ್ನು ನೀಡುತ್ತಿದ್ದು ಅದನ್ನು ತಿರಸ್ಕರಿಸಿರುವ ಕುಟುಂಬಸ್ಥರು, ಮೊದಲು ಕಂಟ್ರಾಕ್ಟರ್ ಲೈಸೆನ್ಸ್ ರದ್ದು‌ಮಾಡಿ, ಇದುವರೆಗೆ ಕಂಟ್ರಾಕ್ಟರ್ ಹಾಗೂ ಬಿಎಂಆರ್​ಸಿಎಲ್ ಅಧಿಕಾರಿಗಳ ವಿರುದ್ಧ ಸೂಕ್ತ

  ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಮೃತ  ಪ್ರಕರಣ ➤ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ಯುವಕ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವರಾಜ್‌( 33) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವರಾಜ್‌ ಅವರು ಜೂಜಾಟಕ್ಕೆ ರೇಣುಕಾರಾಧ್ಯ ಎಂಬ ವ್ಯಕ್ತಿಯಿಂದ 30 ಸಾವಿರ ರೂ. ಸಾಲ ಪಡೆದಿದ್ದ. ಈ ಮಧ್ಯೆ ರೇಣುಕಾರಾಧ್ಯ ಅವರಿಗೆ ಶಿವರಾಜ್‌ ಹಣ ವಾಪಸ್‌ ನೀಡದಿದ್ದಾಗ, ರೇಣುಕರಾಧ್ಯ ಅವರು ಶಿವರಾಜ್‌ ಅವರ ಬೈಕ್‌ ತೆಗೆದುಕೊಂಡು ಹೋಗಿದ್ದರು. ಇದರಿಂದ ನೊಂದಿದ್ದ ಶಿವರಾಜ್‌ ಸೆಲ್ಪಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ

ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯನಗರ, ಫೆ.06. ಕೃಷಿ ಕಾರ್ಯಕ್ಕಾಗಿ ಹಾಗೂ ನೀರಾವರಿ ಅನುಕೂಲಕ್ಕಾಗಿ ಜಮೀನಿನಲ್ಲಿ‌ ನಿರ್ಮಾಣ ಮಾಡಲಾಗಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ದುರಂತ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ನಾಗರಾಜ ಎಂಬುವರ ಕೃಷಿ ಹೊಂಡದಲ್ಲಿ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಅಭಿಶೇಕ್ (15), ಜಿತೇಂದ್ರ (10) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಉಪತಹಸೀಲ್ದಾರ ಶಂಕ್ರಪ್ಪ ಹಾಗೂ ಎಎಸ್ ಐ ಕರಿವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಕೃಷಿ ಹೊಂಡ ಬಳಿ ಚಪ್ಪಲಿಗಳು

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

(ನ್ಯೂಸ್ ಕಡಬ)newskadaba.com ಘಾಜಿಯಾಬಾದ್‌, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

‘ಬಾಲ್ಯವಿವಾಹವಾದ 1,800 ಮಂದಿ ಅರೆಸ್ಟ್’

(ನ್ಯೂಸ್ ಕಡಬ)newskadaba.com ಅಸ್ಸಾಂ, ಫೆ.03. ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ರಾಜ್ಯದಲ್ಲಿ ಈವರೆಗೆ 1,800ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳ ವಿರುದ್ದ ಹೋರಾಟಲು ಸರ್ಕಾರ ಬದ್ದವಾಗಿದೆ. ಈ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ ವಹಿಸಬೇಕೆಂದು ಪೊಲೀಸರಿಗೆ ಈಗಾಗಲೇ ಸೂಚಿಸಲಾಗಿದೆ. ಇಲ್ಲಿವರೆಗೆ ಬಾಲ್ಯವಿವಾಹವಾದ 1,800 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.  

‘ಬಾಲ್ಯವಿವಾಹವಾದ 1,800 ಮಂದಿ ಅರೆಸ್ಟ್’ Read More »

ರಾಷ್ಟ್ರೀಯ ನ್ಯೂಸ್
Scroll to Top