crime

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಜ.25. ಅನ್ಯಕೋಮಿನ ಜೋಡಿಯನ್ನು ತಂಡವೊಂದು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಹೊರವಲಯದ ಕನ್ಯಾಡಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಾಪೀರ್‌ ಎಂಬಾತ ವಿವಾಹಿತ ಹಿಂದೂ ಮಹಿಳೆಯ ಜತೆಯಾಗಿ ಧರ್ಮಸ್ಥಳಕ್ಕೆ ಬಂದಿದ್ದರು. ಅವರು ಲಾಡ್ಜ್ ನಲ್ಲಿ ರೂಂ ಪಡೆಯಲೆಂದು ಕನ್ಯಾಡಿಗೆ ಬಂದಿದ್ದರು. ಈ ವೇಳೆ ರೂಂ‌ ಕೊಟ್ಟಿಲ್ಲ. ಬಳಿಕ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತರು ಅವರನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಇಬ್ಬರ ಪೋಷಕರಿಗೂ ಮಾಹಿತಿ ನೀಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.  

ಧರ್ಮಸ್ಥಳ: ಅನ್ಯಕೋಮಿನ‌ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಪರಿವಾರದ ಕಾರ್ಯಕರ್ತರು Read More »

ಕರಾವಳಿ

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ       ➤ ಆರೋಪಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.25. ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಅನೇಕ ಬಾರಿ ಲೈಂಗಿಕ ಸಂಪರ್ಕ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ 20 ವರ್ಷಗಳ ಕಾರಾಗೃಹ ಹಾಗೂ 50 ಸಾವಿರ ರೂ. ದಂಡ, ದಂಡ ಕಟ್ಟಲು ತಪ್ಪಿದಲ್ಲಿ 6 ಕಠಿಣ ಕಾರಾಗೃಹ ವಾಸ ವಿಧಿಸಿ ನ್ಯಾಯಲಯ ಆದೇಶ ಹೊರಡಿಸಿದೆ. ಅಪರಾಧಿಯನ್ನು ಬಾಬಿ(48) ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಎರ್ಮಳಪಲ್ಕೆ ಎಂಬಲ್ಲಿ ಆರೋಪಿಯು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಲೈಂಗಿಕ ಸಂಪರ್ಕ ನಡೆಸಿದ್ದು, ಈ ಬಗ್ಗೆ ಬಾಲಕಿ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು,

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ       ➤ ಆರೋಪಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಜ.25. ವಧೆಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೋವು ಕಳ್ಳ ಸಾಗಣೆ ಮಾಡಿದ್ದ ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಸಾಬೀತಾಗಿದ್ದರಿಂದ ಅಪರಾಧಿಗಳಾದ ಶಿವಮೊಗ್ಗದ ಮಹಮ್ಮದ್‌ ನೂರುಲ್ಲಾ, ಸೈಯ್ಯದ್‌ ರಿಯಾಜ್‌, ಮುಕ್ರಮ್‌ಗೆ

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಡಗು, ಜ.25. ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ವರದಿಯಾಗಿದೆ. ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್‌ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ          

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಾರಾಗೃಹಕ್ಕೆ ವಾಪಾಸ್ ಕರೆತಂದ ವಿಚಾರಣಾಧೀನ ಕೈದಿಯ ಬಳಿ ಗಾಂಜಾ ಪತ್ತೆಯಾಗಿದೆ. ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮುಹಮ್ಮದ್ ಅಸ್ರು ಯಾನೆ ಮುಹಮ್ಮದ್ ಅಲಿ ಎಂಬಾತನನ್ನು ಇತರ ವಿಚಾರಣಾಧೀನ ಕೈದಿಗಳೊಂದಿಗೆ ಬಂಟ್ವಾಳದ ನ್ಯಾಯಾಲಯಕ್ಕೆ ಡಿಎಆರ್ ಬೆಂಗಾವಲಿನ ಮೂಲಕ ಕಳುಹಿಸಿಕೊಡಲಾಗಿತ್ತು ಎನ್ನಲಾಗಿದೆ. ಮರಳಿ ಕಾರಾಗೃಹಕ್ಕೆ ಬರುವಾಗ ಮುಖ್ಯದ್ವಾರದಲ್ಲಿ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದಾಗ ಆತನ ಬಳಿ ಪ್ಯಾಕ್ ಮಾಡಿಟ್ಟ ಗಾಂಜಾ ಪತ್ತೆಯಾಗಿದೆ ಎಂದು ಬರ್ಕೆ ಠಾಣೆಗೆ ನೀಡಿದ ದೂರಿನಂತೆ

ಬಂಟ್ವಾಳ:  ವಿಚಾರಣಾಧೀನ ಕೈದಿಯಿಂದ ಗಾಂಜಾ ವಶ           Read More »

ಕರಾವಳಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ

(ನ್ಯೂಸ್ ಕಡಬ)newskadaba.com ತಾಲಿಬಾನ್, ಜ.25. ಒಂದಲ್ಲ ಒಂದು ರೀತಿಯಲ್ಲಿ ಕಿತಾಪತಿ ಮಾಡುತ್ತಿರುವ ಚೀನಾಗ ಅಫ್ಘಾನಿಸ್ತಾನ ಬಿಸಿ ಮುಟ್ಟಿಸಿದ್ದು, ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇಬ್ಬರು ಚೀನಿ ಪ್ರಜೆಗಳನ್ನು ಬಂಧಿಸಿದೆ. 1,000 ಮೆಟ್ರಿಕ್ ಟನ್‌ ಲಿಥಿಯಂ-ಒಳಗೊಂಡಿರುವ ಬಂಡೆಗಳನ್ನು ಕಳ್ಳ ಸಾಗಾಣೆ ಮಾಡಿದ ಆರೋಪದಲ್ಲಿ ಇಬ್ಬರು ಚೀನಿ ಪ್ರಜೆಗಳು ಸೇರಿದಂತೆ ಐವರನ್ನು ಪೂರ್ವ ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪಟ್ಟಣದಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಗಳು ಅಫ್ಘಾನ್‌ ವ್ಯಕ್ತಿಗಳ ಜೊತೆ ಸೇರಿ ಪಾಕಿಸ್ತಾನದ ಮೂಲಕ ಬೆಲೆಬಾಳುವ ಕಲ್ಲುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು. ಪಾಕಿಸ್ತಾನ ಮತ್ತು

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತರು ಎಂದು ಗುರುತಿಸಲಾಗಿದೆ. ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ಅಕ್ರಮವಾಗಿ ಗೋಮಾಂಸ ತಯಾರಿಸುತ್ತಿದ್ದ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ಮದ್ದಡ್ಕ ಬಳಿ ನಡೆದಿದೆ. ಮದ್ದಡ್ಕದ ಹಮೀದ್‌ (46), ಬೇಲೂರು ಗೋಣಿಬೀಡಿನ ಇಸ್ಮಾಯಿಲ್‌ (41) ಮತ್ತು ಹ್ಯಾರಿಸ್‌ (30) ಪೊಲೀಸ್ ವಶವಾದವರು. ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆ

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com  ದಾವಣಗೆರೆ. ಜ.24. ಲಾರಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಮೃತಪಟ್ಟಿರುವ ಘಟನೆ ಹರಪನಹಳ್ಳಿಯ ಗೌಳೆರಹಟ್ಟಿ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಹಿರೇಮೆಗಳಗೆರೆ ಗ್ರಾಮದ ರಮೇಶ್ (30) ಮೃತ ಯುವಕ. ರಮೇಶ್ ಉಚ್ಚಂಗಿದುರ್ಗದಿಂದ ಹಿರೇಮೆಗಳಗೆರೆ ಕಡೆಗೆ ಹೋಗುತ್ತಿರುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಅನಂತರ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಘಟನೆ ಸ್ಥಳಕ್ಕೆ ಅರಸೀಕೆರೆ ಸಬ್ ಇನ್‌ಸ್ಪೆಕ್ಟರ್‌ ಎ. ಕಿರಣ್ ಕುಮಾರ್ ಭೇಟಿ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top