crime

ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 24. ಸೇಡಂ ಪಟ್ಟಣದ ವಿವಿಧೆಡೆ ನಿಲ್ಲಿಸಿದ್ದ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ 10 ಬೈಕ್‌ಗಳನ್ನು ಪತ್ತೆಹಚ್ಚುವಲ್ಲಿ ಸೇಡಂ ಪೊಲೀಸರು ಯಶಸ್ವಿಯಾಗಿದ್ದಾರೆ. ಸೇಡಂ ಪಟ್ಟಣದ ವೆಂಕಟೇಶ ನಗರ ನಿವಾಸಿ ಉಮರ್ ಮಹಿಬೂಬಖಾನ್, ಗಣೇಶ ನಗರ ನಿವಾಸಿ ಅಲ್ತಾಫ್ ಅಬ್ದುಲ್ ಸಲೀಂ ಎಂಬುವವರನ್ನು ಕಳ್ಳತನದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 73 ಲಕ್ಷ ರೂ. ಮೌಲ್ಯದ 10 ಬೈಕ್‌ ವಶಕ್ಕೆ ಪಡೆಯಲಾಗಿದೆ

ಬೈಕ್ ಕಳ್ಳತನ ಆರೋಪ: ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..!

(ನ್ಯೂಸ್ ಕಡಬ) newskadaba.com ಅ. 24. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಡ ಘಟನೆ ಕಬಕ- ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ಅಪಘಾತದಿಂದಾಗಿ ವ್ಯಕ್ತಿಯ ಕಾಲು ತುಂಡಾಗಿದೆ. ಪೆರ್ಲ ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳದಲ್ಲಿ ರೈಲ್ವೇ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದ್ದಾರೆ.

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಅ. 24. ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದು,

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 24. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆ ಕುರಿತ ಅವಘಡಗಳ ನಡುವೆಯೇ ಇತ್ತ ಯಲಹಂಕದಲ್ಲಿ ಇಂದು ಮುಂಜಾನೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕ ಮೇಲ್ಸೇತುವೆ ಮೇಲೆ ಇಂದು ಬೆಳಗ್ಗೆ 6 ರಿಂದ 6.30ರ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 7 ಕಾರುಗಳು ಅಪಘಾತಕ್ಕೀಡಾಗಿವೆ. ಪರಿಣಾಮ 7 ಕಾರುಗಳೂ ಒಂದರ ಹಿಂದೆ ಒಂದು ಗುದ್ದುಕೊಂಡು ಜಖಂ ಆಗಿದ್ದು, ಈ ಪೈಕಿ ಒಂದು ಕಾರಿನಲ್ಲಿದ್ದ ಮಗುವಿನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಹೆಚ್ಚಿನ

ಸರಣಿ ಅಪಘಾತ: 7 ಕಾರು ಜಖಂ, ಮಗುವಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ

(ನ್ಯೂಸ್ ಕಡಬ) newskadaba.com ಅ.23. ಕಳೆದ ಎರಡು ಮೂರು ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳು ಪ್ರತಿನಿತ್ಯ ರಾತ್ರಿ ಸುಳ್ಯದ ಕಾಯರ್ತೋಡಿ ಪರಿಸರದಲ್ಲಿ ಕೃಷಿಕರ ತೋಟಕ್ಕೆ ನುಗ್ಗಿ ಕೃಷಿ ಹಾನಿ ನಡೆಸುತ್ತಿರುವ ಕುರಿತು ವರದಿಯಾಗಿದೆ. ಹಗಲು ಹೊತ್ತಿನಲ್ಲಿ ಸಮೀಪದ ಪೂಮಲೆ ಕಾಡಿನಲ್ಲಿ, ಇರುವ ಅನೆಗಳು ರಾತ್ರಿ ವೇಳೆ ಕೃಷಿಕರ ತೋಟಕ್ಕೆ ಬಂದು ಕೃಷಿ ಹಾನಿ ನಡೆಸುತ್ತಿದೆ. ವಿಜಯ ಪಡ್ಡು ಎಂಬವರ ತೋಟಕ್ಕೆ ನುಗ್ಗಿದ ಆನೆಗಳು 3 ತೆಂಗಿನ ಗಿಡ ಮತ್ತು ಬಾಳೆ ಕೃಷಿ ನಾಶಪಡಿಸಿದೆ. ಈ ಭಾಗದಲ್ಲಿ ಹಳದಿ ರೋಗದಿಂದ

ತೋಟಕ್ಕೆ ನುಗ್ಗಿದ ಕಾಡಾನೆ- ಸುಳ್ಯದಲ್ಲಿ ಕೃಷಿ ಹಾನಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Crime

ತಲವಾರು ದಾಳಿ- ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಅ.23. ಪೂರ್ವದ್ವೇಷದ ಹಿನ್ನೆಲೆ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಲವಾರು ದಾಳಿ- ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..!

(ನ್ಯೂಸ್ ಕಡಬ) newskadaba.com ಅ.23. ನಕಲಿ ಆಧಾರ್ ಕಾರ್ಡ್ ಬಳಸಿ ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಜಿಲ್ಲಾ ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಬಂಧಿಸಿರುವ ಕುರಿತು ಶಿವಮೊಗ್ಗದಲ್ಲಿ ನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ ಮತ್ತು ಅಕ್ಟಲ್ ಅಕ್ಕು ಎಂದು ಗುರುತಿಸಲಾಗಿದೆ. ಇವರು ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ ನಾಲ್ಕನೇ ಅಡ್ಡ ರಸ್ತೆಯ ಜುಬೇರ್‌ ಎಂಬವರ ಮನೆಯಲ್ಲಿ ವಾಸವಿದ್ದು, ಕಟ್ಟಡದ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪಶ್ಚಿಮ ಬಂಗಾಳದಲ್ಲಿ

ಅಕ್ರಮ ಮೂವರು ಬಾಂಗ್ಲಾ ವಲಸಿಗರ ಬಂಧನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top