crime

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadab.com  ಉಪ್ಪಿನಂಗಡಿ, ಜ.18. ಟಯರ್‌ ರಿಸೋಲ್‌ ಸಂಸ್ಥೆಯೊಂದರಲ್ಲಿ ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್‌ ಬಳಿಯಲ್ಲಿ  ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  

ಉಪ್ಪಿನಂಗಡಿ: ಏರ್‌ ಕಂಪ್ರೈಸರ್‌ ಸ್ಫೋಟಗೊಂಡು ಕಾರ್ಮಿಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadab.com  ಪುತ್ತೂರು, ಜ.18. ಮುಂಡೂರು ಕಂಪದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯಶ್ರಿ(23)ನ್ನು ಕನಕಮಜಲು ನಿವಾಸಿ ಉಮೇಶ್ ನಿನ್ನೆ ಮನೆಗೆ ನುಗ್ಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಉಮೇಶ್, ಜಯಶ್ರಿಯ ಸಂಬಂಧಿಕನಾಗಿದ್ದು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಆತನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಇತ್ತೀಚೆಗೆ ಆತನಿಂದ ದೂರ ಸರಿದಿದ್ದಳು, ಇದೇ ಸಿಟ್ಟಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ !

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಭುವನೇಶ್ವರದಲ್ಲಿ ರೈಲ್ವೆಯ ನಿವೃತ್ತ ಪ್ರಧಾನ ಮುಖ್ಯ ವ್ಯವಸ್ಥಾಪಕರೊಬ್ಬರಿಗೆ (ವಾಣಿಜ್ಯ) ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿದ್ದು, 17 ಕೆ.ಜಿ ಚಿನ್ನ ಮತ್ತು ₹1.57 ಕೋಟಿ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಿವೃತ್ತರಾಗಿದ್ದ 1987ರ ಬ್ಯಾಚಿನ ಭಾರತೀಯ ರೈಲ್ವೆ ಸಂಚಾರ ಸೇವಾ ಅಧಿಕಾರಿ ಪ್ರಮೋದ್ ಕುಮಾರ್ ಜೇನಾ ಅವರ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಜ.3ರಂದು ಪ್ರಕರಣ ದಾಖಲಿಸಿತ್ತು.

ನಿವೃತ್ತ ರೈಲ್ವೆ ಅಧಿಕಾರಿಗೆ ಸೇರಿದ 17 ಕೆ.ಜಿ ಚಿನ್ನ ವಶ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು

(ನ್ಯೂಸ್ ಕಡಬ)newskadab.com  ಮಡಿಕೇರಿ, ಜ.18. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್‌ ಹಾಗೂ ತಾರಾ ದಂಪತಿಯ ಪುತ್ರ ರಕ್ಷಿತ್‌ ಅವರ ಪತ್ನಿ ಕಾವ್ಯಾ (23) ಮೃತಪಟ್ಟವರು ಎನ್ನಲಾಗಿದೆ. ರಕ್ಷಿತ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯಾ ಯಾವುದೇ ಪ್ರತಿಕ್ರಿಯೆ ಇಲ್ಲದೆ ಬಿದ್ದಿದ್ದರೆನ್ನಲಾಗಿದೆ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 4 ವರ್ಷಗಳ ಹಿಂದೆ ರಕ್ಷಿತ್‌ ಹಾಗೂ ಕಾವ್ಯಾ

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadab.com ಬಾಗಲಕೋಟೆ, ಜ.18. ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಜ. 18. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಾಣಿ- ಮೈಸೂರು ಹೆದ್ದಾರಿಯ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಅರಂತೋಡು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿದ ಮತ್ತಿನಲ್ಲಿ ಟವರ್ ಏರಿ ವ್ಯಕ್ತಿಯ ಹೈಡ್ರಾಮ ➤ ಸ್ಥಳಕ್ಕೆ ಜಡ್ಜ್ ಬರುವಂತೆ ಪಟ್ಟು..!

(ನ್ಯೂಸ್ ಕಡಬ) newskadaba.com ಧಾರವಾಡ, ಜ. 18. ಕುಡಿದ ಮತ್ತಿನಲ್ಲಿ ಮೊಬೈಲ್ ಟವರ್ ಏರಿ ವ್ಯಕ್ತಿಯೋರ್ವ ಹೈಡ್ರಾಮ ಸೃಷ್ಟಿಸಿರುವ ಘಟನೆ ಧಾರವಾಡದಲ್ಲಿ ವರದಿಯಾಗಿದೆ.     ಜಾವೇದ್ ದಲಾಯತ್ ಎಂಬಾತ ಮದ್ಯ ಸೇವಿಸಿ ಬಂದು, ಪೊಲೀಸರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೊಬೈಲ್ ಟವರ್‌ ಏರಿ ಕುಳಿತಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈತನ ಮನವೊಲಿಸಲು ಪ್ರಯತ್ನಿಸಿದರಾದರೂ, ನ್ಯಾಯಾಧೀಶರು ಬಂದರೆ ಮಾತ್ರ ಕೆಳಗಿಳಿಯುತ್ತೇನೆ ಎಂದು ಈತ ಪಟ್ಟು ಹಿಡಿದಿದ್ದ.

ಕುಡಿದ ಮತ್ತಿನಲ್ಲಿ ಟವರ್ ಏರಿ ವ್ಯಕ್ತಿಯ ಹೈಡ್ರಾಮ ➤ ಸ್ಥಳಕ್ಕೆ ಜಡ್ಜ್ ಬರುವಂತೆ ಪಟ್ಟು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.     ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕೊಂದು ಪರಾರಿಯಾದ ಪಾಪಿ ಗಂಡ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಶೀಲ ಶಂಕಿಸಿ ಪತ್ನಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಮನೆಯಿಂದಲೇ ಪರಾರಿಯಾಗಿರುವ ಘಟನೆ ಬೆಂಗಳೂರಿನ ಸುದ್ದುಗುಂಟೆಪಾಳ್ಯ ಠಾಣೆಯಲ್ಲಿ ದಾಖಲಾಗಿದೆ.  ತಾವರೆಕೆರೆಯ ಸುಭಾಷ್ ನಗರದ ನಿವಾಸಿ 22 ವರ್ಷದ ನಾಜ್ ಕೊಲೆಯಾದ ಮಹಿಳೆ. ನಾಜ್ 6 ತಿಂಗಳ ಹಿಂದಷ್ಟೇ ಖಾಸಗಿ ಕಂಪನಿ ಉದ್ಯೋಗಿ ನಾಸೀರ್ ಹುಸೇನ್ ಎಂಬುವವನನ್ನ ಪ್ರೀತಿಸಿ, ಪೋಷಕರ ಅನುಮತಿ ಪಡೆದು ಮದುವೆಯಾಗಿದ್ದಳು. ನಾಸೀರ್ ಹುಸೇನ್ ಗೆ ತಂದೆ ತಾಯಿ ಇರದ ಕಾರಣ ಮದುವೆಯ ಬಳಿಕ ತಾವರೆಕೆರೆಯ ಸುಭಾಷ್ ನಗರದ ಫ್ಲಾಟ್ ನಲ್ಲಿ

ಗರ್ಭಿಣಿ ಪತ್ನಿಯನ್ನು ಕೊಂದು ಪರಾರಿಯಾದ ಪಾಪಿ ಗಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ ➤ ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿವಂಗತ ಆರ್‌ಟಿಐ ಕಾರ್ಯಕರ್ತ ಆರ್. ಮೂರ್ತಿ ಅವರ ಕುಟುಂಬ, ಮೂರ್ತಿ ಅವರ ಹತ್ಯೆಗೆ ರಾಜ್ಯದ ಪೊಲೀಸ್ ಇಲಾಖೆಯೇ ಹೊಣೆ ಎಂದು ಆರೋಪಿಸಿದೆ. ಇದೇ ವೇಳೆ ರಾಜ್ಯದಲ್ಲಿ ಆರ್‌ಟಿಐ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಆರ್‌ಟಿಐ ಕಾರ್ಯಕರ್ತರ ವೇದಿಕೆ ಎಚ್ಚರಿಕೆ ನೀಡಿದೆ. ಬೆಂಗಳೂರಿಗೆ ಸಮೀಪದಲ್ಲಿರುವ ಕನಕಪುರ ಪಟ್ಟಣದ ಸಮೀಪದ ಕುರುಬಳ್ಳಿದೊಡ್ಡಿ ಗ್ರಾಮದ ನಿವಾಸಿ ಮೂರ್ತಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೂರ್ತಿ ಅವರು ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ

ಪಂಚಾಯಿತಿಯ ಅಕ್ರಮ ಬಯಲಿಗೆಳೆದಿದ್ದ ಆರ್‌ಟಿಐ ಕಾರ್ಯಕರ್ತನ ಹತ್ಯೆ ➤ ಪೊಲೀಸರ ವೈಫಲ್ಯವೇ ಕಾರಣ ಎಂದ ಕುಟುಂಬ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top