crime

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು […]

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..!

(ನ್ಯೂಸ್ ಕಡಬ)newskadaba.com  ಮೈಸೂರು, ಜ.16. ನಕಲಿ ರಸಗೊಬ್ಬರ ತಯಾರಿ ದಾಸ್ತಾನು ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಶ್ಯಾದನಹಳ್ಳಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ದಾಸ್ತಾನು ಘಟಕದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. 50ಕ್ಕೂ ಹೆಚ್ಚು ನಕಲಿ ರಸಗೊಬ್ಬರದ ಚೀಲ ಕಚ್ಚಾ ವಸ್ತು ಚೀಲ ಹೊಲೆಯುವ ಯಂತ್ರ ವಶಕ್ಕೆ ಪಡೆದಿದ್ದಾರೆ. ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮಹೇಶ್ ಎಂಬುವವರಿಂದ ನಕಲಿ ರಸಗೊಬ್ಬರ ತಯಾರಿ ಆರೋಪ

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ನನ್ನ ಗ್ರಹಚಾರವೊ, ಏನೋ, ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನನ್ನ ಜೀವನದಲ್ಲಿ ನಾನೆಂದೂ ನೋಡಿಲ್ಲ. ನನ್ನ ಪರಿಸ್ಥಿತಿ ಬೇರೆ ಯಾರಿಗೂ ಬರಬಾರದು. ಘಟನೆ ಬಳಿಕ ಸರ್ಕಾರದಿಂದ ನನ್ನ ಕುಟುಂಬಕ್ಕೆ ಪರಿಹಾರ ತೆಗೆಸಿಕೊಡುವುದಾಗಿ ಜನಪ್ರತಿನಿಧಿಗಳು, ಸಚಿವರು ಭರವಸೆ ನೀಡಿ ಹೋಗಿದ್ದಾರೆ.  ಹೊಸ ರಿಕ್ಷಾ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ. ಆದರೆ, ಇದುವರೆಗೂ ಯಾವ ಪರಿಹಾರವೂ ಸಿಕ್ಕಿಲ್ಲ. ತುಂಬ ಕಷ್ಟದಿಂದ ಬದುಕು ಸಾಗಿಸುತ್ತಿದ್ದೇವೆ ಇದು ಮಂಗಳೂರಿನ ನಾಗುರಿಯಲ್ಲಿ  ಚಲಿಸುತ್ತಿದ್ದ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಆಟೋ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಕೊಡಗು, ಜ. 16. ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ತಮ್ಮಯ್ಯ ಎನ್ನಲಾಗಿದ್ದು, ಈತನೂ ಆತ್ಮಹತ್ಯೆ ಮಾಡಿರುವ ಶಂಕೆ‌ ಇದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನವಜಾತ ಹೆಣ್ಣು ಶಿಶು ಪತ್ತೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.16. ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಗೊಲ್ಲನರಸಪ್ಪ ಕಾಲೋನಿಯ ಕೃಷ್ಣ ಗುಡಿ ಹತ್ತಿರ ರೈಲ್ವೇ ಗೇಟ್ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ವಾರಸುದಾರರು ತಿಳಿದಿರುವುದಿಲ್ಲ.  ಚಹರೆ: ಎಣ್ಣೆಗೆಂಪು, ದುಂಡುಮುಖ ಹೊಂದಿದ್ದು, ಕಪ್ಪು ಕೂದಲು ಇರುತ್ತವೆ. ನವಜಾತ ಹೆಣ್ಣು ಶಿಶುವಿನ ಪೋಷಕರ ಬಗ್ಗೆ ಮಾಹಿತಿ ದೊರೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅವರ ಮೊ.9480803088 ಅಥವಾ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.  

ನವಜಾತ ಹೆಣ್ಣು ಶಿಶು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆ.ಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ 35ಕ್ಕೂ ಅಧಿಕ ಕಳ್ಳತನ‌ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕು ಪಡಂಗಡಿ-ಮದ್ದಡ್ಕ ನಿವಾಸಿ ಕುಂಞಿಮೋನು ಯಾನೆ ಜಾಫರ್‌ ಯಾನೆ ಹಮೀದ್ (48) ಎಂದು ಗುರುತಿಸಲಾಗಿದೆ. ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ

ಮಂಗಳೂರು: ಕದ್ದ ಹಣ ಮಣ್ಣಿನಡಿ ಹೂತಿಟ್ಟ ಖದೀಮ..! ➤  ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com  ಉಡುಪಿ, ಜ..16. ಅಡಿಕೆ ಕೀಳುತ್ತಿದ್ದ ವ್ಯಕ್ತಿಯೊಬ್ಬರು ಮರ ಮುರಿದು ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ನಗರದ ಬಸ್ ನಿಲ್ದಾಣದ ಸಮೀಪದ ಮತ್ತದಬೆಟ್ಟು ನಿವಾಸಿ ಶ್ಯಾಮ್ ಅಂಚನ್ (59) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶ್ಯಾಮ್ ಅವರು ಮರದಿಂದ ಅಡಿಕೆ ಕೀಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಳಿಕ ಮೃತಪಟ್ಟರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರು ಪರ್ಕಳದಲ್ಲಿ ಪಾಲುದಾರಿಕೆಯಲ್ಲಿ ಬೇಕರಿ ನಡೆಸುತ್ತಿದ್ದರು

ಉಡುಪಿ: ಅಡಿಕೆ ಕೀಳುವ ಸಮಯದಲ್ಲಿ ಮುರಿದು ಬಿದ್ದ ಮರ…!! ➤ ವ್ಯಕ್ತಿಯೋರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top