crime

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 […]

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು    

(ನ್ಯೂಸ್ ಕಡಬ)newskadaba.com  ಹೆಬ್ರಿ, ಜ.11. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.      

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು  

(ನ್ಯೂಸ್ ಕಡಬ) newskadaba.com  ಹಾಸನ, ಜ.11. ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ವಾಸದ ಮನೆಯ ಹೊರಗೆ ಮತ್ತು ಒಳಗೆ ಇದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು ಕೆಲವೇ ನಿಮಿಷಗಳ ಅಂತರದಲ್ಲಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಮೂವರು ವಾಸವಾಗಿದ್ದು ಅದೃಷ್ಟವಶಾತ್‌ ಕೂದಲೆಳೆ

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ             

(ನ್ಯೂಸ್ ಕಡಬ) newskadaba.com  ವಿಜಯನಗರ, ಜ.11. ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಅಸ್ವಸ್ಥರಾದ ಘಟನೆ ವಿಜಯನಗರದಲ್ಲಿ ವರದಿಯಾಗಿದೆ. ಮೃತರನ್ನು ನಗರದ ರಾಣಿಪೇಟೆಯ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಹೊಸಪೇಟೆ ನಗರದ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಅಂತ ಸ್ಥಳೀಯರು ಹೇಳಿದ್ದಾರೆ. 40 ಕ್ಕೂ ಹೆಚ್ಚು ಜನರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆಂದು ತಿಳಿದು ಬಂದಿದೆ.  ಕಲುಷಿತ ನೀರು ಸೇವಿಸಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು ➤  40 ಕ್ಕೂ ಹೆಚ್ಚು ಜನರು ಅಸ್ವಸ್ಥ              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!           

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಜ.11. ಯುವಕನೊರ್ವನ ಮೃತದೇಹ ನದಿಯ ಅಣೆಕಟ್ಟಿನ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಸೋಮವತಿ ನದಿ ಸಂಗಾತಿನಗರ ರಸ್ತೆಯ ಬದಿಯಲ್ಲಿರುವ ಕಿಂಡಿ ಅಣೆಕಟ್ಟಿನಲ್ಲಿ ಲಾಯಿಲ ಗ್ರಾಮದ ಅಯೋಧ್ಯನಗರದ ನಿವಾಸಿ ಕಿರಣ್ (27) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಶವ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ

ಬೆಳ್ತಂಗಡಿ:  ಯುವಕನೋರ್ವನ ಮೃತದೇಹ ಪತ್ತೆ…!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!!

(ನ್ಯೂಸ್ ಕಡಬ) newskadaba.com ಮಂಡ್ಯ, ಜ.10. ಒಬ್ಬಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ಹಾಸಿಗೆಯಲ್ಲಿ ಮಲಗಿಸಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯ ಗ್ರಾಮದ ಬಳಿ ವರದಿಯಾಗಿದೆ. ಮೃತರನ್ನು ಪ್ರೇಮ(42) ಎಂದು ಗುರುತಿಸಲಾಗಿದೆ. ಮೃತ ಪ್ರೇಮರ ದೇಹವು ಸಂಪೂರ್ಣ ಸುಟ್ಟು ಹೋಗಿದ್ದು ಬೆಸಗರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ನಿಧನದ ಬಳಿಕ ಒಂಟಿಯಾಗಿದ್ದ ಪ್ರೇಮ ಅವರ ಓರ್ವ ಪುತ್ರನೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು ಎನ್ನಲಾಗಿದೆ.

ಒಂಟಿ ಮಹಿಳೆಯೋರ್ವಳನ್ನು ಹತ್ಯೆ ಮಾಡಿ ನಂತರ ಮೃತದೇಹಕ್ಕೆ ಬೆಂಕಿ ಹಚ್ಚಿದ ಪಾಪಿಗಳು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..! 

(ನ್ಯೂಸ್ ಕಡಬ)newskadaba.com  ಜಮ್ಮು ಕಾಶ್ಮೀರ, ಜ.09. ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು,  14 ಮಂದಿ ಗಾಯಗೊಂಡಿದ್ದರು. ಈ ದಾಳಿ ನಡೆದ ಸ್ಥಳೀಯ ಸ್ವಯಂ ಸೇವಕರನ್ನೊಳಗೊಂಡ ಹಳ್ಳಿಯ ರಕ್ಷಣಾ ಗಾರ್ಡ್ ನ್ನು ಆಡಳಿತ ಬಲಗೊಳಿಸಿತ್ತು. ಸಂಭಾವ್ಯ  ಒಳನುಸುಳುವಿಕೆ ಮಾರ್ಗಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು ಎಂದು ಅಧಿಕಾರಿಗಳು

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!    

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top