crime

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ […]

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ

ಕಟ್ಟಡ ಕುಸಿತ ಅವಘಡ: ಮೃತರ ಸಂಖ್ಯೆ 5ಕ್ಕೆ ಏರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ

(ನ್ಯೂಸ್ ಕಡಬ) newskadaba.com ಅ.23. ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ತಾಲೂಕು ಕನ್ಯಾಡಿ ಗ್ರಾಮದ ಗುರಿಪಳ್ಳ ಎಂಬಲ್ಲಿ ನಡೆದಿದೆ. ದಾಳಿಯ ವೇಳೆ ಪ್ರವೀಣ್ ರೋಡ್ರಿಗಸ್ ಎಂಬಾತ ಮನೆಯಲ್ಲಿ ಅಕ್ರಮವಾಗಿ ತಯಾರಿಸಿ ಪ್ಲಾಸ್ಟಿಕ್‍ ಕ್ಯಾನ್ ನಲ್ಲಿ ಸಂಗ್ರಹಿಸಿಟ್ಟಿದ್ದ 18.75 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ ಕಳ್ಳಬಟ್ಟಿ ತಯಾರಿಸಲು ಪ್ಲಾಸ್ಟಿಕ್ ಡ್ರಮ್ ನಲ್ಲಿ ಶೇಖರಿಸಿ ಇಟ್ಟಿರುವ 37 ಲೀಟರ್ ವಾಶ್ ಅನ್ನು ಮತ್ತು ಕಳ್ಳಬಟ್ಟಿ

ಅಬಕಾರಿ ದಾಳಿ- ಕಳ್ಳಬಟ್ಟಿ ಸಾರಾಯಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ದಾವಣಗೆರೆ, ಅ.23. ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಮೃತಪಟ್ಟಿರುವ ಶಂಕೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಎಂದು ಗುರುತಿಸಲಾಗಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಮೃತಪಟ್ಟಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ

ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ 5 ಮಂದಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ನಗರದ ಹಲವೆಡೆ ಹೆಲ್ಮೆಟ್‌ ಕಳವು ಮಾಡಲಾಗುತ್ತಿದ್ದು, ಓರ್ವ ಹೆಲ್ಮೆಟ್‌ ಕಳ್ಳನ ಕೈ ಚಳಕದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ನಗರದ ವಾಣಿಜ್ಯ ಕಟ್ಟಡವೊಂದರ ಸಮೀಪ ನಿಲ್ಲಿಸಿದ್ದ ಬೈಕ್‌ನಲ್ಲಿದ್ದ ಹೊಸ ಹೆಲ್ಮೆಟನ್ನು ಕಳ್ಳ ಕಳವು ಮಾಡಿದ್ದು, ಆತನ ಬಳಿ ಇದ್ದ ಹಳೆಯ ಹೆಲ್ಮೆಟನ್ನು ಬೈಕ್‌ನ ಮೇಲಿಟ್ಟು ಹೋಗಿದ್ದಾನೆ. ಬಳಿಕ ತಾನು ಬಂದಿದ್ದ ಸ್ಕೂಟರ್‌ನಲ್ಲಿ ಮರಳಿದ್ದಾನೆ. ಈತ ಇದೇ ರೀತಿ ಹಲವೆಡೆ ಹೆಲ್ಮೆಟ್‌ ಕದ್ದಿರುವ ಶಂಕೆ ವ್ಯಕ್ತವಾಗಿದೆ.  

ಹೆಲ್ಮೆಟ್‌ ಕಳವು: ಸಿಸಿ ಕೆಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಅ. 23. ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಕುರಿತು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಎಂಬಲ್ಲಿಂದ ವರದಿಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕೆಲಸ ಮಾಡುವವರು ನೋಡಿದ್ದು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ, ಸಬ್ ಇನ್ಸ್‌ಪೆಕ್ಟರ್ ಮುರಳೀಧರ್ ನಾಯ್ಕ್ ಸೇರಿದಂತೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಗುರುತಿಸಲು ಅಸಾಧ್ಯವಾಗಿದೆ. ಫೋರೆನಿಕ್ಸ್ ಲ್ಯಾಬ್ ಅಧಿಕಾರಿಗಳ

ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ..! ಪೊಲೀಸರಿಂದ ಪರಿಶೀಲನೆ Read More »

ಕ್ರೈಮ್ ನ್ಯೂಸ್

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

(ನ್ಯೂಸ್ ಕಡಬ) newskadaba.com ಅ. 22. ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾ ಎಂಬಾತನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕಾನೂನು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ರಾಣಾ ಹಸ್ತಾಂತರದ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಈ

ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Death, deadbody, Waterfall

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top