crime

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ.04. 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ವರದದಿಯಾಗಿದೆ. ಪ್ರಮುಖ ಆರೋಪಿಯನ್ನು ಕಮಲ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ […]

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು              

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಶಾಸಕ ಯು.ಟಿ.ಖಾದರ್ ಅವರಿಗೆ ಫೋನ್ ಕರೆ ಮಾಡಿ ರಾಹುಲ್ ಗಾಂಧಿ ಅವರ ಆಪ್ತ ಸಹಾಯಕ ಎಂದು ಹೇಳಿ ವಂಚಿಸಲು ಯತ್ನಿಸಿರುವ ಆರೋಪ ಕೇಳಿ ಬಂದಿದೆ ಎಂದು ವರದಿಯಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಫೋನ್ ಕರೆ ಮಾಡಿದ್ದು, ಕಾರ್ಯಕ್ರಮದಲ್ಲಿದ್ದ ಹಿನ್ನೆಲೆ ಅವರಿಗೆ ಕರೆ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಎರಡು ಬಾರಿ ಪೋನ್ ಕರೆ ಬಂದಿತ್ತು. ಸಭೆ ಮುಗಿಸಿ ಮೊಬೈಲ್‌ನ್ನು ಪರಿಶೀಲಿಸಿದಾಗ ರಾಹುಲ್ ಗಾಂಧಿಯ

ಮಂಗಳೂರು : ಶಾಸಕ ಯು.ಟಿ ಖಾದರ್ ಗೆ ವಂಚಿಸಲು ಯತ್ನ..!!      ➤ ಆರೋಪಿಯ ವಿರುದ್ದ ದೂರು ದಾಖಲು               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ತಣ್ಣೀರಬಾವಿ ಬೀಚ್ ಬಳಿ ಬ್ಲಾಕ್ ಆಗಿದ್ದ ಕಾರಣಕ್ಕೆ, ಅಲ್ಲಿ ಸೇರಿದ್ದ ಯುವಕರ ಮೇಲೆ ಹಾಗೂ 6 ನೇ ತರಗತಿ ವಿದ್ಯಾರ್ಥಿ ಮೇಲೆ ಲಾಠಿ ಏಟು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಠಾಣೆಯ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿ ಘಟನೆಗೆ ಸಂಬಂಧಪಟ್ಟಂತೆ ಸಿಬ್ಬಂದಿ

ತಣ್ಣೀರುಬಾವಿ ಲಾಠಿ ಚಾರ್ಜ್ ಪ್ರಕರಣ..!!! ➤ ಪೊಲೀಸ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!!

(ನ್ಯೂಸ್ ಕಡಬ) newskadaba.com  ರಾಯ್‌ಪುರ, ಜ.03. ರಾಯ್ ಪುರ ದಕ್ಷಿಣಕ್ಕೆ 350 ಕಿ.ಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್  ಅನ್ನು ಧ್ವಂಸಗೊಳಿಸಲಾಯಿತು ಎಂದು ತಿಳಿದುಬಂದಿದೆ. ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಂದ ಎರಡು ಸಣ್ಣ ಚರ್ಚ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಎಸ್‌ಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                  

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.03. ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್ ಯಾನೆ ನಿಜಾಂ (32), ಜೆಪ್ಪು ನಿವಾಸಿ ರಜೇಮ್ ಯಾನೆ ರಾಫಿ(31) ಎಂದು ಗುರುತಿಸಲಾಗಿದೆ. ನಂತೂರು ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರನ್ನು ಕಂಡು, ಸ್ಕೂಟರ್ ನಲ್ಲಿ ಬಂದ

ಖೋಟಾ ನೋಟು ಸಾಗಿಸಿ ಚಲಾವಣೆಗೆ ಯತ್ನ – 4.5 ಲಕ್ಷ ರೂ. ವಶ ➤ ಆರೋಪಿಗಳು ಅರೆಸ್ಟ್..!!!                                                   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ. ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.    

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

(ನ್ಯೂಸ್ ಕಡಬ) newskadaba.com  ಪುತ್ತೂರು, ಜ.03. ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ಸಂಭವಿಸಿದೆ. ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.    

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು   

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.03. ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕೊಣಾಲು ಗ್ರಾಮದ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮರವರು ತೋಟಕ್ಕೆ ತೆರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.      

ನೆಲ್ಯಾಡಿ : ಕಾಲು ಜಾರಿ ಕೆರೆಗೆ ಬಿದ್ದು ಓರ್ವ ಮಹಿಳೆ ಮೃತ್ಯು    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top