crime

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಡಿ. 30. ಇಲ್ಲಿನ ಡಿಟಿಡಿಸಿ ಕೊರಿಯರ್‌ ಕಚೇರಿಯಲ್ಲಿ ಮಿಕ್ಸಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಬಂಧಿತನನ್ನು ಅನೂಪ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಈತ ತನ್ನ ಪ್ರೀತಿಗೆ ಸಹಕರಿಸದ ಮಹಿಳೆಯ ಮೇಲೆ ದ್ವೇಷ ಸಾಧಿಸಲು ಆರಂಭಿಸಿ, ಆಕೆಯನ್ನು ಕೊಲೆ ಮಾಡುವ ಉದ್ದೇಶದಿಂದ ಮಿಕ್ಸಿಗೆ ಡಿಟೋನೇಟರ್‌ ಅಳವಡಿಸಿ ಕೊರಿಯರ್‌ ಮೂಲಕ ಕಳುಹಿಸಿದ್ದ ಎನ್ನಲಾಗಿದೆ.

ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟ ಪ್ರಕರಣ ➤ ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 30. ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿ ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಧರ್ಮಸ್ಥಳ ನಿವಾಸಿ ನಿತೇಶ್ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಅಗಿರುವ ಕಾರಣ ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಬೈಕ್

ಬೆಳ್ತಂಗಡಿ: ಕಾರು ಹಾಗೂ ಬೈಕ್ ನಡುವೆ ಅಪಘಾತ ➤ ಸವಾರ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಹನೂರು, ಡಿ. 28. ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ಹಲಗುಮೂಲೆಯ ಯಡಹಳ್ಳಿ ದೊಡ್ಡಿ ಬಳಿ ವರದಿಯಾಗಿದೆ.   ಮೃತರನ್ನು ಹಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ನಡೆದ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕೃಷ್ಣಗಿರಿ, ಡಿ. 28. ನಾಪತ್ತೆಯಾಗಿದ್ದ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವಿಶೇಷ ಸಬ್‌ಇನ್‌ಸ್ಪೆಕ್ಟರ್‌ ಸೇರಿ ನಾಲ್ವರನ್ನು ಬಂಧಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಿಂಗಾರಪೇಟೆ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಚಿತ್ರಾ(38), ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಎಂದು ಗುರುತಿಸಲಾಗಿದೆ. ಎಸ್ಐ ಚಿತ್ರಾ ಮದುವೆಯಾಗಿ ಕೆಲವು ವರ್ಷಗಳಿಂದ ತನ್ನಿಂದ ದೂರ ಉಳಿದಿದ್ದು, ಬಳಿಕ ತನ್ನ ಕಾರು ಚಾಲಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು.

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2022 ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣ ದಾಖಲು- ಆರೋಪಿಗಳಿಗೆ ಇದುವರೆಗೆ ಶಿಕ್ಷೆಯಾಗಿಲ್ಲ ➤ ಗೃಹಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ.27. ರಾಜ್ಯದಲ್ಲಿ ಒಟ್ಟಾರೆಯಾಗಿ ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಮಧ್ಯವರ್ತಿ ನಿಯಮಗಳು 2011 ಮತ್ತು 2022 ರ ಅಡಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ, ಅಸಭ್ಯ ಮತ್ತು ಸಾಮಾಜಿಕ ವಿರೋಧಿ ವಿಡಿಯೋಗಳು ಮತ್ತು ಪೋಸ್ಟ್‌ಗಳನ್ನು ಹಂಚಿಕೊಳ್ಳುವವರ ವಿರುದ್ಧ 185 ಪ್ರಕರಣಗಳನ್ನು ದಾಖಲಿಸಲಾಗಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಕಾರಣ, ಸರ್ಕಾರವು ಬೆಂಗಳೂರಿನಲ್ಲಿ ಎಂಟು ಸೈಬರ್  ಕ್ರೈಂ ಪೊಲೀಸ್ ಠಾಣೆಗಳನ್ನು ಮತ್ತು ಪ್ರತಿ ನಗರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಘಟಕಗಳನ್ನು ಸ್ಥಾಪಿಸಿದೆ

2022 ರಲ್ಲಿ 185 ಸೈಬರ್ ಕ್ರೈಮ್ ಪ್ರಕರಣ ದಾಖಲು- ಆರೋಪಿಗಳಿಗೆ ಇದುವರೆಗೆ ಶಿಕ್ಷೆಯಾಗಿಲ್ಲ ➤ ಗೃಹಸಚಿವ ಆರಗ ಜ್ಞಾನೇಂದ್ರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡು ತಲೆ ಹಾವು ಮಾರಾಟಕ್ಕೆ ಯತ್ನ ➤ ಪಿಡಿಒ ಸೇರಿ ಮೂವರ ಬಂಧನ                                 

(ನ್ಯೂಸ್ ಕಡಬ) newskadaba.com ತಿಪಟೂರು, ಡಿ. 27. ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಪೊಲೀಸ್ ಇಲಾಖೆ ಬಂಧಿಸಿದ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಶೇಕ್ ಹುಸೇನ್, ಮೊಹಮ್ಮದ್ ಆರೀಫ್ ಎಂದು ಗುರುತಿಸಲಾಗಿದೆ. ಜನರಲ್ಲಿ ಮೂಢನಂಬಿಕೆಯನ್ನೇ ಬಂಡವಾಳವಾಗಿಸಿಕೊಂಡ ಆರೋಪಿಗಳು, ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ, ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು

ಎರಡು ತಲೆ ಹಾವು ಮಾರಾಟಕ್ಕೆ ಯತ್ನ ➤ ಪಿಡಿಒ ಸೇರಿ ಮೂವರ ಬಂಧನ                                  Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು 

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 27. ಮನೆಯಲ್ಲಿ ಯಾರೂ ಇಲ್ಲದ ವೇಳೆ ಒಳನುಗ್ಗಿದ ಕಳ್ಳರು ನಗ-ನಗದು ದೋಚಿ ಪರಾರಿಯಾದ ಘಟನೆ ತಾಲೂಕಿನ ಮೊಗ್ರು ಗ್ರಾಮದ ಮುರ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಮೀನಾಕ್ಷಿ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲ ಮೂಲಕ ಒಳನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಎರಡೂವರೆ ಪವನ್ ಚಿನ್ನದ ಸರ ಹಾಗೂ 32,500 ರೂ. ನಗದನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನಾಕ್ಷಿಯವರು ಗುರುವಾಯನಕೆರೆಯಲ್ಲಿರುವ ತನ್ನ ಮಗಳ ಮನೆಗೆ ತೆರಳಿ, ವಾಪಸ್ ಬಂದಾಗ

ಬೆಳ್ತಂಗಡಿ: ನಗ-ನಗದು ಕಳವು ➤ ದೂರು ದಾಖಲು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು           

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.26. ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.  ಮೃತಪಟ್ಟವರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top