crime

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು           

(ನ್ಯೂಸ್ ಕಡಬ) newskadaba.com  ಇಸ್ಲಾಮಾಬಾದ್ , ಡಿ.23.  ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇಶದ ಸುರಕ್ಷಿತ ನಗರಗಳಲ್ಲಿ ಒಂದಾದ ಇಸ್ಲಾಮಾಬಾದ್ ನಲ್ಲಿ ಭಯೋತ್ಪಾದಕರ ಉಪಸ್ಥಿತಿ ಭಯವನ್ನುಂಟು ಮಾಡಿದೆ. ಇನ್ನು ಬಾಂಬ್ ದಾಳಿಯಲ್ಲಿ ಕನಿಷ್ಠ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಏಳು ಮಂದಿ ಸ್ಥಳೀಯರು ಗಾಯಗೊಂಡಿದ್ದಾರೆ. ಪಾಕಿಸ್ತಾನದ […]

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು            Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                               

(ನ್ಯೂಸ್ ಕಡಬ) newskadaba.com  ದಕ್ಷಿಣ ಕನ್ನಡ, ಡಿ.23.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡುರು ವ್ಯವಸಾಯ ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ ಕೇಳಿಬಂದಿದೆ. ಸಹಕಾರಿ ಸಂಘದ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯೆ ಹೈಡ್ರಾಮ ನಡೆದಿದೆ ಎಂದು ತಿಳಿದುಬಂದಿದೆ. ಗ್ರಾಹಕರ ಹೆಸರಿನಲ್ಲಿ ಸಂಘದ ಕೆಲ ಪದಾಧಿಕಾರಿಗಳು ಸಾಲ ಪಡೆದ ಆರೋಪ ಮಾಡಲಾಗಿದೆ. ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬ್ಯಾಂಕ್​ಗೆ ಬಂದು ಸಿಬ್ಬಂದಿಯನ್ನು

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.23.  ಅಯ್ಯಪ್ಪ ಮಾಲಾಧಾರಿ  ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಮಂಗಳೂರು  ನಗರದ  ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.23. ಚಲಿಸುತ್ತಿದ್ದ  ಸ್ಕೂಟಿಯೊಂದು  ಅಚಾನಕ್  ಆಗಿ  ಬಂದ್ ಬಿದ್ದಿದ್ದು, ಏನಾಯ್ತು ಎಂದು ಚಾಲಕ ಇಳಿದು ನೋಡುವಾಗಲೇ ಸ್ಕೂಟಿಗೆ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಕ್ಷಣಾರ್ಧದಲ್ಲೇ ಜೋರಾಗಿ ಹೊತ್ತಿ ಉರಿದ ಬೆಂಕಿ ಸ್ಕೂಟಿಯನ್ನು ಆಹುತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿರುವ  ಸೇತುವೆ ಬಳಿ ನಡೆದಿದ್ದು, ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟಿ ಇದಾಗಿದೆ ಎಂದು ತಿಳಿದುಬಂದಿದೆ. ಬ್ಯಾಟರಿ  ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                 Read More »

ಕರಾವಳಿ, ಕರ್ನಾಟಕ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ , ಡಿ 23 :  ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೊರ್ವಳರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ  ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ. ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ          

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.23.  ಮಾದಕ ವಸ್ತು ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಬಂಟ್ವಾಳ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್  (25)  ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂದು ಗುರುತಿಸಲಾಗಿದೆ.  ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23  ಗ್ರಾಹಕರ ಸೋಗಿನಲ್ಲಿ ಡೀಲರ್ ಮೇಲೆ ಹಲ್ಲೆ ಮಾಡಿ ರೂ.16 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಬೈಕ್ ಸುಲಿಗೆ ಮಾಡಿದ್ದ 6 ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೈಕ್ ಡೀಲರ್ ಮೊಹಮ್ಮದ್ ಆಸಿಫ್ ಎಂಬುವವರು ಸುಲಿಗೆ ಬಗ್ಗೆ ದೂರು ನೀಡಿದ್ದರು. ಬಂಧಿತ ಆರೋಪಗಳನ್ನು ವಿಶ್ವಾಸ್(23), ಜಗನ್ನಾಥ್(21), ಗಜೇಂದ್ರ(34), ಲಿಖಿತ್ ಕುಮಾರ್(29), ಶಶಾಂಕ್(23) ಹಾಗೂ ಪವನ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಪರಾರಿಯಾಗುವ ವೇಳೆ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರು. ಅದನ್ನು

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ. ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top