crime

crime, arrest, suspected

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಕೋರಮಂಗಲ ಜೋಡಿ ಕೊಲೆ ಪ್ರಕರಣ ಭೇಧಿಸಿದ ಪೊಲೀಸರು ಪ್ರಮುಖ ಆರೋಪಿ ಉದ್ಯಮಿಯ ಮಾಜಿ ಕಾರು ಚಾಲಕ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೊಪಿಯನ್ನು ಜಗದೀಶ್ (24), ಅಭಿಷೇಕ್ (22) ಮತ್ತು ಆತನ ಸಹೋದರ ಕಿರಣ್ (19) ಎಂದು ಗುರುತಿಸಲಾಗಿದೆ. ಉದ್ಯಮಿ ರಾಜಗೋಪಾಲ್ ರೆಡ್ಡಿ ಅವರ ಮಾಜಿ ಚಾಲಕನಾಗಿದ್ದ ಜಗದೀಶ್ ಪ್ರಕರಣದ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳಿಂದ ರೂ. 5 […]

ಜೋಡಿ ಕೊಲೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                      

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 21. ಬೈಕ್ ಮತ್ತು ಸೈಕಲ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ತೆಲಗಿ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಬಾಬುಜಿ (30) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಬೈಕ್ ಮತ್ತು ಸೈಕಲ್ ನಡುವೆ ಅಪಘಾತ ➤ ಓರ್ವ ಮೃತ್ಯು                       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!  

(ನ್ಯೂಸ್ ಕಡಬ) newskadaba.com  ವಿಜಯಪುರ, ಡಿ.20 ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾದ ಘಟನೆ ವಿಜಯಪುರ ನಗರದ ದೇವಗಿರಿ ಎಂಬಲ್ಲಿ ಸಂಭವಿಸಿದೆ. ಸ್ಮಶಾನದ ಬಾವಿಯಲ್ಲಿನ ಮೋಟರ್ ಸ್ಟಾರ್ಟ್ ಮಾಡಲು ಹೋದಾಗ ಶಿಶುವಿನ ಶವ ಪತ್ತೆಯಾಗಿದ್ದು, ಪಾಪಿಗಳು ಆಗತಾನೆ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಬಾವಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಹೆಣ್ಣು ಮಗುವಾಗಿದೆ ಎಂಬ ಕಾರಣಕ್ಕೆ ಯಾರು ಬಾವಿಯಲ್ಲಿ ಬಿಸಾಕಿ ಹೋಗಿದ್ದಾರೆ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಆದರ್ಶ ನಗರ ಪಿಎಸ್ಐ ಯತೀಂದ್ರ ಭೇಟಿ ನೀಡಿ

ಸ್ಮಶಾನದ ಬಾವಿಯಲ್ಲಿ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ …..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ಬಿಹಾರದ ಯುವಕನನ್ನು ಅಪಹರಿಸಿ ರೂ.2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರನ್ನು ಬಂಧಿಸಿದ ಘಟನೆ ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಡಿಪ್ಲೋಮಾ ವಿದ್ಯಾರ್ಥಿ ಎ.ಪ್ರಭಾತ್ (21), ಕುಣಿಗಲ್ ನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ರಂಗನಾಥ್ (19), ಕೃಷಿಕ ಕುಶಾಲ್ (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯ ನಡೆದ ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.  

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top