crime

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 20. ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಯಶೋಧಾ (70), ಸುಮನ್ (41) ಹಾಗೂ ನರೇಶ್ ಗುಪ್ತಾ(36) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ  ಶಂಕೆ ವ್ಯಕ್ತವಾಗಿದೆ. ಇವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಮನೆಯೊಂದರಲ್ಲಿ ವಾಸವಾಗಿದ್ದು, ಮೃತ ಯಶೋದಾರಿಗೆ ಮೂವರು ಮಕ್ಕಳಿದ್ದರು. ಈ ಪೈಕಿ ಒಬ್ಬ ಮಗಳಿಗೆ ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದರೆ, ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..! Read More »

ಕರ್ನಾಟಕ, ಕ್ರೈಮ್ ನ್ಯೂಸ್

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!  

(ನ್ಯೂಸ್ ಕಡಬ) newskadaba.com  ಡೆಹ್ರಾಡೂನ್, ಡಿ.19  ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅಪಹರಿಸಿದ ಆರೋಪದಲ್ಲಿ 20 ತಿಂಗಳ ಜೈಲು ವಾಸ ಅನುಭವಿಸಿದ 19 ವರ್ಷದ ಯುವಕನೊಬ್ಬ ಇದೀಗ ಯುವತಿ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಮೇಲೆ ಮಾಡಿರುವ ಆರೋಪಗಳು ಸುಳ್ಳು ಹಾಗೂ ಯುವಕ ಅಮಾಯಕ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತನ್ನ ಪೋಷಕರ ಬಳಿ ಮರಳಿದ ಯುವತಿ, ತಾನು ಯಾರಿಗೂ ಮಾಹಿತಿ ನೀಡದೆ ಚಂಡೀಗಢಕ್ಕೆ ತೆರಳಿದ್ದಾಗಿ ಹೇಳಿಕೆ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಆರೋಪಿ

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!         

(ನ್ಯೂಸ್ ಕಡಬ) newskadaba.com  ಗದಗ, ಡಿ.19  ಮುತ್ತಪ್ಪ ಹಡಗಲಿ ಎಂಬ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ 4ನೇ ತರಗತಿಯಲ್ಲಿದ್ದ ಭರತ್ (10) ಎಂಬ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಸಹಶಿಕ್ಷಕಿ ಗೀತಾ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿ ಗೀತಾ ಹಾಗೂ ವಿದ್ಯಾರ್ಥಿ ಭರತ್ ಎಂಬಾತನ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿದ್ದ, ಇದರಿಂದ ಇಬ್ಬರೂ ಗಂಭೀರವಾಗಿ ಗಾಯಗೊಂಡ ಆಸ್ಪತ್ರೆ ಸೇರಿದ್ದರು. ಮೃತ ವಿದ್ಯಾರ್ಥಿ ಭರತ್ ಹಲ್ಲೆಗೊಳಗಾದ ಶಿಕ್ಷಕಿ ಗೀತಾ

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸಾಗರ , ಡಿ 19 :  ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸಾಗರ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿ ವರದಿಯಾಗಿದೆ. ಮೃತನನ್ನು ಗೌತಮ್ (20) ಎಂದು ಗುರುತಿಸಲಾಗಿದೆ. ಈತ ಚಾಪುರ ಕೆರೆಹಿತ್ತಲು ನಿವಾಸಿ ಇವರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೇರುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಲೀಟೆಜ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ  ಎಂದು ತಿಳಿದುಬಂದಿದೆ. ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವರದಿ ತಿಳಿಸಿದೆ.    

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!  

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ.19  ಹಸು ಮತ್ತು ಕರುವನ್ನು ಪಿಕಪ್ ವೊಂದರಲ್ಲಿ  ಪೆರ್ಲಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಆರ್ಲಪದವು ಎಂಬಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಹಸು, ಕರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಜಗನ್ನಾಥ (62) ಮತ್ತು ಪಿಕಪ್ ಚಾಲಕ ಗೌರಿಶಂಕರ್ (51) ಎಂದು ಗುರುತಿಸಲಾಗಿದೆ. ಇವರು ಪೆರ್ಲ ಕಡೆ ಪಿಕಪ್ ವಾಹನದಲ್ಲಿ ಹಸು ಮತ್ತು ಕರುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top