crime

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ […]

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು

 (ನ್ಯೂಸ್ ಕಡಬ) newskadaba.com  ಜಗಳೂರು, ಡಿ.12  ಬಚ್ಚಲು ಮನೆಯಲ್ಲಿ ತುಂಬಿದ್ದ ಬಕೇಟ್ ನಲ್ಲಿ ಮುಳುಗಿ ಮಗು ಮೃತಪಟ್ಟಿರುವ ಘಟನೆ ಬಿಸ್ತುವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತ ಮಗುವನ್ನು ಮಂಜುನಾಥರವರ ದ್ವಿತೀಯ ಪುತ್ರಿ ಅನುಸಾವ್ಯ (1) ಎಂದು ತಿಳಿದುಬಂದಿದೆ. ಕೂಲಿ ಕೆಲಸಕ್ಕೆ ಹೋಗಿದ್ದ ಮೃತ ಮಗುವಿನ ತಂದೆ  ಮಂಜುನಾಥ್ ಸಂಜೆ ವಾಪಾಸ್ ಬಂದು ಸ್ನಾನದ ಮನೆಗೆ ಹೋಗಿ ಸ್ನಾನ ಮುಗಿಸಿ ಬಾಗಿಲು ಹಾಕದೇ ಬಂದಿದ್ದಾರೆ. ಆಟವಾಡುತ್ತಾ ಸ್ನಾನದ ಕೊಠಡಿಗೆ ಹೋದ ಮಗು ನೀರು ತುಂಬಿದ ಬಕೆಟ್‍ನಲ್ಲಿ ಬಿದ್ದಿದೆ.ಇತ್ತ ಮಗು ಕಾಣದೇ

➤ಬಕೇಟ್ ನಲ್ಲಿ ಮುಳುಗಿ ಮಗು ಮೃತ್ಯು Read More »

ಕರ್ನಾಟಕ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.12 ಆನೆ ದಂತ ಮಾರಾಟ ಮಾಡಲು ಯತ್ನಿಸಿದ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಸವಾಪುರ ಗ್ರಾಮದ ಸಮೀಪ ಬಳಿ ಸಂಭವಿಸಿದೆ. ಆರೋಪಿಗಳನ್ನು ತಮಿಳುನಾಡು ಮೂಲದ ರಂಗಸ್ವಾಮಿ (35), ಸಂಜೀವ ಕುಮಾರ್ (41), ಎನ್.ವಿನೋದ್ (36), ಕದಿರೇಸನ್ (45), ಸೆಲ್ವನಾಯಗಂ (44) ಎಂದು ಗುರುತಿಸಲಾಗಿದೆ. ಈ ಐವರು ಆನೆದಂತ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಅರಣ್ಯಾಧಿಕಾರಿಗಳು ದಾಳಿ ನಡೆಸಿ

ಆನೆಯ ದಂತ ಮಾರಟಕ್ಕೆ ಯತ್ನ !!! ➤ಐವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ

 (ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.12  ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಮುಹಮ್ಮದ್ ಶೇಕ್ ಫೈಝಿಲ್ ಎಂದು ಗುರುತಿಸಲಾಗಿದೆ. ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ರಿಕ್ಷಾ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕ ಹೃತಿಕ ಎಂಬರಿಗೆ ಗಾಯವಾಗಿದ್ದು, ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಳುಗಳು

ರಿಕ್ಷಾ ಮತ್ತು ಕಾರಿನ ನಡುವೆ ಅಪಘಾತ ➤ಪರಾರಿಯಾಗಿದ್ದ ಆರೋಪಿಯ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

( ನ್ಯೂಸ್ ಕಡಬ ) newskadaba.com ಚಿಕ್ಕಮಗಳೂರು, ಡಿ.12 ಮೂಡಿಗೆರೆ ತಾಲೂಕಿನಲ್ಲಿ ಅಪಘಾತಕ್ಕಿಡಾಗಿ ಆಸ್ಪತ್ರೆಯಲ್ಲಿ ಸಾವುಬದುಕಿನ ಹೋರಾಟ ನಡೆಸುತ್ತಿದ್ದ ಧನ್ಯ ಕುಮಾರ್ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ. ಮಗನ ಸಾವಿನ ದುಃಖದಲ್ಲೂ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದು, ಇತರೆ ಅಂಗಾಂಗಗಳಿಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ಧನ್ಯ ಕುಮಾರ್ ಪೋಷಕರು ಒಪ್ಪಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ

ಪುತ್ರನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಡಿ.12 ಆಸ್ತಿ ವಿವಾದಕ್ಕೆ ಹಿರಿಯ ನಟಿ ವೀಣಾ ಕಪೂರ್ ಅವರ ಮಗ ಸಚಿನ್ ಕಪೂರ್ ತನ್ನ ಅಮ್ಮನನ್ನೇ ಬೇಸ್ಬಾಲ್ ಬ್ಯಾಟ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವ ಘಟನೆ ಡಿ.೧೦ ರಂದು ನಡೆದಿದೆ. ಸದ್ಯ ಮಗನನ್ನು ಪೋಲಿಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಕೋಪದ ಭರದಲ್ಲಿ ಹಿರಿಯ ನಟಿಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….!

(ನ್ಯೂಸ್ ಕಡಬ) newskadaba.com  ಕಟಪಾಡಿ ,.ಡಿ 10. ಬೈಕ್ ಒಂದು ಢಿಕ್ಕಿ ಹೊಡೆದು ಪಾದಾಚಾರಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಯಲ್ಲಿಸಂಭವಿಸಿದೆ. ಮೃತಪಟ್ಟವರನ್ನುಕಟಪಾಡಿಯ ಏಣಗುಡ್ಡೆಅಗ್ರಹಾರದ ಸತೀಶ್ ಎಂದು ಗುರುತಿಸಲಾಗಿದೆ.ಸತೀಶ್ ಎಂಬುವವರು ಕಟಪಾಡಿಯಲ್ಲಿ ರಸ್ತೆ ದಾಟುತ್ತಿರುವಾಗ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಸತೀಶ್ ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ .ಸ್ಥಳಕ್ಕೆ ಕಟಪಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್ ಢಿಕ್ಕಿ ➤ಪಾದಾಚಾರಿ ಸ್ಥಳದಲ್ಲೆ ಮೃತ್ಯು….! Read More »

ಕರ್ನಾಟಕ
Scroll to Top