crime

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು […]

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com ಗುವಾಹಟಿ, ಡಿ. 10. ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ನೂರಾರು ಮನೆಗಳು  ಹೊತ್ತಿ ಉರಿದ ಘಟನೆ ಅಸ್ಸಾಂನ ಗುವಾಹಟಿಯ ಸ್ಲಂ ಕಾಲೋನಿಯಲ್ಲಿ ನಡೆದಿದೆ.   ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಗುವಾಹಟಿ: ಸಿಲಿಂಡರ್ ಸ್ಫೋಟ ನೂರಾರು ಮನೆಗಳಿಗೆ ಹಾನಿ Read More »

ರಾಷ್ಟ್ರೀಯ ನ್ಯೂಸ್

ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ.10. ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ  ಮರಗುತ್ತಿ ಗ್ರಾಮದ ಎಂ.ಎಂ. ಗಾರ್ಡನ್ ಬಳಿ ನಡೆದಿದೆ. ಕೊಲೆಯಾದವರನ್ನು ಮಾಲಗತ್ತಿ ನಿವಾಸಿ ಬಸವರಾಜ್ ಅಂಬಲಗಿ (35) ಎಂದು ಗುರುತಿಸಲಾಗಿದೆ. ಈತನನ್ನು ದುಷ್ಕರ್ಮಿಗಳು ಕೊಲೆಗೈದಿದ್ದು.  ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.  ಆರೋಪಿಗಳಿಗಾಗಿ ಹುಡುಕಾಟ ಮುಂದುವರೆದಿದ್ದು ಈ ಕುರಿತು ಗುವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಬರ್ಬರ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೀವ್ರ ಚಳಿಗೆ ವೃದ್ದ ಮೃತ್ಯು….!

(ನ್ಯೂಸ್ ಕಡಬ ) newskadaba.com ವಿಜಯಪುರ, ಡಿ. 10. ವೃದ್ದನೋರ್ವ ಚಳಿಯ ತೀವ್ರತೆಯನ್ನು ತಡೆಯಲಾರದೆ ಮೃತಪಟ್ಟಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.     ಮೃತರನ್ನು ಬಸವೇಶ್ವರ ವೃತ್ತದ ಬಳಿಯ ನೇತಾಜಿ ನಗರದ ನಿವಾಸಿ ಭೀಮಪ್ಪ ಹಾದಿಮನಿ (75) ಎಂದು ಗುರುತಿಸಲಾಗಿದೆ. ಬಸವೇಶ್ವರ ವೃತ್ತದ ಬಳಿ ಇರುವ ಮದ್ಯದಂಗಡಿಗೆ ಬೆಳಗ್ಗೆ ಬಂದಿದ್ದ ಇವರು ಸ್ವಲ್ಪ ಹೊತ್ತಿನ ಬಳಿಕ ವೃದ್ದ ಕೈಯ್ಯಲ್ಲಿ ಒಂದಿಷ್ಟು ಹಣ ಹಿಡಿದುಕೊಂಡು ಅಂಗಾತ ಸ್ಥಿತಿಯಲ್ಲಿ ಮಲಗಿದ್ದುದನ್ನು ಗಮನಿಸಿದ ಸ್ಥಳೀಯರು ಅನುಮಾನ ಬಂದು ವೃದ್ದನನ್ನುಎಬ್ಬಿಸಲು ಪ್ರಯತ್ನಿಸಿದಾಗ

ತೀವ್ರ ಚಳಿಗೆ ವೃದ್ದ ಮೃತ್ಯು….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಲಕರ ಮೇಲೆ ಚಿರತೆ ದಾಳಿ ➤ ಕೂದಲೆಳೆ ಅಂತರದಲ್ಲಿ ಪಾರು….!!!!

(ನ್ಯೂಸ್ ಕಡಬ) newskadaba.com ಕೊರಟಗೆರೆ, ಡಿ. 10. ಹಸುವಿನ ಹಾಲು ಕರೆಯಲು ಹೋಗಿದ್ದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಇರಕಸಂದ್ರ ಕಾಲನಿಯಲ್ಲಿ ಸಂಭವಿಸಿದೆ.     ಚಿರತೆ ದಾಳಿಗೆ ಒಳಗಾದವರನ್ನು ಧನುಷ್(13) ಮತ್ತು ಚೇತನ್(15) ಎಂದು ಗುರುತಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದ್ದು, ಗಾಯಾಳು ಬಾಲಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.    

ಬಾಲಕರ ಮೇಲೆ ಚಿರತೆ ದಾಳಿ ➤ ಕೂದಲೆಳೆ ಅಂತರದಲ್ಲಿ ಪಾರು….!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10.  ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ.     ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.10. ಉದ್ಯಮಿಯೋರ್ವನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.       ಅಪಹರಣಕ್ಕೆ ಒಳಗಾದ ವ್ಯಕ್ತಿಯನ್ನು ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದ ಹೋಟೆಲೊಂದರ ಉದ್ಯಮಿ ಸಾಬಣ್ಣ ಮೆಗಾಡಿ ಎಂದು ಗುರುತಿಸಲಾಗಿದೆ. ಇವರನ್ನು ಅಪಹರಣ ಮಾಡಿದ ನಂತರ ಬೆದರಿಕೆ ಹಾಕಿ ಒಂದು ರೂಪಾಯಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಬಣ್ಣ ಮೆಗಾಡಿರವರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ

(ನ್ಯೂಸ್ ಕಡಬ) newskadaba.com  ಮಂಡ್ಯ, ಡಿ. 10. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಸಮೀಪದ ಗ್ರಾಮದಲ್ಲಿ ಪೊಲೀಸ್ ಮುಖ್ಯ ಪೇದೆಯೊಬ್ಬರ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ ಘಟನೆ ನಡೆದಿದೆ.   ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕನ್ಸ್ ಟೇಬಲ್ ರವಿ ಅವರು ಪತ್ನಿ ಜೊತೆ ಅಸ್ಪತ್ರೆಗೆ ತೆರಳಿದ್ದು, ಮರಳಿ ಬಂದು ನೋಡಿದಾಗ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ. ಮನೆಯ ಬಾಗಿಲು ಅಥವಾ ಬೀರುವನ್ನು ಒಡೆಯದೆ ಕೀ ಬಳಸಿ, ಅಂದಾಜು 3.80 ಲಕ್ಷ ರೂ. ಮೌಲ್ಯದ

ಹಾಡಹಗಲೇ ಪೊಲೀಸ್ ಮನೆಯಲ್ಲಿ ಕಳ್ಳ ತನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top