crime

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ.10. ವಿದ್ಯಾರ್ಥಿನಿಯರ ಜೊತೆ ಶಿಕ್ಷಕನೋರ್ವ ಅಸಭ್ಯ ವರ್ತನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪೌಢಶಾಲೆಯಲ್ಲಿ ಸಂಭವಿಸಿದೆ.   ಕಾಮುಕ ಶಿಕ್ಷಕನ ದೌರ್ಜನ್ಯದಿಂದ ಬೇಸತ್ತ ವಿದ್ಯಾರ್ಥಿಗಳು ಆತನ ವಿರುದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ದಿಢೀರ್ SDMC ಸಭೆ ಆಯೋಜಿಸಿದ ಪೋಷಕರು ಶಿಕ್ಷಕರ ವಿರುದ್ದ ರೊಚ್ಚಿಗೆದ್ದು ಹಲ್ಲೆಗೆ ಯತ್ನಿಸಿದ್ದಲ್ಲದೇ, ಆರೋಪಿ ಶಿಕ್ಷಕನ ಅಮಾನತಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.    

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ಡಿ.09. ವಿಶಾಖಪಟ್ಟಣಂ ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಎಂ.ಶಶಿಕಲಾ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಎಂಸಿಎ ಓದುತ್ತಿದ್ದ ಆಕೆ ಬುಧವಾರ ಬೆಳಗ್ಗೆ ಅಣ್ಣಾವರಂನಿಂದ ಗುಂಟೂರು – ರಾಯಗಡ ರೈಲಿನಲ್ಲಿ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿದ್ದು, ರೈಲ್ವೆ ರಕ್ಷಣಾ ತಂಡವು ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಾಹಿತಿ ಪಡೆದ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದು,

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಡಿ.09. ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳನ್ನು ನಿಯಂತ್ರಿಸಲು ನಗರ ಸಂಚಾರಿ ಪೊಲೀಸರು ಪ್ರಮುಖ ಜಂಕ್ಷನ್​ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ ಎಂದು ವರದಿ ತಿಳಿಸಿದೆ.   ಬೆಂಗಳೂರು ಪೊಲೀಸರ ಪ್ರಕಾರ, ಪೊಲೀಸರ ಸಹಾಯವಿಲ್ಲದೆ ಸಂಚಾರ ಉಲ್ಲಂಘನೆಯನ್ನು ಐಟಿಎಂಎಸ್ ಪತ್ತೆಹಚ್ಚುತ್ತದೆ. ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗಿರುವ ಎಎನ್‌ಪಿಆರ್‌ ಕ್ಯಾಮೆರಾಗಳ  ಮೂಲಕ ಸಂಚಾರ ನಿಯಮ ಉಲ್ಲಂಘನೆಯನ್ನು ಸೆರೆಹಿಡಿಯಲಾಗುತ್ತದೆ.   ಅತಿವೇಗ, ಕೆಂಪು ದೀಪ ಉಲ್ಲಂಘನೆ, ಸ್ಟಾಪ್ ಲೇನ್ ಉಲ್ಲಂಘನೆ, ಹೆಲ್ಮೆಟ್ ಉಲ್ಲಂಘನೆ, ತ್ರಿಬಲ್ ರೈಡಿಂಗ್, ಚಾಲನೆ ವೇಳೆ

ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಕಾದಿದೆ ಬಿಗ್ ಶಾಕ್…!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 09. ಜೀಪೊಂದು ಢಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸಂತೆಕಟ್ಟೆ ಸಮೀಪದ ಎಲ್‌ವಿಟಿ ಆಟೋ ನಿಲ್ದಾಣದ ಬಳಿ ನಡೆದಿದೆ. ಮೃತರನ್ನ ರಾಮಚಂದ್ರ ಎಂದು ಗುರುತಿಸಲಾಗಿದೆ. ಇವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಜೀಪೊಂದು ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಆದರೆ ಜೀಪು ಚಾಲಕನು ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಈ ಕುರಿತು ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾದಚಾರಿಗೆ ಜೀಪ್ ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ. ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com  ದಾವಣಗೆರೆ ಡಿ.09. ಆನ್ಲೈನ್ ಶಾಪಿಂಗ್ ಕಂಪೆನಿಯಿಂದ ಉಡುಗೊರೆ ಬಂದಿದೆ ಎಂದು ನಂಬಿಸಿ ರೂ. 92,000 ವಂಚನೆ ಮಾಡಿದ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ವಂಚನೆಗೊಳಗಾದವರನ್ನು ಊರ್ಮಿಳಾ ಕುಮಾರಿ ಎಂದು ಗುರುತಿಸಲಾಗಿದೆ. ಇವರಿಗೆ ಮಿಶೊ ಕಂಪೆನಿಯಿಂದ ಉಡುಗೊರೆ ಬಂದಿದೆ ಬೇಕಾದಲ್ಲಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಎಂದು ಪತ್ರ ಬಂದಿತ್ತು. ಅದನ್ನು ನಂಬಿದ ಊರ್ಮಿಳಾ ಅವರು ಕರೆ ಮಾಡಿದಾಗ ವ್ಯಕ್ತಿಯೊಬ್ಬ ಕಂಪೆನಿಯ ಅಧಿಕಾರಿಯೆಂದು ಹೇಳಿ, ತೆರಿಗೆ ಕಟ್ಟುವಂತೆ ಹೇಳಿದ್ದಾರೆ. ನಂತರ ಹಂತ ಹಂತವಾಗಿ ಸುಮಾರು ರೂ.92,000ವನ್ನು

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!!

(ನ್ಯೂಸ್ ಕಡಬ) newskadaba.com ಸುಳ್ಯ ಡಿ.09. ಸ್ನೇಹಿತೆಯೊಂದಿಗೆ ಕಾಂತಾರ ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ತಂಡವೊಂದು ಥಳಿಸಿರುವ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿಮೂಡ ಗ್ರಾಮದ ಕೈಕಂಬ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂದು ತಿಳಿದುಬಂದಿದೆ.  ಸ್ನೇಹಿತೆಯೊಂದಿಗೆ 10 ನಿಮಿಷ ಮುಂಚಿತವಾಗಿ ಬಂದು ಕಾಂಪೌಂಡ್  ಬದಿಯಲ್ಲಿ ಬೈಕ್ ನಿಲ್ಲಿಸಲು ಹಾಕಿದ್ದ ಶೀಟ್ ಅಡಿಯಲ್ಲಿ ನಿಂತಿದ್ದ ವೇಳೆ ಗುಂಪಿನಲ್ಲಿ ಬಂದ ಯುವಕರು ಕೆನ್ನೆ ಹಾಗೂ ಬೆನ್ನಿಗೆ ಹೊಡೆದು, ಇನ್ನು ಮುಂದೆ ಇಲ್ಲಿಗೆ ಬಂದರೆ ಕೊಲ್ಲುವುದಾಗಿ ಜೀವ ಬೆದರಿಕೆ

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top