crime

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.30:ನಗರದ ಸಿಸಿಬಿ ಪೊಲೀಸರು ದೇರಳಕಟ್ಟೆಯಲ್ಲಿ ಬುಧವಾರ ನಡೆಸಿದ ಕಾರ್ಯಾಚರಣೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ಉಪ್ಪಳ ಮಂಗಲ್ಪಾಡಿ ನಿವಾಸಿ ಅಜ್ಮಲ್ ಟಿ. ಹಾಗೂ ಮೂಲತಃ ಕನ್ಯಾಕುಮಾರಿ ನಿವಾಸಿ, ಪ್ರಸ್ತುತ ಸುರತ್ಕಲ್‍ನಲ್ಲಿ ವಾಸವಿರುವ ಎಂಬಿಬಿಎಸ್ ವಿದ್ಯಾರ್ಥಿನಿ ಮಿನು ರಶ್ಮಿ ಬಂಧಿತ ಆರೋಪಿಗಳು. ಮಾರುಕಟ್ಟೆಯಲ್ಲಿ ಈ ಗಾಂಜಾ ಅಂದಾಜು 30 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಬೆಲೆಬಾಳುವಂತಹದ್ದು ಎಂದು ಮಂಗಳೂರು ನಗರ ಪೊಲೀಸ್ […]

ದೇರಳಕಟ್ಟೆಯಲ್ಲಿ 1.236 ಗ್ರಾಂ ಹೈಡೋವೀಡ್ ಗಾಂಜಾ ವಶಕ್ಕೆ ➤ ವೈದ್ಯ ವಿದ್ಯಾರ್ಥಿನಿ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba, ಹಾಸನ ಜೂ.26: ತಂದೆ ಹಾಗೂ ತಾಯಿ ಇಬ್ಬರು ಸೇರಿ ಸ್ವಂತ ಮಗುವನ್ನೇ ಕೊಂದು ಶವವನ್ನು ಕಾಫಿತೋಟದಲ್ಲಿ ಹೂತಿರುವ ಅನುಮಾನದ ಮೇಲೆ ಮಗುವಿನ ಮೃತದೇಹ ಹೊರತೆಗೆದು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಆಲೂರು ತಾಲೂಕಿನ, ಕೆ.ಹೊಸಕೋಟೆ ಹೋಬಳಿಯ ಕಾಡ್ಲೂರು ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ತಾಲೂಕಿನ ಕೆ.ಹೊಸಕೋಟೆ ಹೋಬಳಿಗೆ ಆಗಮಿಸಿದ್ದ ಕೂಲಿಕಾರ್ಮಿಕರ ಕುಟುಂಬಸ್ಥರಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.ಕೆಲ ದಿನಗಳ ಹಿಂದೆ ಪತಿ, ಪತ್ನಿ ನಡುವೆ ಕೌಟುಂಬಿಕ ಕಾರಣಕ್ಕೆ ಜಗಳ

ಮಗು ಅತ್ತಿದ್ದಕ್ಕೆ ಕಾಫಿತೋಟದಲ್ಲಿ ಹೂತು ಹಾಕಿದ ಪೋಷಕರು ➤ ಮೃತದೇಹ ಹೊರತೆಗೆದ ಅಧಿಕಾರಿಗಳು Read More »

ಕರಾವಳಿ

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba,ಈಶ್ವರಮಂಗಲ ಜೂ.24: ಈಶ್ವರಮಂಗಲದ ನೇರೊಲ್ತಡ್ಕ ನಿವಾಸಿ ಶರತ್(20) ಎಂಬುವವರು ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೂ 24 ರ ಇಂದು ಮಧ್ಯಾಹ್ನ ಇದ್ದಕ್ಕಿದ್ದಂತೆ ಮನೆಯಾಗಿದ್ದ ಶರತ್ ಅವರನ್ನು ಹುಡುಕಾಡಿದಾಗ ಮನೆಯಿಂದ ಸ್ವಲ್ಪ ದೂರದಲ್ಲಿದ್ದ ರಬ್ಬರ್ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಈಶ್ವರಮಂಗಲ ಹೊರಾ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈಶ್ವರಮಂಗಲ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ

(ನ್ಯೂಸ್ ಕಡಬ) newskadaba,ವಿಜಯಪುರ ಜೂ.23: ಬೇರೆ ಮದುವೆಯಾಗಿದ್ದರೂ ಒಬ್ಬರನ್ನು ಒಬ್ಬರು ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಇದ್ದರೂ ಒಟ್ಟಿಗೇ, ಸತ್ತರೂ ಒಟ್ಟಿಗೇ ಎಂದು ನಿರ್ಧರಿಸಿದ್ದರು. ಅದೇ ಕಾರಣಕ್ಕೆ ದುಡುಕಿ ತಪ್ಪಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಪ್ರೀತಿ ಕುರುಡು ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ. 3 ಮತ್ತು 6 ಮಕ್ಕಳಿರುವ ವಿವಾಹಿತರಿಬ್ಬರು ತಮ್ಮ ಮಕ್ಕಳ ಬಗ್ಗೆಯೂ ಯೋಚಿಸದೆ ತಮ್ಮ ಪ್ರೀತಿಗಾಗಿ ವಿಷ ಸೇವಿಸಿದ್ದಾರೆ. ಇಬ್ಬರಿಗೂ ಬೇರೆಯವರ ಜೊತೆ ಮದುವೆಯಾಗಿತ್ತು. ಹೀಗಾಗಿ, ತಮ್ಮ ಪ್ರೀತಿಯನ್ನು ಈ ಸಮಾಜ ಒಪ್ಪುವುದಿಲ್ಲ ಎಂದು ವಿಷಯ ಕುಡಿದು ಸಾಯಲು ನಿರ್ಧರಿಸಿದ್ದರು. ಬೇರೊಬ್ಬಳನ್ನು

ವಿಷ ಕುಡಿದು ಪ್ರಿಯಕರನ ತೊಡೆ ಮೇಲೇ ಪ್ರಾಣ ಬಿಟ್ಟ ವಿವಾಹಿತೆ Read More »

ಕ್ರೈಮ್ ನ್ಯೂಸ್

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ

(ನ್ಯೂಸ್ ಕಡಬ) newskadaba.com  ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು.  ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ

ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು

(ನ್ಯೂಸ್ ಕಡಬ) newskadaba,ಸುಳ್ಯ ಜೂ.21: ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ. ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323

ಸುಳ್ಯ: ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ ➤ ಆರೋಪಿ ತಂದೆಗೆ 5 ವರ್ಷ ಜೈಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ರಿಕ್ಷಾ ಚಾಲಕನೋರ್ವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ನಿರಂತರ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆ ಗರ್ಭಿಣಿಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಿಂದ ವರದಿಯಾಗಿದೆ. ಕೊಯಿಲ ಗ್ರಾಮದ ಬುಡಲೂರು ನಿವಾಸಿ ರಿಕ್ಷಾ ಚಾಲಕ ಯುವರಾಜ್ ಎಂಬಾತ ತನ್ನ ಪರಿಚಯದ 19 ವರ್ಷದ ಯುವತಿಯನ್ನು ಕಳೆದೊಂದು ವರ್ಷದಿಂದ ಆತನ ಮನೆಯ ಸಮೀಪದ ಗುಡ್ಡದಲ್ಲಿ ನಿರಂತರವಾಗಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಮನೆಯವರು ಆಕೆಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಆಕೆ

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಪ್ರಿಯಕರನಿಗಾಗಿ ಗಾಂಜಾ ತಲುಪಿಸುತ್ತಿದ್ದ ಇಂಜಿನಿಯರಿಂಗ್ ಪದವೀಧರೆಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿ ಎರಡೂವರೆ ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅಂಧ್ರಪ್ರದೇಶದಿಂದ ಬಂದು ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ರೇಣುಕಾ ಬಂಧಿತ ಆರೋಪಿ. ಚೆನ್ನೈನ ಖಾಸಗಿ‌ ಕಾಲೇಜಿನಲ್ಲಿ ಸಿದ್ದಾರ್ಥ್ ಎಂಬಾತನನ್ನು ಪ್ರೇಮಿಸಿದ್ದ ರೇಣುಕಾ, ಸಿದ್ದಾರ್ಥ್ ಕೊಡುತ್ತಿದ್ದ ಗಾಂಜಾವನ್ನು ಗ್ರಾಹಕರಿಗೆ ತಲುಪಿಸುತ್ತಿದ್ದಳು.ಬೆಂಗಳೂರಿನ ಮುಖ್ಯರಸ್ತೆಗಳಲ್ಲಿರುವ ಓಯೋ ರೂಮ್ ಮಾಡುತ್ತಿದ್ದ ರೇಣುಕಾ, ಸಿದ್ದಾರ್ಥ್ ಜೊತೆ ಕಾನ್ಫರೆನ್ಸ್ ಕಾಲ್ ನಲ್ಲಿ ಮಾತನಾಡಿ ಗ್ರಾಹಕರನ್ನು ರೂಮ್ ಬಳಿ ಕರೆಸಿಕೊಂಡು ಗಾಂಜಾ ಪೂರೈಸಲಾಗುತಿತ್ತು. ತಾನು

ಪ್ರೇಮಿಗಾಗಿ ಗಾಂಜಾ ತಲುಪಿಸುವಾಗ ಸಿಕ್ಕಿಬಿದ್ದ ಇಂಜಿನಿಯರಿಂಗ್ ಪದವೀಧರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಕೊಲೆಗೆ ಸ್ಕೆಚ್ ಹಾಕಿದ್ದ ಪ್ರಕರಣ ಸಂಬಂಧ ಮತ್ತೊಬ್ಬ ಕಿಂಗ್ ಪಿನ್ ರಾಜೇಶ್ ಅಲಿಯಾಸ್ ಕರಿಯನನ್ನ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.   ಮೂರು ತಿಂಗಳ ಹಿಂದೆ ನಿರ್ಮಾಪಕ ಉಮಾಪತಿ ಹತ್ಯೆಗೆ ಸ್ಕೆಚ್ ನಡೆದಿತ್ತು. ಕೊನೆ ಕ್ಷಣದಲ್ಲಿ ಎಚ್ಚೆತ್ತ ಪೊಲೀಸರು, ಆ ಕೊಲೆಗೆ ರೆಡಿಯಾಗಿದ್ದ ಆರೋಪಿಗಳನ್ನು ಮಾರಕಾಸ್ತ್ರಗಳ ಸಮೇತ ಬಂಧಿಸಿದ್ದರು. ಈ ವೇಳೆ ಹಲವರು ಎಸ್ಕೇಪ್ ಕೂಡ ಆಗಿದ್ರು. ಅವರಲ್ಲಿ ಪ್ರಮುಖ

“ರಾಬರ್ಟ್” ಸಿನಿಮಾ ನಿರ್ಮಾಪಕನ ಕೊಲೆಗೆ ಸಂಚು ಪ್ರಕರಣ ➤ ಪ್ರಮುಖ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ

(ನ್ಯೂಸ್ ಕಡಬ) newskadaba,ಮುಂಬೈ ಜೂ.05: ಬಣ್ಣದ ಲೋಕದ ಕನಸು ಹೊತ್ತು ಬಂದ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿ ಬಾಲಿವುಡ್​ ಸಿರಿಯಲ್​ ನಟ ಪರ್ಲ್‌ ವಿ ಪುರಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ‘ನಾಗಿನ್ 3’, ‘ನಾಗಾರ್ಜುನ ಏಕ್ ಯೋಧ’, ‘ಬೆಪನಾಹ್ ಪ್ಯಾರ್’, ‘ಬ್ರಹ್ಮರಾಕ್ಷಸ್ 2’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿರುವ ಪರ್ಲ್ ಪುರಿಯನ್ನು ಮುಂಬಯಿಯ ಅಂಬೋಳಿ ಪೊಲೀಸರು ನೆರವಿನೊಂದಿಗೆ ಮಿರಾ ಭಾಯಂದಾರ್ ವಾಸಾಯಿ ವಿರಾರ್ ಪೊಲೀಸರು ಬಂಧಿಸಿದ್ದಾರೆ.ನಟನ ವಿರುದ್ಧ ಎಫ್ ಐಆರ್ ದಾಖಲಾಗಿದೆ    

ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ➤ ಖ್ಯಾತ ಕಿರುತೆರೆ ನಟನ ಬಂಧನ Read More »

ಕರಾವಳಿ
Scroll to Top