crime

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

(ನ್ಯೂಸ್ ಕಡಬ) newskadaba.com ಹಾಸನ ನ. 20: ಹಾಸನ ಜಿಲ್ಲೆಯ ತಿಪಟೂರು ತಾಲೂಕಿನ ಬೆಳಗರಹಳ್ಳಿಯಲ್ಲಿ ಮದುವೆಗೆ ಹೆತ್ತವರ ವಿರೋಧ ಕಟ್ಟಿಕೊಂಡ ಪರಿಣಾಮ ಹೇಮಾವತಿ ನಾಲೆಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಪ್ರೇಮಿಗಳನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18) ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.     ನ.16 ರಂದು ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಈ ಯುವ ಪ್ರೇಮಿಗಳ ಮೃತದೇಹ […]

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!?

(ನ್ಯೂಸ್ ಕಡಬ) newskadaba.com ಉಡುಪಿ ನ. 19: ಎಟಿಎಂ ಕಾರ್ಡ್ ಇಲ್ಲದೇ, ಯಾವುದೇ ಬ್ಯಾಂಕ್ ದಾಖಲೆ ಕೂಡ ಇಲ್ಲದೇ ವ್ಯಕ್ತಿಯೊಬ್ಬರ ಖಾತೆಯಿಂದ ಅಪರಿಚಿತ ವ್ಯಕ್ತಿಗಳು ಹಣ ವಿತ್ ಡ್ರಾ ಮಾಡಿರುವ ಆತಂಕಕಾರಿ ಘಟನೆ ನಡೆದಿದೆ.     ಉಡುಪಿ ಮೂಲದ ಮೂಡುಬೆಟ್ಟು ನಿವಾಸಿ ಸದಾನಂದ ಭಂಡಾರಿ(62) ಅವರ ಕೆನರಾ ಬ್ಯಾಂಕ್ ಖಾತೆಯಿಂದ ಬೆಂಗಳೂರಿನ ಅಲಂಕಾರ್ ಫ್ಲಾಜಾ ಎಂಬಲ್ಲಿ ಹಣ ವಿತ್ ಡ್ರಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.ರೂ.10 ಸಾವಿರದಂತೆ ಒಟ್ಟು 40 ಸಾವಿರ ರೂಪಾಯಿಗಳನ್ನು ವಿತ್ ಡ್ರಾ ಮಾಡಲಾಗಿದೆ.

ಉಡುಪಿ :ಯಾವುದೇ ದಾಖಲೆಗಳಿಲ್ಲದೆ ಬ್ಯಾಂಕ್ ಖಾತೆಯಿಂದ ಹಣ ಎಗರಿಸಿದ ಅಪರಿಚಿತರು.!? Read More »

ಕರಾವಳಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…!

(ನ್ಯೂಸ್ ಕಡಬ) newskadaba.com ಉಡುಪಿ, ನ. 19. ಕಳೆದ ದಿನ ಕಾಪು ತಾಲೂಕಿನ ಮಜೂರು ಚಂದ್ರ ನಗರದಲ್ಲಿ ಅಮಾನವೀಯ ರೀತಿಯಲ್ಲಿ ರಟ್ಟಿನ ಪಟ್ಟಿಗೆಯೊಳಗೆ ಜೀವಂತ ಗಂಡು ಕರುವನ್ನು ಎಸೆದು ಹೋದ ಘಟನೆ ನಡೆದಿದೆ.     ಸಾರ್ವಜನಿಕರು ರಟ್ಟಿನ ಪೆಟ್ಟಿಗೆ ಅಲ್ಲಡುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀ ಪ್ ರಾವ್ ಅವರಿಗೆ ದೂರವಾಣಿ ಕರೆ ಮಾಡುವ ಮೂಲಕ ತಿಳಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು ಹಾಗೂ ಸಾರ್ವಜನಿಕರು ಆಪೆಟ್ಟಿಗೆಯನ್ನು ಬಿಡಿಸಿ ನೋಡಿದ್ದಾರೆ. ಈ ಸಂದರ್ಭದಲ್ಲಿ

ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ…! Read More »

ಕರಾವಳಿ, ಕ್ರೈಮ್ ನ್ಯೂಸ್

ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪಂಜ, ನ. 19. ಇಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏನೆಕಲ್ಲಿನ ಬಾಲಾಡಿ ಎಂಬಲ್ಲಿ ನಡೆದಿದೆ.     ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಏನೆಕಲ್ಲು ಗ್ರಾಮದ ಬಾಲಾಡಿಯ ಶಿಲ್ಪಿ ಧನಂಜಯ ಆಚಾರ್ಯರವರ ಪುತ್ರ ತವಿನ್ ಆಚಾರ್ಯ(24) ಎಂದು ಗುರುತಿಸಲಾಗಿದೆ. ಈತ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಚಿಕ್ಕಮ್ಮ, ಸಹೋದರಿಯರನ್ನು ಅಗಲಿದ್ದಾರೆ.  

ಏನೆಕಲ್ಲು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ: ಮಹಿಳೆಯ ಚಿನ್ನದ ಸರ ಕದ್ದೊಯ್ದು ಪರಾರಿ

(ನ್ಯೂಸ್ ಕಡಬ) newskadaba.com ಮಲ್ಪೆ, ನ. 19:  ಮೀನು ಮಾರಾಟ ಮಾಡುವುದಕ್ಕಾಗಿ ಮನೆಯಿಂದ ಪಡುಕೆರೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತನೋರ್ವ ಸ್ಕೂಟರ್ ನಲ್ಲಿ ಹಿಂದಿನಿಂದ ಬಂದು ಕುತ್ತಿಗೆಗೆ ಕೈ ಹಾಕಿ ಅವರನ್ನು ದೂಡಿ ಹಾಕಿ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.   ಮಹಿಳೆಯನ್ನು ಪಡುಕೆರೆ ಕಿದಿಯೂರು ನಿವಾಸಿ ಯಮುನಾ(65) ಎಂದು ಗುರುತಿಸಲಾಗಿದೆ. ಸುಮಾರು 1.19 ಲಕ್ಷ ಮೌಲ್ಯದ ಐದೂವರೆ ಪವನ್ ತೂಕದ ಚಿನ್ನದ ಆಭರಣವೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಮಹಿಳೆಯ ಚಿನ್ನದ ಸರ ಕದ್ದೊಯ್ದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಜ: ಅಕ್ರಮ ಗಣಿಗಾರಿಕೆ ➤ ಎಚ್ಚೆತ್ತುಕೊಳ್ಳದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಪಂಜ, ನ. 18. ತಾಲೂಕಿನ ಸುಬ್ರಹ್ಮಣ್ಯ ವ್ಯಾಪ್ತಿಯ ಯೇನೆಕಲ್ಲು ಬಾನಡ್ಕ ಕಟ್ಟ ಎಂಬಲ್ಲಿ ಸುಮಾರು ಎರಡು ಎಕರೆ ಪ್ರದೇಶದ ಖಾಸಗಿ ಜಾಗದಲ್ಲಿ ಕೆಂಪು ಕಲ್ಲಿನ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಕಂದಾಯ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಂಡು ಕಾಣದಂತೆ ಕಣ್ಣು ಮುಚ್ಚಿಕೊಂಡಿರುವುದು ವಿಪರ್ಯಾಸವೇ ಸರಿ.     ಇಲ್ಲಿ ಟಿಪ್ಪರ್ ವಾಹನಗಳ ನಿರಂತರ ಓಡಾಟದಿಂದ ರಸ್ತೆಗಳು ತೀರಾ ಹದಗೆಟ್ಟಿದ್ದು, ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಇಲ್ಲದಂತಾಗಿದ್ದು, ಸಂಬಂಧಪಟ್ಟ

ಪಂಜ: ಅಕ್ರಮ ಗಣಿಗಾರಿಕೆ ➤ ಎಚ್ಚೆತ್ತುಕೊಳ್ಳದ ಅಧಿಕಾರಿಗಳು..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುರತ್ಕಲ್: ಪ್ರಿಯತಮೆಯ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೂವಿನ ವ್ಯಾಪಾರಿ…!

(ನ್ಯೂಸ್ ಕಡಬ) newskadaba.com ಸುರತ್ಕಲ್, ನ. 18. ಹೂವಿನ ವ್ಯಾಪಾರಿಯೊಬ್ಬ ತನ್ನ ಪಿಯತಮೆಯನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ನಲ್ಲಿ ಇಂದು ನಡೆದಿದೆ.     ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಕುಳಾಯಿ ನಿವಾಸಿ ವಸಂತ್(44) ಎಂದು ಗುರುತಿಸಲಾಗಿದೆ. ಕಳೆದ ಏಳೆಂಟು ವರ್ಷಗಳಿಂದ ಹೂವು ವ್ಯಾಪಾರ ಮಾಡುತ್ತಿದ್ದ ಈತನ ಅಂಗಡಿಗೆ ಹೂವು ಕೊಳ್ಳಲು ಬರುತ್ತಿದ್ದ ಸೂರಿಂಜೆಯ ವಿವಾಹಿತ ಮಹಿಳೆಯೋರ್ವರ ಪರಿಚಯವಾಗಿ ಅದು ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಆದರೆ ಈತನಿಗೆ ದ್ವೇಷ್ಯ ಇದ್ದ ಕಾರಣ ಮಹಿಳೆಯನ್ನೂ ಕೊಂದು

ಸುರತ್ಕಲ್: ಪ್ರಿಯತಮೆಯ ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೂವಿನ ವ್ಯಾಪಾರಿ…! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಪ್ರಾಪ್ತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕೆದಿಲ, ನ. 17. ಅಪ್ರಾಪ್ತ ಬಾಲಕಿಯೊರ್ವಳು ನಾಪತ್ತೆಯಾಗಿರುವ  ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ನ.14 ರಂದು ಕೆಲಸಕ್ಕೆಂದು ಮನೆಯಿಂದ ಹೋದವಳು ಗೆಳತಿಯ ಅಕ್ಕನ ಮಗು ಅನಾರೋಗ್ಯದಿಂದಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರಿಂದ ನಾನು ಅವರ ಜೊತೆ ಆಸ್ಪತ್ರೆಯಲ್ಲೇ ಇದ್ದು, ನಾಳೆ ಬರುತ್ತೇನೆ ಎಂದು ತಂದೆಗೆ ಕರೆ ಮಾಡಿ ಹೇಳಿ ನಾಪತ್ತೆಯಾಗಿದ್ದರು.  ಮನೆಗೆ ಬಾರದೇ ಇದ್ದುದ್ದರಿಂದ ಬಾಲಕಿಯ ತಂದೆಯು ಮಹಿಳಾ ಪೊಲೀಸರಿಗೆ ದೂರು ನೀಡಿದ್ದು, ‘ನನ್ನ ಪುತ್ರಿ ಅಪ್ರಾಪ್ತೆಯಾಗಿದ್ದರಿಂದ ಆಕೆಯನ್ನು

ಪುತ್ತೂರು: ಅಪ್ರಾಪ್ತೆ ನಾಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ನ. 16: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಬಳಿ‌ ರವಿವಾರ ರಾತ್ರಿ‌ ಉದ್ಯಮಿಯೊಬ್ಬರ ಮೇಲೆ ತಲವಾರು ದಾಳಿ ನಡೆದಿದೆ. ಕಂದಾವರ ಕೈಕಂಬದ ಅಬ್ದುಲ್ ಅಝೀಝ್ (56)ದಾಳಿಗೊಳಗಾದ ಉದ್ಯಮಿ. ಅವರು ರಾತ್ರಿ ಸುಮಾರು 10:30ಕ್ಕೆ ಮಸೀದಿಯಲ್ಲಿ ನಮಾಝ್ ಮಾಡಿ ಮನೆಗೆ ಮರಳಲು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿದ್ದಾಗ ಇಬ್ಬರು ಯುವಕರು ತಲವಾರಿನಿಂದ ಅಝೀಝ್ ಅವರ ತಲೆ, ಕೈ, ಕಾಲಿಗೆ ಕಡಿದು, ಗಂಭೀರ ಗಾಯಗೊಳಿಸಿ, ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಗಾಯಗೊಂಡ ಅಝೀಝ್ ಅವರನ್ನು ನಗರದ ಖಾಸಗಿ

ಮಂಗಳೂರು: ಉದ್ಯಮಿಯ ಮೇಲೆ ತಲವಾರು ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 16: ಉಡುಪಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನ ಸಿಬ್ಬಂದಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.   ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಸುಕೇಶ್ ಶೆಟ್ಟಿ(23) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತ ಹತ್ತನೆ ತರಗತಿಯ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದಾನೆ. ಎಂದು ಉಡುಪಿಯ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.  ಸದ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  

ಉಡುಪಿ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top