crime

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06: ಆಲೆಟ್ಟಿ ಗ್ರಾಮದ ಅರಂಬೂರು ಸ್ಥಾನದ ಮನೆಯ ಯುವಕನೋರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹರೀಶ ಎಂದು ಗುರುತಿಸಲಾಗಿದೆ.     ಇವರು ವಯನಾಟ್ ಕುಲವನ್ ದೈವದ ದರ್ಶನ ಪಾತ್ರಿಯಾಗಿ ಕೆಲಸ ನಿರ್ವಹಿಸಿತ್ತಿದ್ದು, ಅರಂಬೂರಿನ ಶ್ರೀ ವಯನಾಟ್ ಕುಲವನ್ ದೈವಸ್ಥಾನದ ಮನೆಯಲ್ಲಿ ವಾಸಮಾಡುತ್ತಿದ್ದರು. ಅವರು ಎಂದಿನಂತೆ ಮನೆಯಲ್ಲಿದ್ದು, ರಾತ್ರಿವೇಳೆ ಮನೆಯ ಪಕ್ಕದ ಗುಡ್ಡೆಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು […]

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ,  ನ. 05: 2016 ಜೂನ್ 15 ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.       ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು ನ. 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.!

(ನ್ಯೂಸ್ ಕಡಬ) newskadaba.com ಮಂಗಳೂರು ನ. 04: ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಫಾರ್ಮ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು.  ಮಧ್ಯಾಹ್ನ 1 ಗಂಟೆ ವೇಳೆಗೆ ಸುರೇಂದ್ರನ್ ಅವರು ಮನೆಗೆ

ಮಂಗಳೂರಿನಲ್ಲಿ ಮುಂದುವರಿದ ದುಷ್ಕರ್ಮಿಗಳ ಅಟ್ಟಹಾಸ ➤ ಹಾಡಹಗಲೇ ಉದ್ಯಮಿಯ ಹತ್ಯೆ.! Read More »

ಕರಾವಳಿ, ಕ್ರೈಮ್ ನ್ಯೂಸ್

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು. ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ

ನಟಿಮಣಿಯರ ಜಾಮೀನು ಅರ್ಜಿ ವಜಾ ➤ ರಾಗಿಣಿ, ಸಂಜನಾಗೆ ಮತ್ತೆ ಜೈಲುವಾಸ Read More »

ಕರಾವಳಿ

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ನ. 03: ಮಂಗಳೂರು ವ್ಯಾಪ್ತಿಯಲ್ಲಿ ಗಾಂಜಾ ಸಾಗಾಟದ ಜಾಲ ಪತ್ತೆಯಾಗುತ್ತಲೇಯಿದೆ. ಅದರಂತೆ ಮಂಜನಾಡಿ ಗ್ರಾಮದ ವಿಜಯನಗರದದಲ್ಲಿ ಸುಮಾರು 23 ಕೆಜಿ ಗಾಂಜಾವನ್ನು ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಓರ್ವ ಆರೋಪಿಯನ್ನು ಬಂದಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ತೌಡುಗೋಳಿಯ ಅಬ್ದುಲ್ ಖಾದರ್ ತನ್ಸಿ(23) ಎಂದು ಗುರುತಿಸಲಾಗಿದೆ. ಆರೋಪಿ ಮಂಜನಾಡಿಯ ವಿಜಯನಗರದಿಂದ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪೊಲೀಸರು 23 ಕೆ,ಜಿ 480 ಗ್ರಾಂ ತೂಕದ ಗಾಂಜಾ, ಬೈಕ್ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು :23 ಕೆ.ಜಿ ಗಾಂಜಾ ಸಾಗಾಟ ➤ಆರೋಪಿ ಖಾಕಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು  ಬಂದ್ಯೋಡು ವೀರನಗರದ ಲತೀಫ್ (30) ಮತ್ತು ಬಂದ್ಯೋಡಿನ ಸಹಾದ್ (28) ಎಂದು ಗುರುತಿಸಲಾಗಿದೆ.     ಲತೀಫ್ ಎಂಬವ ಕೊಲೆ ಆರೋಪಿಯಾಗಿದ್ದು, ಉಪ್ಪಳ ಸೋಂಕಾಲಿನ ಅಲ್ತಾಫ್ ಎಂಬುವವನನ್ನು ಕಾರಿನಲ್ಲಿ ಅಪಹರಿಸಿ ಕೊಂಡೊಯ್ದು ಕರ್ನಾಟಕದಲ್ಲಿ ಕೊಲೆಗೈದ ಪ್ರಕರಣದ ಎರಡನೇ ಆರೋಪಿಯಾಗಿದ್ದಾನೆ. ಒಟ್ಟು ಮೂರು ಪ್ರಕರಣಗಳನ್ನು

ಗುಂಡಿನ ದಾಳಿ ಹಾಗೂ ಕೊಲೆ ಯತ್ನ ಪ್ರಕರಣ ➤ ಆರೋಪಿಗಳಿಬ್ಬರು ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ ನ. 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ

ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top