crime

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನದ ಸಹಿತ ಆರೋಪಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಬಂಧಿತ ಆರೋಪಿಯನ್ನು ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 27ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧ 531.390 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಈತ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದು, ಈ […]

ಮಂಗಳೂರು: 27ಲಕ್ಷ ರೂ. ಮೌಲ್ಯ ಅಕ್ರಮ ಚಿನ್ನಸಾಗಾಟ ಪತ್ತೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು (ಶನಿವಾರ) ಬೆಳ್ಳಂಬೆಳಗ್ಗೆ ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದ್ದು, ಘಟನೆಯಿಂದ ಬಂಧಿತ ಆರೋಪಿ ಮತ್ತು ಎಸ್ಸೈ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಪಂಜಾಬ್, ಅ.23: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಸಜೀವ ದಹನ ಮಾಡಿದ ಭೀಕರ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಜಲಾಲ್ ಪುರದಲ್ಲಿ ನಡೆದಿದೆ. ಇದೋಂದು ಪಂಜಾಬ್ ನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಅರ್ಧ ಸುಟ್ಟುಹೋಗಿರುವ ದೇಹ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿಯನ್ನು ಗುರ್ ಪ್ರೀತ್ ಸಿಂಗ್ ಹಾಗೂ ಆತನ ಅಜ್ಜ ಸುರ್ಜಿತ್ ಸಿಂಗ್ ಎಂದು ಗುರುತಿಸಲಾಗಿದೆ.     ಆ ರೋಪಿಗಳಿಬ್ಬರನ್ನು ಕೊಲೆ, ಅತ್ಯಾಚಾರದ ಆರೋಪದಡಿ, ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ ಎಂದು

ಪಂಜಾಬ್: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಸಜೀವ ದಹನ ➤ ಕಠಿಣ ಶಿಕ್ಷೆಗೆ ಪಂಜಾಬ್ ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23: ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಳ್ಳಾಜೆ ಎಂಬಲ್ಲಿ ಕಳೆದ ದಿನ ರಾತ್ರಿ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಳನ್ನು ಗಂಗಾಧರ ನಾಯ್ಕರವರ ಪುತ್ರಿ ಪ್ರಸನ್ನ ಎಂದು ಗುರುತಿಸಲಾಗಿದೆ.     ಆತ್ಮಹತ್ಯೆಗೆ ಕಾರಣ ಏನು ಎಂಬುದಾಗಿ ತಿಳಿದು ಬಂದಿಲ್ಲ. ಮೃತಳು ತಂದೆ, ತಾಯಿ ಪುಷ್ಪ, ಸಹೋದರ ಶಿವಪ್ರಸಾದ್‌ ರವರನ್ನು ಅಗಲಿದ್ದಾರೆ.  

ಸುಳ್ಯ: ನೇಣು ಬಿಗಿದು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 22: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.   ಕರ್ನಾಟಕ ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು Read More »

ಕರಾವಳಿ, ಕರ್ನಾಟಕ

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 22: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪ ಹಿನ್ನೆಲೆಯಲ್ಲಿ ಪತ್ನಿ, ಪತಿಯ ವಿರುದ್ಧ ಕೇಸ್ ದಾಖಲಿಸಿದ್ದು, ಪತಿ ಲತೀರ್ ರೆಹಮಾನ್ ವಿರುದ್ಧ FIR ದಾಖಲಾಗಿದೆ. ಪತಿ ಕಿರುಕುಳ ತಾಳಲಾರದೆ ಸಂತ್ರಸ್ಥೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಆರೋಪಿ ಪತಿ ವಿರುದ್ದ ಎಫ್‌ಐಆರ್ ದಾಖಲಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿರುವ ದೂರುದಾರ ಸಂತ್ರಸ್ಥೆ. 2019 ರ ಜೂನ್​ನಲ್ಲಿ ಲತೀರ್ ರೆಹಮಾನ್ ಜತೆ ವಿವಾಹವಾಗಿದ್ದರು. ವಿವಾಹ ಬಳಿಕ ವರದಕ್ಷಿಣೆಗಾಗಿ ಲತೀರ್

ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಾಟ ನೀಡಿದ ಪಾಪಿಪತಿ ➤ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತೆ.!? Read More »

ಕ್ರೈಮ್ ನ್ಯೂಸ್

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.21: ಕಾಡಾನೆಯೊಂದು ನಡೆಸಿದ ದಾಳಿಯಿಂದಾಗಿ ಆದಿವಾಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ಸಮೀಪದ ಡೋರನಕಟ್ಟೆ ಕಾಲೋನಿಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಮೃತನನ್ನು ನಂಜನಗೂಡು ಜಿಲ್ಲೆಯಲ್ಲಿನ ವೆಂಕಟಗಿರಿ ಆದಿವಾಸಿ ಕಾಲೋನಿಯ ಗಣೇಶ (25) ಎಂದು ಗುರುತಿಸಲಾಗಿದೆ.     ಈತ ನಿನ್ನೆ ಬಂಕಹಳ್ಳಿ ಗ್ರಾಮದಿಂದ ಕೆಲಸವನ್ನು ಮುಗಿಸಿಕೊಂಡು ತನ್ನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಸಂದರ್ಭದಲ್ಲಿ ವೆಂಕಟಗಿರಿ ಕಾಲೋನಿ ಮತ್ತು ಡೋರನಕಟ್ಟೆ ಕಾಲೋನಿಯ ಮಧ್ಯೆ ಕಾಡಾನೆಯ ತುಳಿತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ನಂಜನಗೂಡು: ಕಾಡಾನೆ ದಾಳಿಯಿಂದ ಆದಿವಾಸಿ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.21: ಬೇಕಲ ಠಾಣಾ ವ್ಯಾಪ್ತಿಯ ತೃಕ್ಕನ್ನಾಡ್ ಎಂಬಲ್ಲಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೃಕ್ಕನ್ನಾಡ್ ನ ಪ್ರಸಾದ್ ರಾಘವರವರ ಪುತ್ರ ವಿಘ್ನೇಶ್ ( 13) ಎಂದು ಗುರುತಿಸಲಾಗಿದೆ.   ಕಾಸರಗೋಡಿನಲ್ಲಿರುವ ಅಜ್ಜಿ ಮನೆಯಲ್ಲಿದ್ದ ವಿಘ್ನೇಶ್ ಕೆಲ ದಿನಗಳ ಹಿಂದೆ  ತೃಕ್ಕನ್ನಾಡ್ ನಲ್ಲಿರುವ ಮನೆಗೆ ಬಂದಿದ್ದನು. ಈತ ಏಳನೇ ತರಗತಿ ವಿದ್ಯಾರ್ಥಿ. ಕಳೆದ ದಿನ ತಾಯಿ ಮತ್ತು ಸಹೋದರಿ ಹೊರಗಡೆ ತೆರಳಿದ್ದ ಸಂದರ್ಭದಲ್ಲಿ

ಕಾಸರಗೋಡು: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top