crime

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್ […]

ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ Read More »

ಕರಾವಳಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಮಂಗಳೂರು, ಅ.7. ಉಳ್ಳಾಲ ಮುಕ್ಕಚ್ಚೇರಿ ಸಮೀಪ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡಲು ಬಂದ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ. ಖಾದರ್ ರವರ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆ ಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ. ಖಾದರ್ ಮಾತನಾಡಿ, ಎಸಿಪಿ

ಸಚಿವ ಯು.ಟಿ ಖಾದರ್ ಕಾರಿಗೆ ಕಲ್ಲು ಎಸೆದು ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು Read More »

ಕರಾವಳಿ

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.01. ಇಲ್ಲಿನ ಮುಖ್ಯರಸ್ತೆಯ ಗಾಂಧಿನಗರದಲ್ಲಿರುವ ಜೆ.ಜೆ. ಕಾಂಪ್ಲೆಕ್ಸ್‌ನ ಮಹಡಿಯಿಂದ ಯುವಕನೊಬ್ಬ ಕೆಳಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಯುವಕನನ್ನು ಕೋಲ್ಚಾರಿನ ಯತೀಶ್ ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತ ಈ ಕಟ್ಟಡದಲ್ಲಿ ಬಾಡಿಗೆ ಕೊಟ್ಟಡಿಯಲ್ಲಿದ್ದು, ಘಟನೆಯ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆಯತಪ್ಪಿ ಕೆಳಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.30. ತನ್ನ ಅಪ್ರಾಪ್ತ ವಯಸ್ಸಿನ ಬಾಲಕಿಗೆ ನಿರಂತರ ಮಾನಸಿಕ ಹಾಗೂ ದೈಹಿಕ ಕಿರುಕುಳ‌ ನೀಡುವ ಕಾರಣ ಠಾಣೆಗೆ ದೂರು ನೀಡಿದ್ದಕ್ಕೆ ಗಂಡ ಹಾಗೂ ಮಗನಿಗೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆಯೋರ್ವರು ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಇಚ್ಲಂಪಾಡಿ ಗ್ರಾಮದ ಬಿಜೇರು ನಿವಾಸಿ ಸಜೀವ ಎಂಬಾತನು ಸ್ಥಳೀಯ ಬಾಲಕಿಗೆ ನಿರಂತರ ಕಿರುಕುಳ ನೀಡುತ್ತಿರುವುದನ್ನು ಆಕ್ಷೇಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆತನ ಕಿರುಕುಳ ತಾಳಲಾರದೆ ಬಾಲಕಿಯು ಈ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದಳೆನ್ನಲಾಗಿದೆ.

ಇಚ್ಲಂಪಾಡಿ: ಅಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ► ಪೊಲೀಸ್ ದೂರು ನೀಡಿದ್ದಕ್ಕೆ ತಂದೆ ಮಗನಿಗೆ ಹಲ್ಲೆ Read More »

ಕರಾವಳಿ

ಜಗದೀಶ್ ಕಾರಂತ್ ಗೆ ಜಾಮೀನು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.30. ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಸಾರ್ವಜನಿಕ ಬೆದರಿಕೆ ಹಿನ್ನೆಲೆಯಲ್ಲಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 15 ರಂದು ಪುತ್ತೂರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಠಾಣೆಯ ಎಸ್.ಐ. ಹಾಗೂ ಸಿಬ್ಬಂದಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು ಮತ್ತು ಸಾರ್ವಜನಿಕ ಬೆದರಿಕೆ ಹಾಕಿದ್ದರು. ಈ ಸಂಬಂಧ ಪುತ್ತೂರು ನಗರ ಪೋಲೀಸರು ಕಾರಂತ್

ಜಗದೀಶ್ ಕಾರಂತ್ ಗೆ ಜಾಮೀನು Read More »

ಕರಾವಳಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಗುಂಪೊಂದು ಲಾರಿ ಚಾಲಕನಿಗೆ ಹಲ್ಲೆಗೆ ಯತ್ನಿಸಿದ್ದು, ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ‌. ರಸ್ತೆ ಬಿಟ್ಟು ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನನ್ನು ಬೆನ್ನಟ್ಟಿದ್ದು, ಹಲ್ಲೆಗೆ ಯತ್ನಿಸಲಾಗಿದೆ. ವಿಷಯ ತಿಳಿದ ಗಸ್ತು ನಿರತರಾಗಿದ್ದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ Read More »

ಕರಾವಳಿ

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.24. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ರಾಮಕುಂಜ ಗ್ರಾಮದ ಕುಂಡಾಜೆ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂಡಾಜೆ ಎಂಬಲ್ಲಿ ವಾಹನಕ್ಕೆ ದಾರಿ ಬಿಡುವ ವಿಚಾರದಲ್ಲಿ ಎರಡು ಕೋಮುಗಳ ಜನರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆಲ ಪ್ರಮುಖರು ಮಧ್ಯಪ್ರವೇಶಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರು. ಬಳಿಕ ರಾಜ್ಯ ಹೆದ್ದಾರಿಯ ರಾಮಕುಂಜ ಕ್ರಾಸ್ ಎಂಬಲ್ಲಿ ಜಮಾಯಿಸಿದ ಎರಡು ಗುಂಪುಗಳಲ್ಲಿದ್ದವರು

ಆತೂರು: ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಘರ್ಷಣೆ ► ಎರಡು ಕೋಮಿನ ಯುವಕರಿಂದ ಪರಸ್ಪರ ಹೊಡೆದಾಟ Read More »

ಕರಾವಳಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.22. ಅಕ್ರಮ ಕಸಾಯಿಖಾನೆಗೆ ಸಾಗಿಸಲೆಂದು ಹೋರಿಯೊಂದನ್ನು ಟೆಂಪೋದೊಳಗೆ ತುಂಬಿಸುವಾಗ ಒದ್ದಾಡಿದ ಕಾರಣಕ್ಕಾಗಿ ತಲವಾರಿನಿಂದ ಕಡಿದು ತೀವ್ರ ಗಾಯಗೊಳಿಸಿದ ನೀಚ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಎಂ.ಐ.ಸಿ ಬಳಿ ಹೋರಿಯೊಂದು ಮಾರಕಾಯುಧಗಳಿಂದ ಕಡಿದ ರೀತಿಯಲ್ಲಿ ತೀವ್ರ ಸ್ವರೂಪದ ಗಾಯಗಳೊಂದಿಗೆ ಅಸ್ವಸ್ಥ ಸ್ಥಿತಿಯಲ್ಲಿ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಕಂಡು ಮಣಿಪಾಲ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪರಿಸರದ ನಿವಾಸಿಗಳು ಹೋರಿಗೆ ಔಷಧೋಪಚಾರ ಮಾಡಿದ್ದಾರೆ. ಆದರೆ ಹೋರಿಯು ಚಿಂತಾಜನಕ ಸ್ಥಿತಿಗೆ ತಲುಪಿದಾಗ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ

ಉಡುಪಿ: ಹೋರಿಯನ್ನು ತಲ್ವಾರಿನಿಂದ ಕಡಿದ ದುಷ್ಕರ್ಮಿಗಳು ► ಚಿಂತಾಜನಕ ಸ್ಥಿತಿಯಲ್ಲಿದ್ದ ಮೂಕ ಪ್ರಾಣಿ ಗೋಶಾಲೆಗೆ Read More »

ಕರಾವಳಿ

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.21, ಅಣ್ಣ-ತಮ್ಮನ ನಡುವೆ ನಡೆದ ಜಗಳದಲ್ಲಿ ತಮ್ಮ ಅಣ್ಣನನ್ನೇ ಕೊಂದಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಆಸ್ಕರ್ ರೆಜಾರಿಯಾ(49) ಕೊಲೆಯಾದ ದುರ್ದೈವಿ. ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಗೊಂಡಿದೆ. ತಮ್ಮ ರಾಯ್‍ಸನ್ ರೆಜಾರಿಯಾ ಮತ್ತು ಆಸ್ಕರ್ ರೆಜಾರಿಯಾ ನಡುವೆ ನಡೆದ ಜಗಳ ವಿಕೋಪಕ್ಕೆ ಏರಿದಾಗ ರಾಯ್‍ಸನ್ ಆಸ್ಕರ್‍ಗೆ ಚಾಕುವಿನಿಂದ ಇರಿದಿದ್ದಾನೆ. ಆಸ್ಕರ್ ತನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿದ್ದ. ಮನೆಗೆ ಬಂದಾಗ ರಾಯ್‍ಸನ್ ಮನೆಯಲ್ಲಿ ಇರಲಿಲ್ಲ.

ಅಣ್ಣನನ್ನು ಚಾಕುವಿನಿಂದ ಇರಿದು ಕೊಂದ ತಮ್ಮ ►ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ.. Read More »

ಕರ್ನಾಟಕ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.19, ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ  ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ ಗಾಯಗೊಂಡವರು. ಚಲುವರಾಜು ಮತ್ತು ನಾಗರಾಜು ಮನೆ ಅಕ್ಕಪಕ್ಕದಲ್ಲಿದ್ದು, ಮನೆಯ ಸಮೀಪ ಓಡಾಡುವ ಜಾಗದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಆದರೆ ಕಳೆದ ರಾತ್ರಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಚಲುವರಾಜು ಪಕ್ಕದ ಮನೆಯ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ
Scroll to Top