crime

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸೆ. 28. ಖಾಸಗಿ ಕ್ಲಿನಿಕ್ ಒಂದರ ವೈದ್ಯ ನೀಡಿದ ಇಂಜೆಕ್ಷನ್​ನಿಂದಾಗಿ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.   ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಎಂಬವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯರ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ […]

ವೈದ್ಯನ ನಿರ್ಲಕ್ಷ್ಯಕ್ಕೆ ಏಳರ ಬಾಲಕ ಬಲಿ – ಪ್ರಕರಣ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 28. ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ​ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್​ ಮಾಡಿದ್ದಾರೆ. ಹೋಟೆಲ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಅದೊಂದು ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ

ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನಗರದಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಶಾಲಿನಿ ಎಂದು ಗುರುತಿಸಲಾಗಿದೆ. ಬೆನ್ಸನ್ ಟೌನ್ ಚಿನ್ನಪ್ಪ ಗಾರ್ಡನ್ ನಿಂದ ಬರುತ್ತಿದ್ದ ಆಟೋ ಮೆಜೆಸ್ಟಿಕ್ ಗೆ ಪ್ಯಾಸೆಂಜರ್ ಡ್ರಾಪ್ ಮಾಡಲು ಹೊರಟಿತ್ತು. ಸಿಗ್ನಲ್ ಜಂಪ್ ಮಾಡಿದ ಲಾರಿ ಡ್ರೈವರ್ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಆಟೋ ಹಿಂಬದಿ ಸೀಟ್‌ನಲ್ಲಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಎನ್ನಲಾಗಿದೆ.  

ರಸ್ತೆ ಅಪಘಾತ: ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 27. ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್​ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್ ನೀಡಿದ

ವೈದ್ಯನ ನಿರ್ಲಕ್ಷಕ್ಕೆ 7 ವರ್ಷದ ಬಾಲಕಿ ಮೃತ್ಯು..! ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 27. ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ. ವೈಯಾಲಿಕಾವಲ್ ನ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು

ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.  

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 27. ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ಪೆಟ್ರೋಲ್ ಸುರಿದುಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಪಾಂಡಪ್ಪ ತಿಪ್ಪಣ್ಣ ಕೊರವರ್ (45) ಎಂದು ಗುರುತಿಸಲಾಗಿದೆ. 3 ಎಕರೆ ಜಮೀನು ಹೊಂದಿದ್ದ ಪಾಂಡಪ್ಪ ಬ್ಯಾಂಕ್‌ನಲ್ಲಿ 1 ಲಕ್ಷ ರು. ಜತೆಗೆ ಕೈ ಸಾಲ ಮಾಡಿದ್ದರು. ಮಳೆಯಿಂದ ತೊಗರಿ ಬೆಳೆ ನಷ್ಟವಾಗಿತ್ತು. ಈ ನಡುವೆ ಸಾಲ ತೀರಿಸಲು ವಕೀಲರ ಮೂಲಕ 2 ಬಾರಿ ಬ್ಯಾಂಕ್ ನೋಟಿಸ್ ಕಳುಹಿಸಿತ್ತು. ಹೀಗಾಗಿ

ಸಾಲ ತೀರಿಸುವಂತೆ ಬ್ಯಾಂಕ್ ಕಳುಹಿಸಿದ ನೋಟಿಸ್‌ಗೆ ಹೆದರಿ ರೈತ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಸೆ. 26. ಬೆಂಗಳೂರಿನಿಂದ ಬಂದಿರುವ ಐದು ಜನ ಅಧಿಕಾರಿಗಳ ಐಟಿ ತಂಡ ಇಂದು ನಗರದ ಸೆಂಟ್ರಲ್ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್ ವಿಚಾರಣೆ ನಡೆಸಿದ್ದಾರೆ. ಜೈಲಿನ ಸೂಪರಿಂಟೆಂಡೆಂಟ್ ಕೊಠಡಿಯಲ್ಲಿ ಅವರ ಎದುರಿನಲ್ಲಿಯೇ ನ್ಯಾಯಾಲಯದ ಸೂಚನೆಯಂತೆ ಇಂದು ಮತ್ತು  ನಾಳೆ ವಿಚಾರಣೆ ನಡೆಯಲಿದೆ. ರೇಣುಕಸ್ವಾಮಿ ಕೊಲೆ ಆರೋಪವನ್ನು ಮತ್ತೊಬ್ಬರು ಒಪ್ಪಿಕೊಳ್ಳಲು 80 ಲಕ್ಷ ರೂ ನಗದು ಹಣ ನೀಡಿದ ಕುರಿತು ತನಿಖೆ ನಡೆಯಿತ್ತಿದೆ.  

ಆರೋಪಿ ನಟ ದರ್ಶನ್ ವಿಚಾರಣೆ ಆರಂಭಿಸಿದ ಐಟಿ ತಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top