crime

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ಅಬಕಾರಿ ಪರವಾನಗಿ ವಿತರಣೆ, ನವೀಕರಣದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ನಗರದ 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಕಚೇರಿಗಳಲ್ಲಿ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ರೂ.2 ಲಕ್ಷ ರೂ. ಪತ್ತೆಯಾಗಿದೆ. ಸಾರ್ವಜನಿಕರ ದೂರುಗಳ ಆಧರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡಗಳನ್ನು ರಚಿಸಲಾಗಿತ್ತು. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು […]

62 ಅಬಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 25. ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಪಲ್ಟಿಯಾದ ಪರಿಣಾಮ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯೋರ್ವರು ಮೃತಪಟ್ಟು, ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಮಂಗಳೂರು ಪಡೀಲು ಸಮೀಪ ನಡೆದಿದೆ. ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ(73) ಎಂದು ಗುರುತಿಸಲಾಗಿದೆ. ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ

ಆಂಬ್ಯುಲೆನ್ಸ್ ಪಲ್ಟಿ- ರೋಗಿ ಉಪ್ಪಿನಂಗಡಿಯ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು

ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಸೆ. 24. ಮಲಯಾಳಂ ಸಿನಿಮಾರಂಗದಲ್ಲಿ ಆಂದೋಲನದ ಹಿನ್ನೆಲೆ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ ಜನಪ್ರಿಯ ಮಲಯಾಳಂ ನಟ ಮತ್ತು ಸಿಪಿಐ(ಎಂ) ಶಾಸಕ ಮುಖೇಶ್ ಅವರನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಬಂಧಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿರೋ ಮುಕೇಶ್ ಅವರ ಬಂಧನ ಹಲವು ಚರ್ಚೆಗೆ ಕಾರಣವಾಗಿದೆ.  

ಲೈಂಗಿಕ ಕಿರುಕುಳ ಪ್ರಕರಣ- ನಟ ಮುಖೇಶ್ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಸೆ. 24. ಮಂಗಳೂರಿನ ಮಾರಿಪಳ್ಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ಎಂಬಾತ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ಸೇವಂತ್ ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸೇವಂತ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತಾದರೂ ತಲೆಗೆ ವಿಪರೀತ ಪೆಟ್ಟಾಗಿದ್ದರಿಂದ ಆಸ್ಪತ್ರೆಯಲ್ಲಿ

ರಸ್ತೆ ಅಪಘಾತ- ಸುಳ್ಯದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ ಸೆ. 24. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಎರಡೂ ಬದಿಯೂ ನೂರಾರು ವಾಹನಗಳು ಸಾಲುಗಟ್ಟಿ ನಿಂತ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಂಟೈನರ್ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ

ಗುಂಡ್ಯದಲ್ಲಿ KSRTC ಬಸ್ ಹಾಗೂ ಕಂಟೇನರ್ ನಡುವೆ ಅಪಘಾತ – ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com  ಸೆ. 24. ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ ಗೆ ಕಾಸ್ಮೆಟಿಕ್ ಸರ್ಜರಿಗೆಂದು ತೆರಳಿದ್ದ ಯುವಕನೋರ್ವ ಮೃತಪಟ್ಟ ಘಟನೆ ನಗರದ ಕಂಕನಾಡಿಯ ಬೆಂದೂರುವೆಲ್ನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬದ ಸದಸ್ಯರು ಆರೋಪಿಸಿರುವ ಕುರಿತು ವರದಿಯಾಗಿದೆ. ಮೃತಪಟ್ಟವರನ್ನು ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32) ಎಂದು ಗುರುತಿಸಲಾಗಿದೆ. ಮಾಝಿನ್ ತನ್ನ ಎದೆಯ ಎಡಭಾಗದ ಸಣ್ಣ ಗುಳ್ಳೆಯನ್ನು ತೆಗೆಸಲೆಂದು “ಫ್ಲೋಂಟ್” ಕ್ಲಿನಿಕ್ ಗೆ ತೆರಳಿದ್ದು, ಅರ್ಧ

ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 24. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ ಅವರನ್ನು ಕಾರ್ಕಳ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗಿ ಭದ್ರತೆಯೊಂದಿಗೆ ಮಂಗಳೂರಿಗೆ ಕರೆತಂದು ಸೋಮವಾರ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಕಾರ್ಕಳ ಡಿವೈಎಸ್ಪಿ ಅರವಿಂದ್‌ ಎನ್‌. ಕಲಗುಜ್ಜಿ ನೇತೃತ್ವದ ತಂಡ ಇವರಿಬ್ಬರನ್ನು ತೀವ್ರ ವಿಚಾರಣೆ ನಡೆಸಿತು.  

ಕೊಲೆ ಪ್ರಕರಣ: ನಕ್ಸಲ್ ಕನ್ಯಾಕುಮಾರಿ, ರಮೇಶ್‌ನನ್ನು ಕೋರ್ಟ್ ಗೆ ಹಾಜರುಪಡಿಸಿದ ಪೋಲಿಸರು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸೆ. 24. ಸ್ಕೂಟರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ. ಗಾಯಗೊಂಡ ಸವಾರನನ್ನು ಕಾಸರಗೋಡು ಮೂಲದ ಜುನೈದ್ ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಎಮ್ಮೆಮಾಡಿಗೆ ತೆರಳಿ ವಾಪಾಸು ಬರುತ್ತಿದ್ದ ಸ್ಕೂಟರ್ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನ ಸುಳ್ಯದ

ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top