crime

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ […]

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಫರೀದಾಬಾದ್, ಸೆ. 14.  ಜಲಾವೃತಗೊಂಡಿದ್ದ ಹಳೆಯ ಫರೀದಾಬಾದ್ ಕೆಳ ಸೇತುವೆಯಲ್ಲಿ ಕಾರೊಂದು ಸಿಲುಕಿಕೊಂಡು ಬ್ಯಾಂಕ್ ಮ್ಯಾನೇಜರ್ ಹಾಗೂ ಕ್ಯಾಶಿಯರ್ ಸೇರಿದಂತೆ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ 11.30ಕ್ಕೆ ನಡೆದಿದೆ ಎಂದು ವರದಿಯಾಗಿದೆ. ದಿಲ್ಲಿ-ಎನ್ಸಿಆರ್ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಫರೀದಾಬಾದ್ ಕೆಳ ಸೇತುವೆ ಜಲಾವೃತವಾಗಿತ್ತು. ಈ ಸಂದರ್ಭದಲ್ಲಿ HDFC ಬ್ಯಾಂಕಿನ ಗುರುಗ್ರಾಮ ಶಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ಮೃತರು, ಫರೀದಾಬಾದ್ ನತ್ತ ತೆರಳುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  

ಜಲಾವೃತಗೊಂಡಿದ್ದ ಸೇತುವೆಯಲ್ಲಿ ಕಾರು ಸಿಲುಕಿ ಇಬ್ಬರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 14.  ಹಣಕ್ಕಾಗಿ ಬೇರೆಯವರಿಗೆ ನೂರಾರು ಫೋನ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ ಸೈಬರ್, ಆರ್ಥಿಕ ಮತ್ತು ನಾರ್ಕೋಟಿಕ್ಸ್ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಕೊಪ್ಪಳ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ಹೆಡ್ ಕಾನ್ಸ್ ಟೇಬಲ್ ಸಿಹೆಚ್ ಕೊಟೆಪ್ಪ (44)ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ವರದಿಯ ಪ್ರಕಾರ, ಆರೋಪಿ ಕಾನ್ಸ್ ಟೇಬಲ್ 145 ಜನರ ಮೊಬೈಲ್ ಕಾಲ್ ರೆಕಾರ್ಡ್ ಬಹಿರಂಗಪಡಿಸಿದ್ದಾರೆ. ಅಲ್ಲದೇ, ಒಂಬತ್ತು ಮೊಬೈಲ್

ಫೋನ್ ಕಾಲ್ ರೆಕಾರ್ಡ್ ಬಹಿರಂಗ: ಪೋಲಿಸ್ ಕಾನ್ಸ್ ಟೇಬಲ್ ವಿರುದ್ಧ ಎಫ್ ಐಆರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಜೀವ ಬೆದರಿಕೆ ಆರೋಪ ಮತ್ತು ಜಾತಿ ನಿಂದನೆ ಮಾಡಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್.ಐ.ಆರ್. ದಾಖಲಾಗಿವೆ. ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಸೇರಿದಂತೆ ನಾಲ್ವರು 30 ಲಕ್ಷ ರೂ.ಗಳ

ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ. ರೋಡು ಶಾಖೆಯೊಳಗಿಂದಲೇ ನಿವೃತ್ತ ಸೈನಿಕ ಅಡ್ಯಾರ್‌ ರೈಮಂಡ್‌ ಲೋಬೋ ನಗರ ನಿವಾಸಿ ಅಂಬ್ರೋಸ್‌ ಡಿ’ಸೋಜಾ ಎಂಬವರ 1.30 ಲಕ್ಷ ರೂ. ಹಣವಿದ್ದ ಬ್ಯಾಗ್‌ ಕಳವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸೈನಿಕರಾಗಿರುವ ಅಂಬ್ರೋಸ್ ರವರು ಸೆ. 04ರಂದು ಮನೆಯಿಂದ 50 ಸಾವಿರ ರೂ. ಹಣ ಹಿಡಿದುಕೊಂಡು ಬಂದಿದ್ದರು. ಅಲ್ಲದೇ ಬ್ಯಾಂಕ್‌ ಶಾಖೆಗೆ ತೆರಳಿ ತಮ್ಮ ಖಾತೆಯಿಂದ ಪೆನ್ಷನ್‌ ಹಣ 80 ಸಾವಿರ ರೂ.

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 14. ಆಟೋಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಗರದ ನಲ್ಲೂರು ಗೇಟ್ ಬಳಿ ಸಂಭವಿಸಿದೆ. ಮೃತರನ್ನು ಮಲ್ಲೇದೇವರನಹಳ್ಳಿ ಗ್ರಾಮದ ಚಂದ್ರಶೇಖರ್(38), ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಮೂಡಿಗೆರೆಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಾರಿಗೆ ಬಸ್ ಚಿಕ್ಕಮಗಳೂರು ನಗರ ಸಮೀಪದ ನಲ್ಲೂರು

ಆಟೋ- ಬಸ್ ಢಿಕ್ಕಿ: ಸವಾರರಿಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಚಕ್ ತಾಪರ್ ಕ್ರೀರಿ ಪಟ್ಟಣ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಿನ್ನೆ ರಾತ್ರಿ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ಮತ್ತು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದರಿಂದ ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ ಸಂಭವಿಸಿದೆ. ಯೋಧರನ್ನು ನಾಯಬ್ ಸುಬೇದಾರ್ ವಿಪನ್

ಜಮ್ಮು- ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ ಇಬ್ಬರು ಸೇನಾ ಸಿಬ್ಬಂದಿ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಎಲೆಕ್ಟ್ರೀಷಿಯನ್ ವೋರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35)ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಗುರುವಾರ ಸಂಜೆ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ

ಆಕಸ್ಮಿಕ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top