crime

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 14.  ಸಮುದ್ರದಲ್ಲಿ ಮೀನುಗಾರಿಕೆ ಮಾಡುತಿದ್ದ ವೇಳೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಮೃತರನ್ನು ಶೇಷು (61) ಎಂದು ಗುರುತಿಸಲಾಗಿದೆ. ಶೇಷು ಅವರು ಕೋಡಿಯ ಪ್ರದೀಪ್ ಅವರ ಫಿಶಿಂಗ್ ಬೋಟ್‌ನಲ್ಲಿ ಮೀನುಗಾರಿಕೆ ಮಾಡುತಿದ್ದಾಗ 8.15ರ ಸುಮಾರಿಗೆ ಆಯತಪ್ಪಿ ಸಮುದ್ರದ ನೀರಿಗೆ ಬಿದ್ದಿದ್ದರು. ತಕ್ಷಣ ಬೋಟಿನಲ್ಲಿದ್ದ ಇತರರು ಅವರನ್ನು ಎತ್ತಿ ಅಂಬುಲೆನ್ಸ್‌ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು […]

ಆಯತಪ್ಪಿ ಸಮುದ್ರಕ್ಕೆ ಬಿದ್ದು  ಮೀನುಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಎಲೆಕ್ಟ್ರೀಷಿಯನ್ ಓರ್ವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿರುವ ದೇವದಾಸ್ ಉರ್ಕುಂಜ ಎಂಬಲ್ಲಿ ಮನೆಯೊಂದರ ವೈರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ

ವಿದ್ಯುತ್ ಪ್ರವಹಿಸಿ ಇಲೆಕ್ಟ್ರಿಷಿಯನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..!

(ನ್ಯೂಸ್ ಕಡಬ) newskadaba.com ಛತ್ತೀಸ್ ಗಢ, ಸೆ. 13.  ವಾಮಾಚಾರ ನಡೆಸುತ್ತಿರುವ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬಲೋಡಬಝಾರ್-ಭಾತಪರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಮೃತರನ್ನು ಚೈತ್ರಮ್ ಕೈವರ್ತ್ಯ (47), ಆತನ ಸಹೋದರಿಯರಾದ ಜಮುನಾ (28) ಮತ್ತು ಯಶೋಧಾ (30) ಹಾಗೂ ಜಮುನಾ ಪುತ್ರ ಯಶ್ ಎಂದು ಗುರುತಿಸಲಾಗಿದೆ. ಈ ಎಲ್ಲರನ್ನೂ ಹರಿತವಾದ ಆಯುಧಗಳು ಹಾಗೂ ಸುತ್ತಿಯಿಂದ ಹಲ್ಲೆ ನಡೆಸಿ ಹತ್ಯೆಗೈಯ್ಯಲಾಗಿದೆ. ಚೈತ್ರಮ್ ಕೈವರ್ತ್ಯ

ವಾಮಾಚರ ಶಂಕೆಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 13. ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಯುವಕನನ್ನು, ಸಂಶಯದ ಮೇರೆಗೆ ಪೊಲೀಸರು ವಿಚಾರಿಸಿದಾಗ ಆತ ದರೋಡೆಕೋರ ಎನ್ನುವುದು ಹೊರ ಬಿದ್ದಿದೆ. ಮಂಜೇಶ್ವರ ಪೊಲೀಸರು ರಾತ್ರಿ ವೇಳೆ ಗಸ್ತು ನಿರತರಾಗಿದ್ದ ವೇಳೆ ಅನುಮಾನಾಸ್ಪದವಾಗಿ ನಡೆದಾಡುತ್ತಿದ್ದ ಯುವಕನನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಠಾಣೆಗೆ ಕರೆತಂದಿದ್ದು, ಬಳಿಕ ತನಿಖೆ ನಡೆಸಿದಾಗ ಒರ್ವ ದರೋಡೆಕೋರನೆಂದು ತಿಳಿದು ಬಂದಿದೆ. ಈತನನ್ನು ಕರ್ನಾಟಕದ ಉಪ್ಪಿನಂಗಡಿ ನಿವಾಸಿ ಗೋಲಿ ಹನೀಫ (34) ಯಾನೆ ಮೊಹಮ್ಮದ್ ಹನೀಫ ಎಂದು ಗುರುತಿಸಲಾಗಿದೆ. ವಿಚಾರಣೆ ನಡೆಸಿದಾಗ

ದಾರಿಯಲ್ಲಿ ಸಿಕ್ಕ ಯುವಕನ ವಶಕ್ಕೆ ಪಡೆದ ಪೊಲೀಸರು – ತನಿಖೆಯ ವೇಳೆ ಬಯಲಾಯಿತು ಆತನ ಕರಾಮತ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Crime

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 13. ಕೆಎಸ್ಸಾರ್ಟಿಸಿ ನೌಕರನೋರ್ವ ಕೆಎಸ್ಸಾರ್ಟಿಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕುವಿನಿಂದ ಇರಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಮೇಲೆ ಚಾಕುವಿನಿಂದ ಇರಿದಿದ್ದರಿಂದ ಅವರ ಕೈ ಬೆರಳುಗಳಿಗೆ ಗಾಯಗಳಾಗಿದ್ದು ಸರ್ಕಾರಿ ಮಲ್ಲೆಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೂನಿಯರ್ ಅಸಿಸ್ಟೆಂಟ್ ರಿತೇಶ್ ಚಾಕುವಿನಿಂದ ಚುಚ್ಚಿದ್ದು, ಆತನನ್ನು ಬಂಧಿಸಲಾಗಿದೆ. ವರ್ಗಾವಣೆ ಸಂಬಂಧ ತಮ್ಮ ಕುಟುಂಬಸ್ಥರನ್ನು ಕರೆಸಿ ಬುದ್ದಿ ಹೇಳಿದ್ದಕ್ಕೆ ಕುಪಿತನಾದ ರಿತೇಶ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

KSRTC ವಿಭಾಗೀಯ ನಿಯಂತ್ರಣಾಧಿಕಾರಿಗೆ ಚಾಕು ಇರಿತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13.  ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎನ್‌ಐಎ ತಂಡ ಇಂದು ಪಂಜಾಬ್‌ನಲ್ಲಿ ಶೋಧ ಕಾರ್ಯ ನಡೆಸಿದೆ. ದಾಳಿ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲು ಮಾಡಿಕೊಂಡಿತ್ತು. ತನಿಖೆಯ ಅಂಗವಾಗಿ ಇಂದು ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ

ಭಾರತದ ರಾಯಭಾರ ಕಚೇರಿ ಮೇಲೆ ದಾಳಿ- ಎನ್ ಐಎ ಶೋಧ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಅಕ್ರಮವಾಗಿ ಗಾಂಜಾ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಒರಿಸ್ಸಾದ ಬುಲುಬಿರೊ(24) ಹಾಗೂ ಪಶ್ಚಿಮ ಬಂಗಾಳದ ದಿಲ್ ದಾರ್ ಆಲಿ (28) ಎಂಬವರನ್ನು ವಶಕ್ಕೆ ಪಡೆದುಕೊಂಡು 

ಮಾದಕ ವಸ್ತು ಗಾಂಜಾ ಮಾರಾಟ: ಇಬ್ಬರು ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ. 13.  ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿ ಬೆಂಕಿ ಉಗುಳುತ್ತಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆಯ ಸತೀಶ(39) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು ಸೆ.9ರಂದು ರಾತ್ರಿ ತೊಟ್ಟಂನ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಬಾಯಿಗೆ ಸೀಮೆಎಣ್ಣೆ ಹಾಕಿಕೊಂಡು ಬೆಂಕಿ ಉಗುಳುತ್ತಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಸೀಮೆಎಣ್ಣೆ ಕುಡಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡರೆನ್ನಲಾಗಿದೆ. ಸೆ.10ರಂದು ಉಡುಪಿ ಜಿಲ್ಲಾ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೀಮೆಎಣ್ಣೆ ಕುಡಿದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಯುವಕ ನಾಪತ್ತೆ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 13.  ಇಲ್ಲಿನ ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. 5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.    

ಉಡುಪಿ: ಯುವಕ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top