crime

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 11.  ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಮೃತಪಟ್ಟ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ […]

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 11.  ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ₹ 2.5 ಕೋಟಿಗೂ ಹೆಚ್ಚು ಮೌಲ್ಯದ ಪೇಂಟಿಂಗ್ ಅನ್ನು ದಕ್ಷಿಣ ಮುಂಬೈನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 1992 ರಲ್ಲಿ ಖ್ಯಾತ ವರ್ಣಚಿತ್ರಕಾರ ಮಾಡಿದ ಪ್ರಕೃತಿ ಎಂಬ ಪೇಂಟಿಂಗ್ ಅನ್ನು ಅಸ್ತಗುರು ಆಕ್ಷನ್ ಹೌಸ್ ಪ್ರೈವೇಟ್ ಲಿಮಿಟೆಡ್‌ನ ಗೋದಾಮಿನಿಂದ ಕಳವು ಮಾಡಲಾಗಿದೆ ಎಂದು ಎಂಆರ್‌ಎ ಮಾರ್ಗ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೂರಿನ ಪ್ರಕಾರ, ಈ ವರ್ಷ

ಖ್ಯಾತ ಕಲಾವಿದ ಸೈಯದ್ ಹೈದರ್ ರಾಝಾ ಅವರ ಚಿತ್ರಕಲೆ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 11.  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.          ಮೃತಪಟ್ಟ ವಿದ್ಯಾರ್ಥಿಯನ್ನು ಹಂದ್ರಾಳ ಗ್ರಾಮದ ಫಕೀರ ಗೌಡ ಎಂದು ಗುರುತಿಸಲಾಗಿದೆ. ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ಮಾರ್ಬಲ್ ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುಹಮ್ಮದ್ ಶರೀಫ್ ಎಂಬಾತ ತಾನು ರಾಜಸ್ತಾನದಿಂದ ಮಾರ್ಬಲ್ ತಂದು ಕಾಸರಗೋಡಿನಲ್ಲಿ ವ್ಯಾಪಾರ ಮಾಡುತ್ತಿದ್ದೇನೆ. ಅದರಲ್ಲಿ ಹೂಡಿಕೆ ಮಾಡಿದರೆ ಲಾಭ ಕೊಡುತ್ತೇನೆ ಎಂದು ನಂಬಿಸಿದ್ದ. ಅಲ್ಲದೆ ತನ್ನಿಂದ ಹಂತ ಹಂತವಾಗಿ 2.50 ಕೋ.ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದ. ಹಣ ಪಡೆದುಕೊಂಡ ಬಗ್ಗೆ ದಾಖಲಾತಿ ಕೇಳಿದಾಗ ತಾವಿಬ್ಬರು

ವ್ಯವಹಾರದಲ್ಲಿ ಲಾಭದ ಆಸೆ ಹುಟ್ಟಿಸಿ 2.50 ಕೋ.ರೂ. ವಂಚನೆ: ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                          

(ನ್ಯೂಸ್ ಕಡಬ) newskadaba.com ತಮಿಳುನಾಡು, ಸೆ. 10.  ತಿರುನಲ್ವೇಲಿ ಜಿಲ್ಲೆಯ ರಾಧಾಪುರಂ ಪ್ರದೇಶದಲ್ಲಿ ವಾಷಿಂಗ್ ಮೆಷಿನ್ ನಲ್ಲಿ ಮೂರು ವರ್ಷದ ಬಾಲಕನ ಮೃತದೇಹ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೆರೆಮನೆಯ ಮಹಿಳೆಯನ್ನು ಬಂಧಿಸಲಾಗಿದೆ. ಬಾಲಕನನ್ನು ಕೊಲೆ ಮಾಡಿ ಮೃತದೇಹವನ್ನು ವಾಷಿಂಗ್ ಮೆಷಿನ್ ನಲ್ಲಿ ಮರೆಮಾಡಿದ ಆರೋಪದ ಮೇಲೆ 40 ವರ್ಷದ ಮಹಿಳೆಯೋರ್ವರನ್ನು ಪೊಲೀಸರು ಬಂಧಿಸಿದ್ದಾರೆ. ಅಂಗನವಾಡಿಗೆ ತೆರಳುವ ಮುನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕ ಸೋಮವಾರ ನಾಪತ್ತೆಯಾಗಿದ್ದ. ನಮ್ಮ ನೆರೆಯ ಮನೆಯವರ ಜೊತೆ ತಕರಾರಿದ್ದು ಅವರ ಮನೆಯಲ್ಲಿ ಹುಡುಕಾಟ

ವಾಷಿಂಗ್ ಮೆಷಿನ್ ನಲ್ಲಿ 3 ವರ್ಷದ ಬಾಲಕನ ಮೃತದೇಹ ಪತ್ತೆ ಮಹಿಳೆ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..! 

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 10.  ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಕೇಸ್‌ಗೆ ಸಂಬಂಧಪಟ್ಟಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್‌ ರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 26 ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿಕೊಂಡಿದ್ದರು. ಹಲ್ಲೆ ನಡೆಸಲು ನಾಗೇಂದ್ರಗೆ

ಜಿಮ್ ಟ್ರೈನರ್ ಹಲ್ಲೆ ಕೇಸ್‌..!  ನಟ ಧ್ರುವ ಸರ್ಜಾ ಮ್ಯಾನೇಜರ್ ಅರೆಸ್ಟ್..!  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೈರೋ, ಸೆ. 10. ದಕ್ಷಿಣ ಗಾಝಾದಲ್ಲಿ ನಿರಾಶ್ರಿತ ಫೆಲೆಸ್ತೀನಿಯರಿದ್ದ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗೆ 40 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹಮಾಸ್ ಕಮಾಂಡ್ ಸೆಂಟರ್ ಅನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾಗಿ ಇಸ್ರೇಲ್ ಸೇನೆ ಹೇಳಿಕೊಂಡಿದೆ. ಆದರೆ ಅಮಾಯಕ ನಾಗರಿಕರನ್ನು ಗುರಿ ಮಾಡಲಾಗಿದೆ ಎಂದು ಹಮಾಸ್ ಹೇಳಿಕೊಂಡಿದೆ. ಯುದ್ಧ ಪೀಡಿತ ಗಾಝಾದ ಅಲ್-ಮವಾಸಿ ಪ್ರದೇಶದಲ್ಲಿನ ಖಾನ್ ಯೂನಿಸ್ ನಗರದಲ್ಲಿ ಕಿಕ್ಕಿರಿದ ಜನಸಂಖ್ಯೆಯಿದ್ದ ನಿರಾಶ್ರಿತರ

ನಿರಾಶ್ರಿತ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ..!  40 ಮಂದಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..!

(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಸೆ. 10. ಕುಡಿದ ಮತ್ತಿನಲ್ಲಿ ಮಗನೋರ್ವ ತಾಯಿಯನ್ನೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮುದ್ದನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ರತ್ನಮ್ಮ ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ರತ್ನಮ ಮಗ ಗಂಗರಾಜು ವಾಸವಾಗಿದ್ದು, ಕುಡಿತದ ದಾಸನಾಗಿದ್ದ ಪುತ್ರ ಆಗಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಎಂದಿನಂತೆ ನಿನ್ನೆಯೂ ಕಂಠಪೂರ್ತಿ ಕುಡಿದುಬಂದ ಮಗ ತಾಯಿಯೊಂದಿಗೆ ಜಗಳವಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮಗ ಚಾಕುವಿನಿಂದ ತಾಯಿಯನ್ನು ಚುಚ್ಚಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ

ಕುಡಿತದ ಚಟ- ತಾಯಿಯನ್ನೇ ಚುಚ್ಚಿಕೊಂದ ಪಾಪಿ ಮಗ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top