crime

Theft, crime, Robbery

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ನಗರದ ಸೂಟರ್‌ ಪೇಟೆಯ ಮನೆಯೊಂದರಿಂದ ಚಿನ್ನಾಭರಣ ಕಳವು ಮಾಡಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 23ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಮನೆಯ ಎದುರಿನ ಬಾಗಿಲನ್ನು ತೆರೆದು ಲಾಕರ್‌ನಲ್ಲಿದ್ದ 25 ಗ್ರಾಂ ಚಿನ್ನಾಭರಣ, 47,000 ರೂ. ನಗದು ಸಹಿತ ಅಂದಾಜು 1.47 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಆ. 28. ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ಜೆ.ಸುರಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲಿಕಾರ್ಜುನ (58) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನರವರು ಆ. 13 ರಂದು ಬೈಕಿನಲ್ಲಿ ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಅವರ ಮೇಲೆ ದಾಳಿ ಮಾಡಿ ಸೊಂಡಿಲಿನಿಂದ ಎಸೆದು, ತುಳಿದು ಗಾಯಗೊಳಿಸಿತ್ತು. ಇದರಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..! Read More »

ಕರ್ನಾಟಕ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..!

(ನ್ಯೂಸ್ ಕಡಬ) newskadaba.com ಮೈಸೂರು, ಆ. 28. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.   ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ, ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ

ನಕಲಿ ಸಹಿ ಆರೋಪ..! ಸಿಎಂ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರದಂದು  ಮಾಡಲಾಗಿದ್ದು, ಮಹಿಳೆ ಎಂಬುದನ್ನು ಪರಿಗಣಿಸಿ ಪವಿತ್ರಾ ಗೌಡ ಅವರಿಗೆ ಜಾಮೀನು ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದೆ. ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ

ಮಹಿಳೆ ಎಂಬುದು ಪರಿಗಣಿಸಿ ಜಾಮೀನು ನೀಡಿ – ಪವಿತ್ರಾ ಗೌಡ ಪರ ವಕೀಲರ ಮನವಿ Read More »

ಕರ್ನಾಟಕ

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ ನಲ್ಲಿ ನಡೆದಿದೆ. ಮಹಿಳೆಯೋರ್ವರು ಕ್ಯಾಂಪಸ್‌ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿದ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬೀದಿನಾಯಿಗಳ ದಾಳಿಗೆ ಮಹಿಳೆ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ.  ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಟಾನಗರ, ಆ. 28. ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರನ್ನು ಹವಾಲ್ದಾರ್ ನಖತ್ ಸಿಂಗ್,

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..!

(ನ್ಯೂಸ್ ಕಡಬ) newskadaba.c0m ಲಖನೌ, ಆ. 27.  ಉತ್ತರ ಪ್ರದೇಶದ ಇಂಡೋ-ನೇಪಾಳ ಗಡಿ ಜಿಲ್ಲೆ ಬಹ್ರೈಚ್‌ ನ ಮಹಾಸಿ ಬ್ಲಾಕ್‌ನ 30 ಗ್ರಾಮಗಳಲ್ಲಿ ತೋಳಗಳ ಗುಂಪು ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು 26 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆಯು ತೋಳಗಳನ್ನು ಸೆರೆ ಹಿಡಿಯಲು ಒಂಬತ್ತು ಜನರ ತಂಡವನ್ನು ನಿಯೋಜಿಸಿದೆ. ತೋಳಗಳ ಗ್ರಾಮಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದು, ಕಳೆದ ಒಂದು ತಿಂಗಳಿಂದ ಈ ಪ್ರದೇಶದ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿವೆ.

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಗನ್ ಒರೆಸುವ ವೇಳೆ ಮಿಸ್ ಫೈರ್ – ವ್ಯಕ್ತಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 27. ಮನೆಯಲ್ಲಿದ್ದ ಗನ್ ಒರೆಸುತ್ತಿದ್ದ ವೇಳೆ ಮಿಸ್ ಫೈರ್ ಆಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕಳುವಾಸೆ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಳವಾಸೆ ಗ್ರಾಮದ ಅರುಣ್ ಎಂದು ಗುರುತಿಸಲಾಗಿದೆ. ಅರುಣ್ ಅವರು ತನ್ನ ಮನೆಯ ಶೆಡ್ ನಲ್ಲಿದ್ದ ಗನ್ ನ್ನು ಒರೆಸುವ ವೇಳೆ ಏಕಾಏಕಿ ಗುಂಡು ಹಾರಿ ಬಲಗಣ್ಣನ್ನು ಹೊಕ್ಕಿದ್ದು, ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಮಲ್ಲಂದೂರು ಠಾಣೆಯಲ್ಲಿ ಪ್ರಕರಣ

ಗನ್ ಒರೆಸುವ ವೇಳೆ ಮಿಸ್ ಫೈರ್ – ವ್ಯಕ್ತಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ
Scroll to Top