crime

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಮಂಡ್ಯ, ಆ. 21.  ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿದ ಗಂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಸ್ವಾತಿ (21) ಎಂದು ಗುರುತಿಸಲಾಗಿದೆ. ಮೋಹನ್ (26) ಎಂಬ ವ್ಯಕ್ತಿಯು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾತ್ರಿ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ನಂತರ ಗಂಡ ಮೋಹನ್ ಹಾಗೂ ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಇದಾದ ಕೆಲವೇ […]

ಪತ್ನಿಯ ಅನುಮಾನಾಸ್ಪದ ಸಾವಿಗೆ ಹೆದರಿ ಗಂಡ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.   ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 21. ನರ್ಸರಿಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಆಂಗ್ಲ ಮಾಧ್ಯಮ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ 23 ವಯಸ್ಸಿನ ಸ್ವಚ್ಛತಾ ಸಿಬ್ಬಂದಿ 4 ವರ್ಷದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರನ್ನು ಶೌಚಾಲಯದ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆ ಖಂಡಿಸಿ ಸಾರ್ವಜನಿಕರು ಹಾಗೂ ಪೋಷಕರು ಮುಂಬೈನ ಬಾದಲ್‌ಪುರ ಎಂಬಲ್ಲಿ ರೈಲು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು. ಮಕ್ಕಳ

4 ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ..! ಪೊಲೀಸರ ಮೇಲೆ ಕಲ್ಲು ತೂರಾಟ..! Read More »

ಕ್ರೈಮ್ ನ್ಯೂಸ್

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…!

(ನ್ಯೂಸ್ ಕಡಬ) newskadaba.com ಹಾಸನ, ಆ. 20. ರಾಜ್ಯದಲ್ಲಿ ಎಂತೆಂತಾ ವಿಕೃತಕಾಮಿಗಳು ಇರುತ್ತಾರೆ ಅಂದರೆ ಮಹಿಳೆಯರ ಒಳ ಒಡುಪು ಕದಿಯೋ ವಿಕೃತಿ ಕಾಮಿಯನ್ನು ನೀವು ನೋಡಿರ್ತೀರಾ. ಆದರೆ ಈ ವಿಕೃತಕಾಮಿಯೋರ್ವ ಪ್ರತ್ಯಕ್ಷನಾಗಿದ್ದು, ಲೇಡೀಸ್ ಚಪ್ಪಲಿಗಳೇ ಈತನ ಟಾರ್ಗೆಟ್ ಮಾಡುತ್ತಿರುವ ಘಟನೆ ಹಾಸನದ ಚನ್ನಪಟ್ಟಣ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಮನೆ, ಅಪಾರ್ಟ್ ಮೆಂಟ್ ಗೆ ನುಗ್ಗುವ ಈ ಕಾಮುಕ ಹೊರಗಡೆ ಬಿಟ್ಟ ಮಹಿಳೆಯರ ಚಪ್ಪಲಿಗಳನ್ನು ಎತ್ತಿಕೊಂಡು ಹೋಗಿ ಮುತ್ತು ಕೊಡುತ್ತಾನೆ ಎನ್ನಲಾಗಿದೆ. ಮನೆಯೊಂದರ ಸಿಸಿಟಿವಿಯಲ್ಲಿ ವಿಕೃತ ಕಾಮಿಯ

ಹಾಸನದಲ್ಲೊಬ್ಬ ವಿಕೃತ ಮನುಷ್ಯ – ಲೇಡಿಸ್ ಚಪ್ಪಲಿಗಳನ್ನೇ ಟಾರ್ಗೆಟ್ ಮಾಡುವ ಭೂಪ…! Read More »

ಕರ್ನಾಟಕ

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪ್ರಥಮ ಪಿಯುಸಿಯ ಪ್ರಥಮೇಶ್ ಎಂದು ಗುರುತಿಸಲಾಗಿದೆ. ಪ್ರಥಮೇಶ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಬೆಳಗ್ಗೆ ಆತನ ಮೃತದೇಹ ಅವರ ಸಮೀಪದ ಬಾವಿಯಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ, ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯಿಂದ‌ ಚೂರಿಯಿರಿತ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 20.  ಕೆರೆಗೆ ಹಾರಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಮಣಿನಾಲ್ಕೂರು ಗ್ರಾಮದ ಮಾವಿನಕಟ್ಟೆಯ ಕೋಕಲ ಎಂಬಲ್ಲಿ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಕೋಕಲದ ನಿವಾಸಿ ಸಾಯಿ ಶಾಂತಿ ಅವರ ಪುತ್ರ ಸುಮಂತ್ (20) ಎಂದು ಗುರುತಿಸಲಾಗಿದೆ. ಮುಂಜಾನೆ 5 ಗಂಟೆಯ ಹೊತ್ತಿಗೆ ಎದ್ದು ತೋಟಕ್ಕೆ ತೆರಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು  ಎನ್ನಲಾಗಿದೆ.  

ಬೆಳ್ತಂಗಡಿ: ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top