crime

Crime

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಆ. 19. ಕ್ಷುಲ್ಲಕ ವಿಚಾರಕ್ಕೆ ಚಾಕು ಇರಿದ ಪರಿಣಾಮ ಅಪ್ರಾಪ್ತ ಬಾಲಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.   ನಗರದ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೇಲೆ, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಪರಿಣಾಮ ವಿದ್ಯಾರ್ಥಿಯ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ 10ನೇ […]

9ನೇ ತರಗತಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ 10ನೇ ತರಗತಿ ವಿದ್ಯಾರ್ಥಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಬೈಕ್‌ ಮತ್ತು ಪಿಕಪ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ.   ಮೃತಪಟ್ಟವರನ್ನು ವೃತ್ತಿಯಲ್ಲಿ ಕ್ಷೌರಿಕರಾಗಿದ್ದ ಮಾಟ್ನೂರು ಗ್ರಾಮದ ಕಾವು ಬಜಕುಡೇಲು ಸುರೇಶ್‌ ಭಂಡಾರಿ(45) ಎಂದು ಗುರುತಿಸಲಾಗಿದೆ. ಸುರೇಶ್ ರವರು ಬೈಕಿನಲ್ಲಿ ಅಮ್ಚಿನಡ್ಕದ ಸೆಲೂನ್‌ ಅಂಗಡಿಗೆ ತೆರಳುತ್ತಿದ್ದ ವೇಳೆ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್‌ ನಡುವೆ ಅಪಾಘಾತ ನಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!     

(ನ್ಯೂಸ್ ಕಡಬ) newskadaba.c0m ಭುವನೇಶ್ವರ, ಆ. 19.  ಒಡಿಶಾದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ವರದಿಯಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಶನಿವಾರ 9 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಸಿಡಿಲು ಬಡಿದು ಹಲವರು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4

ರಾಜ್ಯದಲ್ಲಿ ಸಿಡಿಲಿನ ಅಬ್ಬರಕ್ಕೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಕೆ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲಾರ, ಆ. 19. ಶಿಕ್ಷಕಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಮುಳಬಾಗಿಲು ಮೂಲದ ಆರು ಮಂದಿ ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಆಗಸ್ಟ್ 14 ರಂದು ಸಂಜೆ ಶಿಕ್ಷಕಿ ದಿವ್ಯಶ್ರೀ ಎಂಬವರನ್ನು ಮುಳಬಾಗಿಲು ನಗರದ ಸುಂಕೂ ಲೇಔಟ್ ನಲ್ಲಿ ಕೊಲೆ ಮಾಡಲಾಗಿತ್ತು. ಪ್ರಕರಣದ ಜಾಡು ಹಿಡಿದ ನಗರ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿ ಆರೋಪಿಗಳಿಗೆ ಬಲೆ ಬೀಸಿದ್ದರು. ಅದರಂತೆ ಇಂದು ತಿರುಪತಿಯಲ್ಲಿ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದ

ಶಿಕ್ಷಕಿಯ ಕೊಲೆ ಪ್ರಕರಣ- ಆರು ಬಾಲಕರು ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 19.  ಗಾಂಜಾ ಅಮಲಿನಲ್ಲಿದ್ದ ಸುಮಾರು ಹತ್ತು ಮಂದಿ ದುಷ್ಕರ್ಮಿಗಳ ತಂಡವೊಂದು ನಡೆಸಿದ ತಲವಾರು ದಾಳಿಯಲ್ಲಿ ಆರು ಮಂದಿ ಗಾಯಗೊಂಡ ಘಟನೆ ಕುಂದಾಪುರದ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎನ್ನಲಾಗಿದೆ. ಚಂದ್ರಶೇಖರ್ (27) ಹಾಗೂ ಅಶೋಕ್ ದೇವಾಡಿಗ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳನ್ನು ವಕ್ವಾಡಿಯ ಆದರ್ಶ, ಎಡ್ವರ್ಡ್, ಗಣೇಶ್ ಕುಂಭಾಶಿ, ಗೋವರ್ಧನ್ ಹಾಗೂ ಇತರ ಎಂಟು ಜನರು ಎಂದು ಗುರುತಿಸಲಾಗಿದೆ. ಈ

ಗಾಂಜಾ ಸೇವನೆಯಿಂದ ದುಷ್ಕರ್ಮಿಗಳ ದಾಳಿ         ಇಬ್ಬರ ಸ್ಥಿತಿ ಗಂಭೀರ..! ಇಬ್ಬರು ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                     

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 19.  ಲಿಫ್ಟ್ ಕೇಳಿದ ಯುವತಿ ಮೇಲೆ ಅತ್ಯಾಚಾರ ನಡೆದ ಘಟನೆ ಕಂಡುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ಸಿಸಿಟಿವಿಯ ದೃಶ್ಯಾವಳಿಗಳನ್ನು ಆಧರಿಸಿ ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆದಿದ್ದು, ಆರೋಪಿಯ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಆರೋಪಿ ಕೋರಿಯೋಗ್ರಾಫರ್ ಆಗಿದ್ದು, ಯುವತಿ ತೆರಳಿದ್ದ ಕೋರಮಂಗಲದ ಪಬ್‌ಗೆ ಬಂದಿದ್ದ. ಯುವತಿ ಪಬ್ ನಲ್ಲಿ ಪಾರ್ಟಿ ಮುಗಿಸಿ ಹೊರಡುವಾಗ ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಯುವತಿ ಮೇಲೆ ಅತ್ಯಾಚಾರ..!     ಆರೋಪಿ ಅರೆಸ್ಟ್..!                      Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಾಸ್ಕೋ, ಆ. 19. ರಶ್ಯಾದ ಮಿಲಿಟರಿ ಶಿಬಿರವೊಂದರ ಮೇಲೆ ನಡೆದ ಶೆಲ್ ದಾಳಿಯಲ್ಲಿ ಕೇರಳ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ವರದಿಯಾಗಿದೆ.   ಮೃತ ವ್ಯಕ್ತಿಯನ್ನು ತ್ರಿಶೂರು ಜಿಲ್ಲೆಯ ತ್ರಿಕ್ಕುರ್‌ ಪಂಚಾಯತ್‌ನ ನಾಯರಗಡಿ ನಿವಾಸಿಯಾಗಿದ್ದ ಸಂದೀಪ್‌ (36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್‌ ಆಗಿದ್ದ ಸಂದೀಪ್ ಅವರು, ಕೆಲಸ ಮಾಡುತ್ತಿದ್ದ ರಶ್ಯಾದ ರೆಸ್ಟೋರೆಂಟ್‌ ಮೇಲೆ ನಡೆದ ಶೆಲ್ ದಾಳಿಯಿಂದಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಶ್ಯಾ ಮಿಲಿಟರಿ ಕ್ಯಾಂಟಿನ್ ಮೇಲೆ ಶೆಲ್ ದಾಳಿ – ಕೇರಳದ ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ವಿಟ್ಲ, ಆ. 19. ಇಲ್ಲಿನ ಉರಿಮಜಲು ಎಂಬಲ್ಲಿ ಭಾನುವಾರದಂದು ಬೆಳಗ್ಗೆ ನಡೆದಿದ್ದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಆಟೋ ಚಾಲಕ ಶರೀಫ್ (38) ಎಂಬವರು ಚೂರಿ ಇರಿತದಿಂದ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರೀಫ್ ರವರು ಉರಿಮಜಲು ಎಂಬಲ್ಲಿ ಬೇರೆಯವರ ಜತೆ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿ ಹಾಫೀಲ್ ಮಾತಿಗೆ ಇಳಿದಿದ್ದು

ಆಟೋ ಚಾಲಕನಿಗೆ ಚೂರಿಯಿರಿತ- ಓರ್ವ ಅರೆಸ್ಟ್..!! Read More »

ಕರಾವಳಿ

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಚೆನ್ನೈ, ಆ. 19.  ಭಾರತೀಯ ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಕೇಶ್‌ ಪಾಲ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾಕೇಶ್‌ ಪಾಲ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚೆನ್ನೈಗೆ ಬಂದಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೋಸ್ಟ್ ಗಾರ್ಡ್ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 17. ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೋರ್ವನ ಕಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡವರನ್ನು ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬವರ ಮಗ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್(8) ಎಂದು ಗುರುತಿಸಲಾಗಿದೆ. ಬಾಲಕ ಶನಿವಾರದಂದು ಬೆಳಗಿನ ಶಾಲೆಗೆ ತೆರಳಲೆಂದು ವಾಹನಕ್ಕಾಗಿ ಕಾಯುತ್ತಾ ನಿಂತಿದ್ದಾಗ  ಶಾಲಾ ವಾಹನದ ಚಾಲಕ‌ ವಾಹನವನ್ನು ರಿವರ್ಸ್ ತೆಗೆಯುತಿದ್ದ. ಈ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.

ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿ ಕಾಲು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top