crime

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                             

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 17.  ಮಳೆಗೆ ವಿಜಯನಗರದ ಎಂಸಿ ಲೇಔಟ್ ಬಳಿ ಮರವೊಂದು ಆಟೋ ರಿಕ್ಷಾದ ಮೇಲೆ ಬಿದ್ದು, ಚಾಲಕ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಶಿವರುದ್ರಯ್ಯ (49) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಅರಣ ಉಪ ಸಂರಕ್ಷಣಾಧಿಕಾರಿ ಬಿಎಲ್‌ಜಿ ಸ್ವಾಮಿ, ಮರ ಬಿದ್ದ ಪರಿಣಾಮ ಶಿವರುದ್ರಯ್ಯ ಅವರ ತಲೆ, ಕಾಲು ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಬಿಬಿಎಂಪಿ ಅಧಿಕಾರಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ […]

ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ ಚಾಲಕ ಮೃತ್ಯು..!                              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                            

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17.  ಸ್ಕೂಟಿಗೆ ಕಾರೊಂದು ಢಿಕ್ಕಿ ಹೊಡೆದ ಘಟನೆ ನಗರದ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಉಳ್ಳಾಲ ಎಎಸ್‌ಐ ಪತ್ನಿ, ಶಿಕ್ಷಕಿ ಶಾಹಿದಾ (47) ಎಂದು ಗುರುತಿಸಲಾಗಿದೆ. ಶಾಹಿದಾ ತನ್ನ ಸ್ಕೂಟಿಯಲ್ಲಿ ಶಾಲೆಯ ಕಡೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಗೆ ಕಾರೊಂದು ಢಿಕ್ಕಿ ಹೊಡೆದಿದ್ದು, ತಕ್ಷಣ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸ್ಕೂಟರ್-ಕಾರ್ ಅಪಘಾತ..!              ಶಿಕ್ಷಕಿ ಮೃತ್ಯು..!                             Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 16. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಿಂದ ವರದಿಯಾಗಿದೆ.   ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 16.  ಲಾಲ್‌ಬಾಗ್ ನ ಸಿದ್ದಯ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಊರ್ವಶಿ ಚಿತ್ರಮಂದಿರದ ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ ಹಿಡಿದಿದ್ದ ಹದಿನಾಲ್ಕು ವರ್ಷದ ಇಬ್ಬರು ಅಪ್ರಾಪ್ತ ಬಾಲಕರನ್ನು ಬಂಧಿಸಿದ್ದಾರೆ. ವಿಜಯ್ ಅಭಿನಯದ ಭೀಮ ಚಿತ್ರ ಪ್ರದರ್ಶನದ ವೇಳೆ ರಾತ್ರಿ 11.30ರ ಸುಮಾರಿಗೆ  ಘಟನೆ ನಡೆದಿದೆ. ಮಧ್ಯಂತರ ವಿರಾಮದ ವೇಳೆ ಶೌಚಗೃಹ ಬಳಸಲು ಬಂದ 23 ವರ್ಷದ ಯುವತಿ ವಾಶ್‌ರೂಮ್ ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವಿಡಿಯೋಗಳನ್ನು ರೆಕಾರ್ಡ್ ಮಾಡುವುದನ್ನು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ

ಶೌಚಗೃಹದಲ್ಲಿ ಯುವತಿಯ ವಿಡಿಯೋ ಸೆರೆ..!                  ಅಪ್ರಾಪ್ತ ಬಾಲಕರು ಆರೆಸ್ಟ್..!                            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16. ಕಳೆದ ಒಂದು ವರ್ಷದಲ್ಲಿ ನಡೆದ ಸೈಬರ್ ವಂಚನೆ ಪ್ರಕರಣಗಳ ಪೈಕಿ ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿಯೇ ವಂಚನೆಗೊಳಗಾದ ಸಂತ್ರಸ್ತರು ಸುಮಾರು 11 ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದಾರೆ. ಇಂತಹ ವಂಚನೆಗಳ ಬಗ್ಗೆ ಜನ ಜಾಗೃತರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು. ಅವರು ಗುರುವಾರದಂದು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಆಯೋಜಿಸಲಾಗಿದ್ದ ಸೈಬರ್ ಅಪರಾಧವನ್ನು ತಡೆಯುವ ಕುರಿತ ಜಾಗೃತಿ ಜಾಥಾ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಸೈಬರ್ ಕ್ರೈಮ್- ಮಂಗಳೂರು: ಒಂದೇ ವರ್ಷದಲ್ಲಿ 11 ಕೋಟಿ ರೂ. ವಂಚನೆ Read More »

ಕರಾವಳಿ, ಕರ್ನಾಟಕ

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.c0m ಹಾಸನ, ಆ. 16.  ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತಪಟ್ಟವರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.  

ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..! Read More »

ಕ್ರೈಮ್ ನ್ಯೂಸ್

ಆರ್.ಜಿ.ಕರ್ ಆಸ್ಪತ್ರೆ ದಾಳಿ ಪ್ರಕರಣ – 19 ಮಂದಿ ಅರೆಸ್ಟ್…!

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಆ. 16. ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ದಾಳಿ, ಹಿಂಸಾಚಾರ ಮತ್ತು ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳಿ ತಿಳಿಸಿವೆ. ಬಂಧಿತರನ್ನು ನಗರದ ನ್ಯಾಯಾಲಯವು ಆಗಸ್ಟ್ 22ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಬುಧವಾರದಂದು ತಡರಾತ್ರಿ ನುಗ್ಗಿದ ದುಷ್ಕರ್ಮಿಗಳು, ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷಾ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ,

ಆರ್.ಜಿ.ಕರ್ ಆಸ್ಪತ್ರೆ ದಾಳಿ ಪ್ರಕರಣ – 19 ಮಂದಿ ಅರೆಸ್ಟ್…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,  ಆ. 16. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಮದು ಗುರುತಿಸಲಾಗಿದೆ.  ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.  ಇಂದು (ಶುಕ್ರವಾರ) ಬೆಳಗ್ಗೆ ಶಾಲೆಗೆ ತೆರಳಿದ್ದಅವರಿಗೆ ಅನಾರೋಗ್ಯ ಕಾಡಿದ್ದ ಹಿನ್ನೆಲೆ, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ  ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                       

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 16.  ಭಾರತದ ಅಗ್ನಿ ಕ್ಷಿಪಣಿಯ ಪಿತಾಮಹ ಖ್ಯಾತ ಡಿಆರ್‌ಡಿಒ ಕ್ಷಿಪಣಿ ವಿಜ್ಞಾನಿ ಪದ್ಮಭೂಷಣ ಪುರಸ್ಕೃತ ರಾಮ್ ನಾರಾಯಣ್ ಅಗರ್ವಾಲ್ (84) ಮೃತಪಟ್ಟಿದ್ದಾರೆ. ದೇಶವನ್ನು ಪ್ರಮುಖ ಕ್ಷಿಪಣಿ ಶಕ್ತಿಯನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಭಾರತದ ದೀರ್ಘ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದರು. ಅಗರ್ವಾಲ್ ಕ್ಷಿಪಣಿಗಳ ಮೊದಲ ಕಾರ್ಯಕ್ರಮದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿದ್ದರು.  

‘ಅಗ್ನಿ ಕ್ಷಿಪಣಿ’ ಪಿತಾಮಹ ರಾಮ್ ನಾರಾಯಣ್ ಅಗರ್ವಾಲ್ ಮೃತ್ಯು                                                                        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top