crime

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ […]

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.   ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ವಾಹನ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಮೃತರನ್ನ ಪ್ರಶಾಂತ್‌ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯಾಗಿರುವ ಪ್ರಶಾಂತ್‌, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಮೆಜೆಸ್ಟಿಕ್‌ನಿಂದ ಕೆ.ಆರ್‌ ಸರ್ಕಲ್‌ ಮಾರ್ಗವಾಗಿ ಬೈಕ್‌ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್‌ ಮಾರ್ಗದಿಂದ ಕೆ.ಆರ್‌ ವೃತ್ತದ ಮಾರ್ಗವಾಗಿ

ಬೈಕ್ ಗೆ ಕಸದ ಲಾರಿ ಡಿಕ್ಕಿ ಸವಾರರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ    

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29.  ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಕೈ ಕತ್ತರಿಸಿದ ಆರೋಪದ ಮೇಲೆ ಕನಕಪುರದಲ್ಲಿ ಇಬ್ಬರು ರೌಡಿಶೀಟರ್‌ಗಳ ಕಾಲುಗಳಿಗೆ ಪೊಲೀಸರು ಗುಂಡು ಹಾರಿಸುವ ಮೂಲಕ ಅವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಲಿತ ಯುವಕ ಅನೀಶ್‌ಕುಮಾರ್‌ ಕುಟುಂಬದ ಮೇಲೆ ದಾಳಿ ನಡೆಸಿದ ಒಕ್ಕಲಿಗ ಸಮುದಾಯದ ಏಳು ಮಂದಿ ಶಸ್ತ್ರಧಾರಿಗಳ

ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.29. ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.

ಕೋಚಿಂಗ್ ಸೆಂಟರ್‌ ನಲ್ಲಿ ನಡೆದ ಅವಘಡ ಪ್ರಕರಣ ಮಾಲೀಕ, ನಿರ್ವಾಹಕನಿಗೆ 14 ದಿನ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು

(ನ್ಯೂಸ್ ಕಡಬ)newskadaba.com ಬೈಂದೂರು, ಜು.27. ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ       

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.27. ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಳಗ್ಗೆ ಸಂಭವಸಿದೆ ಎಂದು ವರದಿ ತಿಳಿಸಿದೆ. ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.  

ಆಕಸ್ಮಿಕ ಅಗ್ನಿ ಅವಘಡ      ಲಕ್ಷಾಂತರ ರೂ. ನಷ್ಟ        Read More »

ಕರ್ನಾಟಕ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಬೆಂಗಳೂರು,  ಜು.27. ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಪತಿ, ಪತ್ನಿ ಹಾಗೂ ಮೂವರು ಮಕ್ಕಳಿಗೆ ಬೆಂಕಿ ತಗುಲಿ ಗಂಭೀರ ಸುಟ್ಟ ಗಾಯಗಳಾಗಿವೆ. ಪತಿ ಮದನ್ ಚೌಹಾರ (32), ಹೆಂಡತಿ ಪ್ರೇಮ್ ಜಾಲ (28), ಮಕ್ಕಳಾದ ಹಿರದ್ (12), ಪ್ರಶಾಂತ್ (6) ಹಾಗೂ ಅನಿತಾ (8) ಗಂಭೀರ ಗಾಯಗೊಂಡವರು ಎಂದು ಗುರುತಿಸಲಾಗಿದೆ. ನೇಪಾಳ ಮೂಲದ ಈ ಕುಟುಂಬ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್ Read More »

ಕರಾವಳಿ
Scroll to Top