crime

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.!

(ನ್ಯೂಸ್ ಕಡಬ)newskadaba.com ಜಮ್ಮು, ಜು.22. ಸೇನಾ ಶಿಬಿರದ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಓರ್ವ ಯೋಧನಿಗೆ ತೀವ್ರ ಗಾಯವಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಉಗ್ರರು ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ದಾಳಿ ನಡೆಸಿದ ಬಳಿಕ ಭದ್ರತಾ ಸಿಬ್ಬಂದಿ ಕೂಡ ಪ್ರತಿ ದಾಳಿ ನಡೆಸಿದ್ದಾರೆ. ಸದ್ಯ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಯಾಗಿದೆ. ಘಟನೆಯ ನಂತರ ಭದ್ರತಾ ಸಿಬ್ಬಂದಿ ಭಯೋತ್ಪಾದಕರಿಗಾಗಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಮೂಲಗಳಿಂದ […]

ಸೇನಾ ಶಿಬಿರದ ಮೇಲೆ ಉಗ್ರರ ದಾಳಿ ಓರ್ವ ಯೋಧನಿಗೆ ಗಾಯ.! Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.20. ಮನೆಗಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ವೆಂಕಟೇಶ್ ಅಲಿಯಾಸ್ ವೆಂಕಿ(21), ಸಾಗರ್ (21), ರಂಜಿತ್(20) ಎಂದು ಗುರುತಿಸಲಾಗಿದೆ. ಉರ್ವ ಠಾಣಾ ವ್ಯಾಪ್ತಿಯ ಕೋಡಿಕಲ್ ವಿವೇಕಾನಂದ ನಗರ ಎಂಬಲ್ಲಿ ಮನೆಗೆ ನುಗ್ಗಿ ಕಳ್ಳರು 80 ಗ್ರಾಂನಷ್ಟು ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಕಳವುಗೈದ ಸುಮಾರು 4,64,750 ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೃತ್ಯಕ್ಕೆ ಬಳಸಿದ

ಮಂಗಳೂರು: ಮೂವರು ಮನೆಗಳ್ಳರ ಬಂಧನ 4.64 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20. ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಆರೋಪಿಗಳನ್ನು ಮಂಗಳೂರು ಬಲ್ಮಠದ ಆರ್ಯ ಸಮಾಜ ರಸ್ತೆ, ಸನ್ಯಾಸಿಗುಡ್ಡೆಯ ನಿವಾಸಿ ನೌಫಾಲ್ (38), ಕುಪ್ಪೆಪದವಿನ ಕಿಲೆಂಜಾರು ಗ್ರಾಮದ ನಿವಾಸಿ ಹಂಝು(59) ಹಾಗೂ ಬಂಡಿಹೊಳೆ ಗ್ರಾಮದ ನಿವಾಸಿ ಸುದಾರ್ಶನ್ (25) ಎಂದು ಗುರುತಿಸಲಾಗಿದೆ. ಬಜಪೆ ಪೊಲೀಸ್ ನಿರೀಕ್ಷಕರಾದ ಸಂದೀಪ್ ಜಿ.ಎಸ್ ಅವರ ತಂಡ ಆರೋಪಿಗಳನ್ನು ಪತ್ತೆಹಚ್ಚಿದ್ದು, ಆರೋಪಿಗಳ ವಿರುದ್ದ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು: ಗಾಂಜಾ ಸೇವನೆ…! ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.11. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 05. ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ. 20ರಷ್ಟು, ಮತ್ತೊಬ್ಬಳಿಗೆ ಶೇ. 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ.

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ Read More »

ಕರಾವಳಿ, ಕರ್ನಾಟಕ

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಮಾ. 01. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top