crime

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ […]

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 24. ಮುಂಬೈಯಲ್ಲಿ ನಡೆದ ಅಪಘಾತದಲ್ಲಿ ಕಾಸರಗೋಡು ಮೂಲದ ಕಯ್ಯಾರ್ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಯ್ಯಾರ್ ಚನ್ನಿಕುಡೇಲ್ ನ ರೂಬನ್ ಚಾರ್ಲ್ಸ್ ಕ್ರಾಸ್ತ (39) ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಉದ್ಯಮ ನಡೆಸುತ್ತಿದ್ದ ಇವರು, ಶುಕ್ರವಾರದಂದು ಸಂಜೆ ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ರೂಬನ್ ನನ್ನು ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಅದಾಗಲೇ ಮೃತಪಟ್ಟಿದ್ದಾರೆ.

ಮುಂಬೈಯಲ್ಲಿ ರಸ್ತೆ ಅಪಘಾತ – ಕಾಸರಗೋಡು ಕಯ್ಯಾರ್ ನಿವಾಸಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 24. ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಎಂದು ಗುರುತಿಸಲಾಗಿದೆ. ಈತ ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಂದಿಗೆ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು

ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 24. ಬೆಂಕಿ ಬಿದ್ದ ಪರಿಣಾಮ ನಾಲ್ವರು ಬಾಲಕಿಯರು ಸಜೀವ ದಹನಗೊಂಡ ದಾರುಣ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಅಗ್ನಿ ಅವಘಡದಲ್ಲಿ ಪ್ರಿಯಾಂಶಿ, ಮಾನ್ವಿ ಮತ್ತು ನೈನಾ ಎಂದು ಗುರುತಿಸಲಾಗಿದೆ. ಇನ್ನು ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನೀತು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಗುಡಿಸಲಿಗೆ ಬೆಂಕಿ – ನಾಲ್ವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

(ನ್ಯೂಸ್ ಕಡಬ) newskadaba.com ಹೈದರಾಬಾದ್‌ ಫೆ. 23: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 23. ದುಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವತಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವತಿಯನ್ನು ಕೋಟೆಕಾರು ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ಎಂದು ಗುರುತಿಸಲಾಗಿದೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು ಮತ್ತು ವಿಠಲ್ ಕುಲಾಲ್ ಕೆಂಪುಮಣ್ಣು ಅವರ ಏಕೈಕ ಪುತ್ರಿ ವಿದಿಶಾ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕಾರ್ಯ ನಿರ್ವಹಿಸಿದ್ದರು.

ದುಬೈ: ರಸ್ತೆ ಅಪಘಾತ- ಮಂಗಳೂರಿನ ಯುವತಿ ಮೃತ್ಯು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಾಯಂಡಹಳ್ಳಿ ಸಮೀಪದ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಫೆ. 23. ಮನೆಗೆ ಬಂದ ಇಬ್ಬರು ಅಪರಿಚಿತರು ಮಹಿಳೆಯರು ಮನೆಯಲ್ಲಿದ್ದ 1 ವರ್ಷದ ಮಗುವನ್ನು ಅಪಹರಿಸಲು ಯತ್ನಿಸಿರುವ ಘಟನೆ ಬ್ರಹ್ಮಾವರದ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಉಪ್ಪಿನಕೋಟೆಯ ಮಹಿಮಾ ಎಂಬವರ ಮನೆಗೆ ಬಂದ ಇಬ್ಬರು ಅಪರಿಚಿತ ಹೆಂಗಸರು ತಾವು ಬಾಂಬೆಯಿಂದ ಬಂದಿರುವುದಾಗಿ ತಿಳಿಸಿದ್ದಲ್ಲದೇ, ಮನೆಯೊಳಗೆ ಹೋಗಿ ಮಹಿಮಾ ಅವರ 1 ವರ್ಷದ ಹೆಣ್ಣು ಮಗುವನ್ನು ಎತ್ತಿಕೊಂಡು ಮೊಬೈಲಿನಲ್ಲಿರುವ ವಿಡಿಯೋಗಳನ್ನು ತೋರಿಸುತ್ತಾ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಕೂಡಲೇ ಮಹಿಮಾ ಅವರು

ಮಹಿಳೆಯರಿಬ್ಬರಿಂದ ಮಗು ಅಪಹರಣಕ್ಕೆ ಯತ್ನ..! Read More »

ಕರಾವಳಿ, ಕರ್ನಾಟಕ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬಜ್ಪೆ, ಫೆ. 23. ನಾಲ್ಕು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿ, ಕಳವುಗೈದಿದ್ದ ನಗದು, ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬಜ್ಪೆಯಿಂದ ವರದಿಯಾಗಿದೆ. ಬಂಧಿತನನ್ನು ಪ್ರತಾಪ್ ಎಂದು ಗುರುತಿಸಲಾಗಿದೆ. ಈತನಿಂದ 10 ಸಾವಿರ ರೂ. ನಗದು, ಸುಮಾರು 1 ಲಕ್ಷ ರೂ. ಮೌಲ್ಯದ 4 ಗೋಣಿ ಸುಲಿದ ಅಡಿಕೆ, ಸುಮಾರು 2 ಲಕ್ಷ ರೂ. ಮೌಲ್ಯದ ಆಟೋ ರಿಕ್ಷಾ ಮತ್ತು ಇತರ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಫೆ. 13ರಂದು ಮಿತ್ತಕೊಳಪಿಲದ

ಕಳ್ಳತನ ಪ್ರಕರಣ- ಸೊತ್ತು ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top