crime

ಯುವತಿ ಕಾಣೆ- ಪತ್ತೆಗೆ ಕೋರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ನಗರದ ಅಭಿಮಾನ್ ಮ್ಯಾನ್ಷನ್ ಫ್ಲ್ಯಾಟ್ ನಲ್ಲಿ ವಾಸವಾಗಿದ್ದ ಆಸ್ಟಿಯ ಸಮ್ರೀನ್ (22) ಎಂಬಾಕೆ ಅ. 01 ರಂದು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿವೆ:- ಎತ್ತರ 5.2 ಅಡಿ, ಬಿಳಿ ಮೈ ಬಣ್ಣ, ಸಾಧಾರಣ ಮೈಕಟ್ಟು, ಕಾಣೆಯಾಗುವಾಗ ಹಸಿರು ಬಣ್ಣದ ಚೂಡಿದಾರ ಟಾಪ್, ತಿಳಿ ಗ್ರೇ ಬಣ್ಣದ ಪ್ಯಾಂಟ್ ಶಾಲು ಹಾಕಿರುತ್ತಾರೆ. ಹಿಂದಿ, ಉರ್ದು, ಕನ್ನಡ ಮತ್ತು ಇಂಗ್ಲೀಷ್ ಭಾಷೆ […]

ಯುವತಿ ಕಾಣೆ- ಪತ್ತೆಗೆ ಕೋರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್‌ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಅ. 04. ಚಿಕ್ಕ ಮಕ್ಕಳಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಷ್ಠಿತ ಹೋಟೆಲ್ ಒಂದರ ಕುಕ್ ನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಹೊಸೂರ ಬಳಿ ಇರುವ ಪ್ರತಿಷ್ಠಿತ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಒಡಿಶಾ ಮೂಲದ ಕುಕ್​, ಅಪ್ರಾಪ್ತ ಮಕ್ಕಳಿಗೆ ಚಾಕೊಲೇಟ್​ ಹಾಗೂ ಹಣದ ಆಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಮಕ್ಕಳನ್ನು ಬೆತ್ತಲೆಗೊಳಿಸಿ, ತಾನೇ ವಿಡಿಯೋ ಮಾಡಿ ಹಣಕ್ಕೆ

ಮಕ್ಕಳಿಗೆ ಹಣದಾಸೆ ಮೂಡಿಸಿ ಲೈಂಗಿಕ ದೌರ್ಜನ್ಯ ಆರೋಪ – ಹೋಟೆಲ್ ಕುಕ್ ಅರೆಸ್ಟ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, 02. ಕೊಲೆ ಪ್ರಕರಣದ ಆರೋಪಿಯೋರ್ವನನ್ನು ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಮೃತದೇಹವನ್ನು ಪೊದೆಗೆ ಎಸೆದಿರುವ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೃತನನ್ನು ಕುಂಬಳೆ ಶಾಂತಿ ಪಳ್ಳದ ಅಬ್ದುಲ್ ರಶೀದ್ (38) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ಕುಂಬಳೆಯಿಂದ ಸ್ವಲ್ಪ ದೂರದ ಪೊದೆಯೊಂದರಲ್ಲಿ ಇಂದು ಬೆಳಿಗ್ಗೆ  ಪತ್ತೆಯಾಗಿದೆ. ಈತ ಮಧೂರು ಪಟ್ಲದ ಶಾನ್ ವಾಜ್ ( 24) ಕೊಲೆ ಪ್ರಕರಣದ ಆರೋಪಿಯಾಗಿದ್ದ ಎನ್ನಲಾಗಿದೆ. ಇಂದು ಬೆಳಿಗ್ಗೆ ಮೈದಾನಕ್ಕೆ ಆಟವಾಡಲು ಬಂದಿದ್ದ ಮಕ್ಕಳು ಮೈದಾನದಲ್ಲಿ

ಕೊಲೆ ಪ್ರಕರಣದ ಆರೋಪಿಯ ಹತ್ಯೆ – ಮೃತದೇಹ ಪೊದೆಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಅ. 02. ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್(42) ಅವರು ಸೋಮವಾರದಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರದಂದು ಸಂಜೆ 7 ಗಂಟೆ ಸುಮಾರಿಗೆ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿಯೆದುರು ರಾಘವೇಂದ್ರ ಅವರು ತನ್ನ ಹೋಂಡಾ ಸಿಟಿ ಕಾರಿನಲ್ಲಿ ಬಂದಿದ್ದು ಇದೇ ಸಂದರ್ಭ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೋರ್ವ ತಗಾದೆ

ಚೂರಿ ಇರಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು- ಆರೋಪಿಗಾಗಿ ಶೋಧಕಾರ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 02. ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲ್.ಐಸಿ ಏಜೆಂಟ್ ನಾರಾಯಣ ಕುಲಾಲ್ ಎಂದು ಗುರುತಿಸಲಾಗಿದೆ. ಸೋಮವಾರದಂದು ಮುಂಜಾನೆ 5 ಗಂಟೆಯ ವೇಳೆಗೆ ಪರ್ಲೊಟ್ಟು ಎಂಬಲ್ಲಿ ಕೆರೆಯೊಂದರ ಬಳಿ ಬೈಕ್, ಮೊಬೈಲ್ ಹಾಗೂ ಚಪ್ಪಲಿಯನ್ನು ನೋಡಿದ ಸ್ಥಳೀಯರು ಯಾರೋ

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 01. ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿ ಗುರುತಿಸಿಕೊಂಡಿರುವ ನಟ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಮೃತಪಟ್ಟಿರುವ ಘಟನೆ ಶನಿವಾರದಂದು ತಡರಾತ್ರಿ ಕೋಣನಕುಂಟೆ ಕ್ರಾಸ್​ ಬಳಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮಾ​ ಎಸ್​( 48) ಎಂದು ಗುರುತಿಸಲಾಗಿದೆ. ಪ್ರೇಮಾ ದಂಪತಿಯು ಫುಟ್​ ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ನಾಗಭೂಷಣ್​ ಅವರ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಪ್ರೇಮಾ ಮೃತಪಟ್ಟರೆ, ಅವರ ಪತಿ ಕೃಷ್ಣ ಬಿ.

ನಟ ನಾಗಭೂಷಣ್ ಅವರ ಕಾರು ಢಿಕ್ಕಿ- ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 29. ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಕಿರುಕುಳ ನೀಡಿದ ಪ್ರಕರಣದಡಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೇ ಇತ್ತೀಚೆಗೆ ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದೂ ಬೆದರಿಸಿರುವುದಾಗಿ ಆರೋಪಿಸಲಾಗಿದೆ. ಇದರಿಂದ ಭಯಗೊಂಡ

ಶಾಲಾ ವಿದ್ಯಾರ್ಥಿನಿಗೆ ಕಿರುಕುಳ – ಯುವಕನ ವಿರುದ್ದ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ. 28. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರದಂದು ರಾತ್ರಿ ಸಂಭವಿಸಿದೆ. ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52) ಎಂದು ಗುರುತಿಸಲಾಗಿದೆ. ಇವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಸಮೀಪ ಏಕಾಏಕಿ ಪ್ರತ್ಯಕ್ಷಗೊಂಡ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಗಂಭೀರ ಗಾಯಗೊಂಡ ಚೋಮರವರನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ

ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top