crime

ಹೃದಯಾಘಾತ- ಎಎಸ್ಐ ವಿಧಿವಶ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಹೃದಯಘಾತದಿಂದ ಪೊಲೀಸ್‌ ಅಧಿಕಾರಿಯೋರ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಕಳಸ ಠಾಣೆಯ ಎಎಸ್‌ಐ ಜಿ.ಕೆ ಮುರಳೀಧರ್ ಎಂದು ಗುರುತಿಸಲಾಗಿದೆ. ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದು, ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹೃದಯಾಘಾತ- ಎಎಸ್ಐ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ನಂಬಿಸಿ ಕೋಟ್ಯಂತರ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಚೈತ್ರಾ ಸೇರಿ 7 ಮಂದಿ ಆರೋಪಿಗಳನ್ನು ಅ. 06ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೂರನೆ ಎಸಿಎಂಎಂ ನ್ಯಾಯಾಲಯವು ಶನಿವಾರದಂದು ಆದೇಶ ಹೊರಡಿಸಿದೆ. ಚೈತ್ರಾ ಜೊತೆಗೆ ಉಳಿದ ಆರೋಪಿಗಳಾದ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನಾನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ ಏಳು ಮಂದಿಯನ್ನೂ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು, ಇದರ ಬೆನ್ನಲ್ಲೇ ಚೈತ್ರಾ ಮತ್ತು

ಉದ್ಯಮಿಗೆ ವಂಚನೆ ಪ್ರಕರಣ – ಚೈತ್ರಾ ಸೇರಿ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಕಾರು ಢಿಕ್ಕಿಯಾಗಿ ಐದು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ. ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಯುಕೆಜಿ ವಿದ್ಯಾರ್ಥಿ ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ. ಮಹಮ್ಮದ್ ಆದಿಲ್ ಶನಿವಾರದಂದು ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ

ಕಾರು ಢಿಕ್ಕಿ: ಐದರ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸೆಂಟ್ರಲ್ ರೈಲು ನಿಲ್ದಾಣದಲ್ಲಿ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಎಕ್ಸ್‌ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮವಾಗಿ ಸುಮಾರು 30 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟಿರುವುದಾಗಿ ಸ್ಟೇಷನ್ ಮಾಸ್ಟರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಅಬುಧಾಬಿಯಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ ಟಾಪ್ ಮತ್ತು ಕ್ರೆಡಿಟ್ ಕಾರ್ಡ್ ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕುರಿತು ಸೆ. 17ರಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಯಾಣಿಕರು ನೀಡಿದ ಮಾಹಿತಿಯ ಆಧಾರದ ಮೇಲೆ ಬ್ಯಾಗೇಜ್ ಬೆಲ್ಟ್ ನಿಂದ ಲಗೇಜ್ ನ್ನು

ಏರ್ಪೋರ್ಟ್ ನಲ್ಲಿ 30 ಐಫೋನ್ ಹಾಗೂ 28 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ

(ನ್ಯೂಸ್ ಕಡಬ) newskadaba.com ಕೋಲ್ಕತಾ, ಸೆ. 22. ಪಶ್ಚಿಮಬಂಗಾಳದ ದಕ್ಷಿಣ ದಿನಜ್‌ಪುರ ಜಿಲ್ಲೆಯ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್ ಅಧಿಕಾರಿಗಳು ಟ್ರಕ್ ನಲ್ಲಿದ್ದ 12 ಕೋ. ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡ ಕುರಿತು ವರದಿಯಾಗಿದೆ. ಖಚಿತ ಮಾಹಿತಿ ದೊರೆತ ಹಿನ್ನೆಲೆ ಗಡಿ ಭದ್ರತಾ ಪಡೆಯ ಬೆಟಾಲಿಯನ್‌ಗಳು ಹಾಗೂ ಕಸ್ಟಮ್ ಅಧಿಕಾರಿಗಳು ಜಂಟಿಯಾಗಿ, ನಿಲ್ಲಿಸಿದ್ದ ಟ್ರಕ್‌ ನಲ್ಲಿ ಕಾರ್ಯಾಚರಣೆ ನಡೆಸಿದವು. ಕಾರ್ಯಾಚರಣೆಯ ವೇಳೆ ಟ್ರಕ್ ಚಾಲಕನ ಕ್ಯಾಬಿನ್‌ನಲ್ಲಿ ಪ್ಲಾಸ್ಟಿಕ್ ನ ಕಪ್ಪು ಕೈ ಚೀಲವೊಂದು ಪತ್ತೆಯಾಗಿದ್ದು, ಈ

ಟ್ರಕ್ ನಲ್ಲಿ 12 ಕೋ.ರೂ. ಮೌಲ್ಯದ ಮಾದಕ ವಸ್ತು ಸಾಗಾಟ – ಬಿಎಸ್‌ಎಫ್‌ನಿಂದ ಭರ್ಜರಿ ಬೇಟೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್

ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ,

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಮನೆಯ ಕೋಣೆಯಲ್ಲಿ ಮಲಗಿದ್ದ ಯುವತಿಗೆ ಕೋಣೆಯ ಕಿಟಕಿ ಬಾಗಿಲು ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ತಾಲೂಕಿನ ಕಲ್ಲಡ್ಕ ಸಮೀಫದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ವಿಶ್ವನಾಥ ಎಂದು ಗುರುತಿಸಲಾಗಿದೆ. ದೂರುದಾರರ ಪ್ರಕಾರ, ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ವಿಶ್ವನಾಥ ಇಣುಕಿ ನೋಡುತ್ತಿದ್ದ. ಈತ

ರೂಮಿನಲ್ಲಿ ಮಲಗಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳಕ್ಕೆ ಯತ್ನ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top