crime

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ

(ನ್ಯೂಸ್ ಕಡಬ) newskadaba.com ಲಕ್ನೋ, ಸೆ. 22. ಮಹಿಳಾ ಪೊಲೀಸ್‌ ಪೇದೆಯೊಬ್ಬರ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಎನ್‌ಕೌಂಟರ್‌ ಮೂಲಕ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ. ಹತ್ಯೆಗೊಳಗಾದವನನ್ನು ಅನೀಶ್‌ ಖಾನ್‌ ಎಂದು ಗುರುತಿಸಲಾಗಿದೆ. ಅಲ್ಲದೇ ಎನ್‌ಕೌಂಟರ್‌ನಲ್ಲಿ ಅನೀಸ್‌ನ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಲ್ ಕೂಡ ಗಾಯಗೊಂಡಿದ್ದಾರೆ. ಈ ಮೂವರು ಮಹಿಳಾ ಪೇದೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಸೊರಾನ್‌ನ ಭದ್ರಿ ಗ್ರಾಮದಲ್ಲಿ ನೆಲೆಸಿರುವ ಹೆಡ್ […]

ಮಹಿಳಾ ಕಾನ್ಸ್ಟೇಬಲ್ ಗೆ ಹಲ್ಲೆ- ಆರೋಪಿ ಎನ್ ಕೌಂಟರ್ ಗೆ ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದಿದ್ದು, ಚಾಲಕ ಮತ್ತು ಕ್ಲೀನರ್ ಇಬ್ಬರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ ಮುಂಜಾನೆ ದಾಸಕೋಡಿ ಎಂಬಲ್ಲಿ ನಡೆದಿದೆ. ಗಾಯಳುಗಳನ್ನು ಆರಿಫ್ ಮತ್ತು ರಿಯಾಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಇದ್ದಿಲು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯು ಚರಂಡಿಗೆ ಬಿದ್ದಿದ್ದು, ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ.

ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ – ಚಾಲಕ, ಕ್ಲೀನರ್ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಇಲ್ಲಿನ ನೆಕ್ಕಿಲಾಡಿಯಲ್ಲಿ ಕಾರ್ಯಾಚರಿಸುತ್ತಿದ್ದ ರೈಟ್ ಚಾಯ್ಸ್ ಪೆಟ್ರೋಲ್ ಪಂಪ್‌ನಲ್ಲಿ ಸೆ.16ರ ಮಧ್ಯರಾತ್ರಿಯ ವೇಳೆ ಕಳ್ಳತನವಾಗಿರುವ ಕುರಿತು ಸಿಸಿಟಿವಿ ದೃಶ್ಯದ ಮೂಲಕ ಬೆಳಕಿಗೆ ಬಂದಿದೆ. ಕಳ್ಳನೋರ್ವ ಗ್ಲಾಸ್ ಡೋರ್‌ನ ಲಾಕ್ ಪುಡಿಗೈದು ಒಳಬಂದು ಕ್ಯಾಶ್ ಡ್ರಾವರ್‌ನಲ್ಲಿದ್ದ 30 ಸಾವಿರ ರೂ. ನಗದನ್ನು ಕಳವು ಮಾಡಿದ್ದು, ರೈನ್‌ಕೋಟ್, ಹೆಲ್ಮೆಟ್ ಧರಿಸಿ ಬಂದ ಕಳ್ಳ ಟಾರ್ಚ್ ಹಿಡಿದು ಕ್ಯಾಬಿನ್ ಜಾಲಾಡುವ ದೃಶ್ಯ ಸೆರೆಯಾಗಿದೆ. ಈ ಕುರಿತು ಪೆಟ್ರೋಲ್‌ ಬಂಕ್‌ ಮಾಲಕ ನವಾಝ್ ಎಂಬವರು

ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ನಲ್ಲಿ ಕಳ್ಳತನ- 30 ಸಾವಿರ ರೂ. ಕಳವು- ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 21. ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಮರದ ದಿಮ್ಮಿಗಳನ್ನು ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಆರೋಪಿಯನ್ನು ಲಾರಿ ಸಹಿತ ವಶಕ್ಕೆ ತೆಗೆದುಕೊಂಡ ಘಟನೆ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸಕಲೇಶಪುರದ ಆನಂಗಿ ಮನೆ ನಿವಾಸಿ ರಜಾಕ್‌ ಬಿನ್‌ ಅಬ್ಬಾಸ್‌ ಎಂದು ಗುರುತಿಸಲಾಗಿದೆ. ಆರೋಪಿ ಸಹಿತ ಲಾರಿಯಲ್ಲಿ ಸಾಗಿಸುತ್ತಿದ್ದ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಸಂದೀಪ್‌ ಸಿ.ಕೆ., ರಾವುತ್ತಪ್ಪ ಬಿರಾದಾರ್‌, ರಾಜೇಶ್‌ ಮತ್ತು

ಅಕ್ರಮ ಮರದ ದಿಮ್ಮಿ ಸಾಗಾಟ – ಲಾರಿ, ಮರದ ದಿಮ್ಮಿ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೌನ್‌ ಬನೇಗಾ ಕರೋಡ್‌ ಪತಿಯಲ್ಲಿ 25 ಲಕ್ಷ ರೂ. ಗೆದ್ದಿರುವುದಾಗಿ ಹೇಳಿ ಮಹಿಳೆಗೆ 12.93 ಲಕ್ಷ ರೂ. ವಂಚಿಸಿದ ಕುರಿತು ಪುತ್ತೂರಿನಿಂದ ವರದಿಯಾಗಿದೆ. ಪುತ್ತೂರು ನಿವಾಸಿ ಝೀನತ್‌ ಬಾನು ಎಂಬವರಿಗೆ 2022ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೋರ್ವ ವಾಟ್ಸಾಪ್ ಮೂಲಕ ಕರೆ ಮಾಡಿ ತಾನು ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನೀವು 25 ಲಕ್ಷ ರೂ. ಲಾಟರಿ ಗೆದ್ದಿರುವುದಾಗಿ ತಿಳಿಸಿದ್ದಾನೆ. ಅನಂತರ ಆ

ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದರೋಡೆ ಮಾಡಿರುವ ಘಟನೆ ತಾಲೂಕಿನ ಹಳೆಗೇಟು ಬಳಿ‌ ನಡೆದಿದೆ. ಹಲ್ಲೆಗೊಳಗಾದವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾರುಗುಂದ ಗ್ರಾಮದ ನಿವಾಸಿ ದರ್ಶನ್‌ ‌ಎಂದು ಗುರುತಿಸಲಾಗಿದೆ. ದರ್ಶನ್ ವೈಯಕ್ತಿಕ ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದು, ಮಂಗಳವಾರ ರಾತ್ರಿ 11.15ರ ಸುಮಾರಿಗೆ ಸುಳ್ಯ ಬಸ್ಸು ನಿಲ್ದಾಣಕ್ಕೆ ತೆರಳುವ ಉದ್ದೇಶದಿಂದ ಸುಳ್ಯ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿ ರಸ್ತೆ ಬದಿ ಬಾಡಿಗೆ

ಸುಳ್ಯ: ವ್ಯಕ್ತಿಯ ಮೇಲೆ ತಂಡದಿಂದ ಹಲ್ಲೆ- ನಗದು ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 20. ಶಾಲಾ ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೇ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬ್ಲ್ಯಾಕ್​ ಮೇಲ್ ಮಾಡಿರುವ ಆರೋಪಿಗಳು ಅಸೀಮ್ ಹಾಗೂ ಮಯೂರ್ ಎಂದು ಗುರುತಿಸಲಾಗಿದೆ. ಅಸೀಮ್ ಹಾಗೂ ಮಯೂರ್ ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ

ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಪೊಲೀಸ್ ಠಾಣೆಯ ಮೊರೆಹೋದ ಶಿಕ್ಷಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹೊಳೆನರಸೀಪುರ, ಸೆ. 20. ಮದ್ಯ ಸೇವನೆ ಸಂಬಂಧ ನಡೆದ ಪಂದ್ಯದಲ್ಲಿ ಓರ್ವ ಮೃತಪಟ್ಟ ಘಟನೆ ತಾಲೂಕಿನ ಸಿಗರನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಸಿಗರನಹಳ್ಳಿ ಗ್ರಾಮದ ಬಸ್‌ ನಿಲ್ದಾಣದಲ್ಲಿ ಕೃಷ್ಣೇಗೌಡ ಎಂಬವರು ನೀಡಿದ ಮದ್ಯವನ್ನು ದೇವರಾಜು ಹಾಗೂ ತಿಮ್ಮೇಗೌಡ ಎಂಬವರು ಅರ್ಧ ಗಂಟೆಯಲ್ಲಿ 90 ಎಂಎಲ್‌ನ 10 ಪ್ಯಾಕೆಟ್‌ ಕುಡಿಯುವುದಾಗಿ ಚಾಲೆಂಜ್‌ ಮಾಡಿದ್ದರು. ಅದರಂತೆ ತಿಮ್ಮೇಗೌಡರು 90 ಎಂಎಲ್‌ನ 10 ಪ್ಯಾಕೆಟ್‌ ಮದ್ಯ ಸೇವಿಸಿದ ಅರ್ಧ ಗಂಟೆ ಬಳಿಕ ರಕ್ತವಾಂತಿ ಮಾಡಿಕೊಂಡು

ಜೀವಕ್ಕೆ ಕುತ್ತು ತಂದ ಮದ್ಯ ಸೇವನೆ ಚಾಲೆಂಜ್ – ಸೇವಿಸಿದ ಅರ್ಧ ಗಂಟೆಯಲ್ಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top