crime

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 18. ಹಣವಾಗಿಟ್ಟು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದ ಘಟನೆ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ವಲಸರಿ ಎಂಬಲ್ಲಿ ನಡೆದಿದೆ. ಸ್ಥಳದಿಂದ ಎಂಟು ಮಂದಿಯ ಸಹಿತ ಒಟ್ಟು 2,350 ರೂ. ನಗದು, 4 ಕೋಳಿ, 2 ಕೋಳಿ ಬಾಲುಗಳು, ಒಂದು ಓಮ್ನಿ ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಕೋಳಿ ಅಂಕಕ್ಕೆ ಪೊಲೀಸ್ ದಾಳಿ- 8 ಮಂದಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಜಪೆ, ಸೆ. 18. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡ ಘಟನೆ ಗುರುಪುರ-ಬಂಗ್ಲೆಗುಡ್ಡೆ ಅಣೆಬಳಿಯ ಒಳ ರಸ್ತೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಎಂದು ಗುರುತಿಸಲಾಗಿದೆ. ಪ್ರೀತಿಯವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ(37), ಶೋಭಾ ಅವರ ಪುತ್ರ ಭವಿಷ್‌ (9) ಹಾಗೂ ಆಟೋ ಚಾಲಕ ಪದ್ಮನಾಭ

ವಿದ್ಯುತ್ ಕಂಬಕ್ಕೆ ಆಟೋ ರಿಕ್ಷಾ ಢಿಕ್ಕಿ – ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಹಳೆಯಂಗಡಿ ನಿವಾಸಿ ಮೊಹಮ್ಮದ್ ಶಾಹೀಲ್(20) ಮತ್ತು ಪಕ್ಷಿಕೆರೆಯ ಅರಾಫತ್(19) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಬಸ್, ಡಿವೈಡರ್ ಬಳಿ ರಸ್ತೆ ದಾಟಲು ಕಾಯುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ

ರಸ್ತೆ ದಾಟಲು ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ – ಯುವಕರಿಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಟೆಲಿಗ್ರಾಂ ನಲ್ಲಿ ಬಂದ ಆನ್‌ಲೈನ್‌ ಪಾರ್ಟ್‌ ಟೈಂ ಕೆಲಸದ ಸಂದೇಶವನ್ನು ನಂಬಿದ ವ್ಯಕ್ತಿಯೋರ್ವ 9,29,986 ರೂ. ಕಳೆದುಕೊಂಡಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಯಾರೋ ಅಪರಿಚಿತ ಟೆಲಿಗ್ರಾಂ ಮೂಲಕ ಪಾರ್ಟ್‌ ಟೈಂ ಆನ್‌ಲೈನ್‌ ಕೆಲಸದ ಬಗ್ಗೆ ಸಂದೇಶ ಕಳುಹಿಸಿದ್ದನು. ಸಂದೇಶವನ್ನು ನಂಬಿದ ದೂರುದಾರ ಲಿಂಕ್‌ ಮೂಲಕ ಟಾಸ್ಕ್ ಪೂರ್ಣಗೊಳಿಸಿದ್ದಾರೆ. ಅದಕ್ಕೆ 10 ಸಾವಿರ ರೂ. ಬೋನಸ್‌ ಲಭಿಸಿದ್ದು, ಅದರಲ್ಲಿ 1,044 ರೂ.ಗಳನ್ನು ತಮ್ಮ ಖಾತೆಗೆ ಹಿಂಪಡೆದಿದ್ದಾರೆ.

ದಕ್ಷಿಣ ಕನ್ನಡ: ಪಾರ್ಟ್ ಟೈಂ ಕೆಲಸ ಕೊಡುವುದಾಗಿ 9.29 ಲಕ್ಷ ರೂ. ವಂಚನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ

(ನ್ಯೂಸ್ ಕಡಬ) newskadaba.com ಬ್ರೆಜಿಲ್, ಸೆ. 17. ವಿಮಾನ ಪತನವಾಗಿ ಇಬ್ಬರು ಸಿಬ್ಬಂದಿಗಳು ಸೇರಿದಂತೆ ಒಟ್ಟು 14 ಮಂದಿ ಮೃತಪಟ್ಟಿರುವ ಘಟನೆ ಬ್ರೆಜಿಲ್‌ನ ಉತ್ತರ ಅಮೆಜಾನ್ ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿ.ಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಸಂಭವಿಸಿದ ಕುರಿತು ಪತ್ರಿಕೆಯೊಂದು ವರದಿ ಮಾಡಿದೆ. ರನ್‌ ವೇಯಿಂದ ಹೊರಟ ವಿಮಾನ ಮಳೆಯ ಕಾರಣದಿಂದ ಮಾರ್ಗ ಸರಿಯಾಗಿ ಗೋಚರಿಸದೇ ಇದ್ದಾಗ ಲ್ಯಾಂಡ್‌ ಆಗಲು ಪ್ರಯತ್ನಿಸಿದೆ. ಆದರೆ ಈ ವೇಳೆ ನಿಯಂತ್ರಣ ಕಳೆದುಕೊಂಡ ವಿಮಾನ ಅರಣ್ಯ

ವಿಮಾನ ಪತನ- ಪ್ರವಾಣಿ ತಾಣಕ್ಕೆ ತೆರಳಿದ್ದ 14 ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ

(ನ್ಯೂಸ್ ಕಡಬ) newskadaba.com ಕುಣಿಗಲ್, ಸೆ. 16. ಲಾರಿಗೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ಹೇರೂರು ಸೇತುವೆ ಬಳಿ ಶುಕ್ರವಾರದಂದು ರಾತ್ರಿ ನಡೆದಿದೆ. ಮೃತಪಟ್ಟವರನ್ನು ನಾಗಮಂಗಲ ತಾಲೂಕು ಸೀಗೇಹಳ್ಳಿ ಗ್ರಾಮ ಹಾಲಿ ಬೆಂಗಳೂರು ಮಾದನಾಯಕಹಳ್ಳಿ ನಿವಾಸಿ ಶೋಭಾ ಮತ್ತು ಮಗ ನಿಖಿಲ್ ಗೌಡ(12) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಪತಿ ಗಂಗೇಶ್ ಹಾಗೂ ಮಗಳು ಭುವನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೀಕರ ಅಪಘಾತ- ತಾಯಿ ಮಗ ಮೃತ್ಯು..! ತಂದೆ- ಮಗಳು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 16. ಹೋಟೆಲ್‌ ರೂಮ್‌ ಒಂದರಲ್ಲಿ ಖಾಸಗಿ ವಿಡಿಯೋ ಸೆರೆಹಿಡಿದು 1 ಲಕ್ಷ ರೂ. ನೀಡುವಂತೆ ಎಂಬಿಎ ವಿದ್ಯಾರ್ಥಿನಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಚಂದ್ರಾ ಲೇಔಟ್‌ ಠಾಣಾ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನ ನಯನಾ ಹಾಗೂ ಕಿರಣ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಸೇರಿಕೊಂಡು ಹೋಟೆಲ್‌ ಪ್ರಾರಂಭಿಸಿದ್ದರು. ಈ ಹೋಟೆಲ್ ಎಂಬಿಎ ವಿದ್ಯಾರ್ಥಿನಿಯೋರ್ವಳು ತನ್ನ ಪ್ರಿಯಕರನ ಜತೆಗೆ ಆಗಾಗ ಬಂದು ರೂಮ್‌ ಪಡೆಯುತ್ತಿದ್ದಳು. ಇದನ್ನೇ ಉಪಯೋಗಿಸಿಕೊಂಡ ನಯನಾ ಹಾಗೂ

ಖಾಸಗಿ ದೃಶ್ಯ ಸೆರೆ ಹಿಡಿದು ವೈರಲ್ ಮಾಡೋದಾಗಿ ಬೆದರಿಕೆ- ಇಬ್ಬರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಚಾರ್ಮಾಡಿ, ಸೆ. 16. ಮಳೆಯಿಂದಾಗಿ ಮಂಜು ಆವರಿಸಿಕೊಂಡಿದ್ದ ಪರಿಣಾಮ ಲಾರಿಯೊಂದು ನೂರು ಅಡಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನಡೆದಿದೆ. ನೀರಿನ ಬಾಟಲ್ ಗಳನ್ನು ತುಂಬಿದ್ದ ಲಾರಿ ಶುಕ್ರವಾರದಂದು ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ವೇಳೆ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ದಾರಿ ಕಾಣದೇ ರಸ್ತೆ ತಡೆಗೋಡೆಗೆ ಢಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ದೈತ್ಯ ಮರಕ್ಕೆ ಲಾರಿ ಸಿಲುಕಿಕೊಂಡ

ಚಾರ್ಮಾಡಿ ಘಾಟ್ ನಲ್ಲಿ 100 ಅಡಿ ಪ್ರಪಾತಕ್ಕೆ ಉರುಳಿದ ಲಾರಿ- ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 15. ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ತಡರಾತ್ರಿ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೇಘಾ(24) ಹಾಗೂ ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತ ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read More »

ಕರ್ನಾಟಕ
Scroll to Top